ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಪುವಿನ ಮೂಳೂರು ರೆಸಾರ್ಟ್‌ನಲ್ಲಿ ಸಿಎಂ, ಮಾಜಿ ಪ್ರಧಾನಿಗೆ ಪ್ರಕೃತಿ ಚಿಕಿತ್ಸೆ

ರೆಸಾರ್ಟ್‌ನಲ್ಲಿರುವ ಕುಮಾರಸ್ವಾಮಿ, ದೇವೇಗೌಡರು; ಮಾಧ್ಯಮಗಳಿಗೆ ಪ್ರವೇಶ ನಿಷಿದ್ಧ
Last Updated 29 ಏಪ್ರಿಲ್ 2019, 11:33 IST
ಅಕ್ಷರ ಗಾತ್ರ

ಉಡುಪಿ: ಜೆಡಿಎಸ್‌ ವರಿಷ್ಠರಾದ ಎಚ್‌.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಕಾಪುವಿನ ಮೂಳೂರಿನಲ್ಲಿರುವ ಸಾಯಿರಾಧಾ ರೆಸಾರ್ಟ್‌ನಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾನುವಾರ ರಾತ್ರಿ ಬಿಗಿ ಭದ್ರತೆಯಲ್ಲಿ ಇಬ್ಬರೂ ರೆಸಾರ್ಟ್‌ಗೆ ಬಂದಿಳಿದರು. ಈ ವೇಳೆ ಮಾಧ್ಯಮದವರಿಗೆ ಪ್ರವೇಶ ನಿಷೇಧಿಸಲಾಗಿತ್ತು.ದೂರದಿಂದ ಚಿತ್ರೀಕರಣ ಮಾಡಲು ಸಹ ಪೊಲೀಸರು ಅವಕಾಶ ನೀಡಲಿಲ್ಲ. ಇದರಿಂದ ಸಿಟ್ಟಿಗೆದ್ದ ಮಾಧ್ಯಮ ಪ್ರತಿನಿಧಿಗಳು ಪೊಲೀಸರ ಜತೆ ವಾಗ್ವಾದ ನಡೆಸಿದರು.‌

ಮುಖ್ಯಮಂತ್ರಿಯ ಕಟ್ಟುನಿಟ್ಟಿನ ಸೂಚನೆ ಇದ್ದು, ಮಾಧ್ಯಮದವರಿಗೆ ಪ್ರವೇಶ ನೀಡಲು ಸಾಧ್ಯವಿಲ್ಲ. ಚಿತ್ರೀಕರಣವನ್ನೂ ಮಾಡುವಂತಿಲ್ಲ ಎಂದು ಪೊಲೀಸರು ಎಚ್ಚರಿಕೆ ನೀಡಿದರು.

ರೆಸಾರ್ಟ್‌ಗೆ ಹೋಗುವುದಕ್ಕೂ ಮುನ್ನ ಭಾನುವಾರ ರಾತ್ರಿ ಉಡುಪಿಯ ಅಂಬಾಗಿಲಿನಲ್ಲಿ ನಡೆದ ಮಾಜಿ ಶಾಸಕ ಗೋಪಾಲ ಪೂಜಾರಿ ಅವರ ಪುತ್ರಿಯ ವಿವಾಹ ಸಮಾರಂಭದಲ್ಲಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಭಾಗವಹಿಸಿದ್ದರು. ಅಲ್ಲಿಯೂ ಮಾಧ್ಯಮದವರ ಜತೆ ಮಾತನಾಡಲಿಲ್ಲ.

ಮುಖ್ಯಮಂತ್ರಿ ಜತೆಯಲ್ಲಿ ಸಚಿವ ಸಾರಾ ಮಹೇಶ್‌ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್‌.ಎಲ್‌.ಭೋಜೇಗೌಡ ಅವರೂ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT