ಗುರುವಾರ ಮಣಿಪಾಲದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಮ್ಮದು ನಕ್ಸಲ್ವಾದಕ್ಕೆ ವಿರುದ್ಧವಾಗಿರುವ ಅಭಿವೃದ್ಧಿಯ ವಾದ. ನಕ್ಸಲೀಯರು ಮುಗ್ಧ ಜನರ ತಲೆ ಕೆಡಿಸಿ, ಮಾವೋ ಸಿದ್ಧಾಂತಗಳನ್ನು ಹಬ್ಬಿಸಿ ಹಿಂಸೆಯನ್ನು ಹೆಚ್ಚಿಸುತ್ತಿದ್ದಾರೆ. ಧನಾತ್ಮಕವಾದ ಅಭಿವೃದ್ಧಿಯ ಪರವಾಗಿ ನಕ್ಸಲರು ಮುಖ್ಯವಾಹಿನಿಗೆ ಬರಬೇಕು. ಅದಕ್ಕೆ ಸ್ವಾಗತವಿದೆ ಎಂದು ಹೇಳಿದರು.