ಮಾಹೆ ಕುಲಪತಿ ಡಾ.ಎಂ.ಡಿ.ವೆಂಕಟೇಶ್ ಮಾತನಾಡಿ, ಭಾರತ ಅತಿ ಹೆಚ್ಚು ಯುವಶಕ್ತಿಯನ್ನು ಹೊಂದಿದ್ದು, ಯುವಜನತೆ ಸಮಾಜದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವಂತಹ ಶಕ್ತಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಸ್ವಯಂಪ್ರೇರಿತರಾಗಿ ಸಾಮಾಜಿಕ ಬದಲಾವಣೆಯಲ್ಲಿ ತೊಡಗಿಸಿಕೊಳ್ಳಲು ಯುವಶಕ್ತಿಗೆ ಮಾಹೆ ಪ್ರೋತ್ಸಾಹ ಹಾಗೂ ಪ್ರೇರಣೆ ನೀಡುತ್ತಿದೆ ಎಂದರು.