ಕಾಡಿನಲ್ಲಿ ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸುರೇಶ್ಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಮಗಳೂರು, ಉಡುಪಿ ಸೇರಿ ರಾಜ್ಯದ ಹಲವೆಡೆ ಸುರೇಶ್ ವಿರುದ್ಧ 35ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆರೋಪಿ ಚೇತರಿಸಿಕೊಂಡ ಬಳಿಕ ಬಾಡಿ ವಾರೆಂಟ್ ಪಡೆದು ರಾಜ್ಯಕ್ಕೆ ಕರೆತಂದು ವಿಚಾರಣೆ ನಡೆಸಲಾಗುವುದು ಎಂದು ನಕ್ಸಲ್ ನಿಗ್ರಹ ದಳದ ಎಸ್ಪಿ ಜಿತೇಂದ್ರ ಕುಮಾರ್ ದಯಂ ಮಾಹಿತಿ ನೀಡಿದರು.