ಉಡುಪಿ ಜಿಲ್ಲಾ ಪಂಚಾಯಿತಿ, ತೋಟಗಾರಿಕಾ ಇಲಾಖೆ ಹಾಗೂ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಮಾರ್ಗದರ್ಶನದಲ್ಲಿ ಸಾಧನೆ ಸಾದ್ಯವಾಗಿದ್ದು, ಕೃಷಿ ವಿಜ್ಞಾನ ಕೇಂದ್ರದ ಪ್ರಶಸ್ತಿಗೆ ಸಂಸ್ಥೆಯನ್ನು ನೋಂದಣಿ ಮಾಡಿತ್ತು. ರಾಷ್ಟ್ರಮಟ್ಟದಲ್ಲಿ ‘ಉಕಾಸ’ ಸಂಸ್ಥೆಯನ್ನು ಗುರುತಿಸಿ, ಪ್ರಶಸ್ತಿ ನೀಡಿರುವುದು ಈ ಭಾಗದ ತೆಂಗು ಬೆಳೆಗಾರರಲ್ಲಿ ಹೆಚ್ಚಿನ ಹುಮ್ಮಸ್ಸ ತುಂಬಿದಂತಾಗಿದೆ. ಮುಂದೆ ಕಲ್ಪರಸ ಹಾಗೂ ಅದರ ಉಪ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಕೂಡ ಲಭಿಸಲಿದೆ ಎಂದು ಕಂಪೆನಿ ತಿಳಿಸಿದೆ.