<p><strong>ಉಡುಪಿ</strong>: ಯುವಜನಾಂಗದಲ್ಲಿ ಅಭಿವೃದ್ಧಿಯ ತುಡಿತ, ಉದಾರತೆ ಹಾಗೂ ಸಹಾನುಭೂತಿ ಗುಣಗಳು ಭವಿಷ್ಯದಲ್ಲಿ ಉತ್ತಮ ನಾಯಕರನ್ನು ಸೃಷ್ಟಿಸಲಿದೆ ಎಂದು ಮಾಹೆ ಅಧ್ಯಕ್ಷ ಡಾ.ರಂಜನ್ ಆರ್.ಪೈ ಅಭಿಪ್ರಾಯಪಟ್ಟರು.</p>.<p>ಡಾ.ರಾಮದಾಸ್ ಎಂ.ಪೈಗಳ 87ನೇ ಜನ್ಮದಿನದ ಅಂಗವಾಗಿ ಮಣಿಪಾಲದ ಮಾಹೆ ವತಿಯಿಂದ ಹಮ್ಮಿಕೊಂಡಿದ್ದ ‘ಸಮಾಜದ ಬದಲಾವಣೆಯಲ್ಲಿ ಯುವಶಕ್ತಿಯ ಪಾತ್ರ’ ಕುರಿತ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಮಾಜವನ್ನು ಬದಲಿಸುವಂತಹ ಶಕ್ತಿ, ಯೋಚನೆ ಹಾಗೂ ಯೋಜನೆಯನ್ನು ಹೊಂದಿರುವ ದೇಶದ ಪ್ರತಿಭಾವಂತ ಯುವಶಕ್ತಿ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿರುವುದು ಶ್ಲಾಘನೀಯ. ಸಮ್ಮೇಳನ ಭವಿಷ್ಯದ ಕನಸುಗಳ ಸಾಕಾರಕ್ಕೆ ವೇದಿಕೆಯಾಗಲಿ ಎಂದು ಆಶಿಸಿದರು.</p>.<p>ಮಾಹೆ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಮಾತನಾಡಿ, ಮಾಹೆ ಪ್ರತಿವರ್ಷ ದಾನದ ಮಹತ್ವ ಹಾಗೂ ಶ್ರೇಷ್ಠತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸುವ ದೃಷ್ಟಿಯಿಂದ ಕಳೆದ 10 ವರ್ಷಗಳಿಂದ ಅ.2ರಿಂದ8ರವರೆಗೆ ದಾನ ಉತ್ಸವ ಪಾಕ್ಷಿಕ ಆಯೋಜಿಸಿಕೊಂಡು ಬರುತ್ತಿದೆ. ದಾನ ಉತ್ಸವದಂತಹ ಕಾರ್ಯಕ್ರಮಗಳು ಸಾಮಾಜಿಕ ಬದಲಾವಣೆಗಳಿಗೆ ಸಹಕಾರಿಯಾಗಿದೆ ಎಂದರು.</p>.<p>ಮಾಹೆ ಕುಲಪತಿ ಡಾ.ಎಂ.ಡಿ.ವೆಂಕಟೇಶ್ ಮಾತನಾಡಿ, ಭಾರತ ಅತಿ ಹೆಚ್ಚು ಯುವಶಕ್ತಿಯನ್ನು ಹೊಂದಿದ್ದು, ಯುವಜನತೆ ಸಮಾಜದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವಂತಹ ಶಕ್ತಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಸ್ವಯಂಪ್ರೇರಿತರಾಗಿ ಸಾಮಾಜಿಕ ಬದಲಾವಣೆಯಲ್ಲಿ ತೊಡಗಿಸಿಕೊಳ್ಳಲು ಯುವಶಕ್ತಿಗೆ ಮಾಹೆ ಪ್ರೋತ್ಸಾಹ ಹಾಗೂ ಪ್ರೇರಣೆ ನೀಡುತ್ತಿದೆ ಎಂದರು.</p>.<p>ವಿದ್ಯಾರ್ಥಿಗಳ ಒಳಗೊಳ್ಳುವಿಕೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನವನ್ನು ಯಶಸ್ವಿಯಾಗಿ ಮಾಡಲಾಗುತ್ತಿದೆ ಎಂದು ಡಾ.ಎಂ.ಡಿ.ವೆಂಕಟೇಶ್ ಹೇಳಿದರು.</p>.<p>ಸಮಾಜಿಕ ಬದಲಾವಣೆ ವಿಚಾರವಾಗಿ 14 ವಿಷಯ ಮಂಡನೆ ನಡೆಯಿತು. 30 ತಂಡಗಳು ಭಾಗವಹಿಸಿದ್ದವು. ದ ಮಣಿಪಾಲ್ ಸೇವಾ ಮೇಳದಲ್ಲಿ 20 ಎನ್ಜಿಒಗಳು ಭಾಗವಹಿಸಿದ್ದವು. ಕಾರ್ಯಕ್ರಮದಲ್ಲಿ 700ಕ್ಕೂಹೆಚ್ಚು ವಿದ್ಯಾರ್ಥಿಗಳ ಭಾಗವಹಿಸಿದ್ದರು. ಮಾಹೆ ಕುಲಪತಿ ಡಾ.ಎಂ.ಡಿ.ವೆಂಕಟೇಶ್ ಸ್ವಾಗತಿಸಿದರು. ಪ್ರಿನ್ಸಿಪಲ್ ಟ್ರಸ್ಟಿ ವೆಂಕಟ ಕೃಷ್ಣನ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಯುವಜನಾಂಗದಲ್ಲಿ ಅಭಿವೃದ್ಧಿಯ ತುಡಿತ, ಉದಾರತೆ ಹಾಗೂ ಸಹಾನುಭೂತಿ ಗುಣಗಳು ಭವಿಷ್ಯದಲ್ಲಿ ಉತ್ತಮ ನಾಯಕರನ್ನು ಸೃಷ್ಟಿಸಲಿದೆ ಎಂದು ಮಾಹೆ ಅಧ್ಯಕ್ಷ ಡಾ.ರಂಜನ್ ಆರ್.ಪೈ ಅಭಿಪ್ರಾಯಪಟ್ಟರು.</p>.<p>ಡಾ.ರಾಮದಾಸ್ ಎಂ.ಪೈಗಳ 87ನೇ ಜನ್ಮದಿನದ ಅಂಗವಾಗಿ ಮಣಿಪಾಲದ ಮಾಹೆ ವತಿಯಿಂದ ಹಮ್ಮಿಕೊಂಡಿದ್ದ ‘ಸಮಾಜದ ಬದಲಾವಣೆಯಲ್ಲಿ ಯುವಶಕ್ತಿಯ ಪಾತ್ರ’ ಕುರಿತ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಮಾಜವನ್ನು ಬದಲಿಸುವಂತಹ ಶಕ್ತಿ, ಯೋಚನೆ ಹಾಗೂ ಯೋಜನೆಯನ್ನು ಹೊಂದಿರುವ ದೇಶದ ಪ್ರತಿಭಾವಂತ ಯುವಶಕ್ತಿ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿರುವುದು ಶ್ಲಾಘನೀಯ. ಸಮ್ಮೇಳನ ಭವಿಷ್ಯದ ಕನಸುಗಳ ಸಾಕಾರಕ್ಕೆ ವೇದಿಕೆಯಾಗಲಿ ಎಂದು ಆಶಿಸಿದರು.</p>.<p>ಮಾಹೆ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಮಾತನಾಡಿ, ಮಾಹೆ ಪ್ರತಿವರ್ಷ ದಾನದ ಮಹತ್ವ ಹಾಗೂ ಶ್ರೇಷ್ಠತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸುವ ದೃಷ್ಟಿಯಿಂದ ಕಳೆದ 10 ವರ್ಷಗಳಿಂದ ಅ.2ರಿಂದ8ರವರೆಗೆ ದಾನ ಉತ್ಸವ ಪಾಕ್ಷಿಕ ಆಯೋಜಿಸಿಕೊಂಡು ಬರುತ್ತಿದೆ. ದಾನ ಉತ್ಸವದಂತಹ ಕಾರ್ಯಕ್ರಮಗಳು ಸಾಮಾಜಿಕ ಬದಲಾವಣೆಗಳಿಗೆ ಸಹಕಾರಿಯಾಗಿದೆ ಎಂದರು.</p>.<p>ಮಾಹೆ ಕುಲಪತಿ ಡಾ.ಎಂ.ಡಿ.ವೆಂಕಟೇಶ್ ಮಾತನಾಡಿ, ಭಾರತ ಅತಿ ಹೆಚ್ಚು ಯುವಶಕ್ತಿಯನ್ನು ಹೊಂದಿದ್ದು, ಯುವಜನತೆ ಸಮಾಜದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವಂತಹ ಶಕ್ತಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಸ್ವಯಂಪ್ರೇರಿತರಾಗಿ ಸಾಮಾಜಿಕ ಬದಲಾವಣೆಯಲ್ಲಿ ತೊಡಗಿಸಿಕೊಳ್ಳಲು ಯುವಶಕ್ತಿಗೆ ಮಾಹೆ ಪ್ರೋತ್ಸಾಹ ಹಾಗೂ ಪ್ರೇರಣೆ ನೀಡುತ್ತಿದೆ ಎಂದರು.</p>.<p>ವಿದ್ಯಾರ್ಥಿಗಳ ಒಳಗೊಳ್ಳುವಿಕೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನವನ್ನು ಯಶಸ್ವಿಯಾಗಿ ಮಾಡಲಾಗುತ್ತಿದೆ ಎಂದು ಡಾ.ಎಂ.ಡಿ.ವೆಂಕಟೇಶ್ ಹೇಳಿದರು.</p>.<p>ಸಮಾಜಿಕ ಬದಲಾವಣೆ ವಿಚಾರವಾಗಿ 14 ವಿಷಯ ಮಂಡನೆ ನಡೆಯಿತು. 30 ತಂಡಗಳು ಭಾಗವಹಿಸಿದ್ದವು. ದ ಮಣಿಪಾಲ್ ಸೇವಾ ಮೇಳದಲ್ಲಿ 20 ಎನ್ಜಿಒಗಳು ಭಾಗವಹಿಸಿದ್ದವು. ಕಾರ್ಯಕ್ರಮದಲ್ಲಿ 700ಕ್ಕೂಹೆಚ್ಚು ವಿದ್ಯಾರ್ಥಿಗಳ ಭಾಗವಹಿಸಿದ್ದರು. ಮಾಹೆ ಕುಲಪತಿ ಡಾ.ಎಂ.ಡಿ.ವೆಂಕಟೇಶ್ ಸ್ವಾಗತಿಸಿದರು. ಪ್ರಿನ್ಸಿಪಲ್ ಟ್ರಸ್ಟಿ ವೆಂಕಟ ಕೃಷ್ಣನ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>