<p><strong>ಕುಂದಾಪುರ</strong>: ‘ಮೂಲ ಸೌಕರ್ಯ ವಂಚಿತವಾಗಿದ್ದ ಅಮಾಸೆಬೈಲು ಎನ್ನುವ ಮಲೆನಾಡು ಭಾಗದ ಗ್ರಾಮವನ್ನು ದೇಶವೇ ದೃಷ್ಟಿಸಿ ನೋಡುವಂತೆ ಅಭಿವೃದ್ಧಿಪಡಿಸಿದ ಮಾಜಿ ಶಾಸಕ ಎ.ಜಿ.ಕೊಡ್ಗಿಯವರ ಚಿಂತನೆ, ಪ್ರಾಮಾಣಿಕತೆ, ಬದ್ಧತೆ, ನಡೆ-ನುಡಿ ಇಂದಿನ ಯುವಕರಿಗೆ ದಾರಿದೀಪವಾಗಬೇಕು. ಈ ನಿಟ್ಟಿನಲ್ಲಿ ಅಮಾಸೆಬೈಲಿನಲ್ಲಿ ಅವರ ಹೆಸರಿನಲ್ಲಿ ಸಾಂಸ್ಕೃತಿಕ ಭವನದ ನಿರ್ಮಾಣವಾಗಬೇಕು’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.</p>.<p>ಅಮಾಸೆಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎ.ಜಿ.ಕೊಡ್ಗಿ ಬಯಲು ರಂಗ ಮಂಟಪದಲ್ಲಿ ದಿವಂಗತ ಎ.ಜಿ.ಕೊಡ್ಗಿಯವರ 94ನೇ ಜನ್ಮದಿನದ ಪ್ರಯುಕ್ತ ಶನಿವಾರ ಎ.ಜಿ.ಕೊಡ್ಗಿ ಅಭಿಮಾನಿಗಳು ಹಾಗೂ ಅಮಾಸೆಬೈಲು ಚಾರಿಟಬಲ್ ಟ್ರಸ್ಟ್ ಜೊತೆಯಾಗಿ ಆಯೋಜಿಸಿದ್ದ ಕೊಡ್ಗಿ ನೆನಪು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತಾಡಿದರು.</p>.<p>ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ‘ನಾಡು ಕಂಡ ಹಿರಿಯ ಮುತ್ಸದ್ದಿ ಹಾಗೂ ಚಿಂತಕ ಎ.ಜಿ.ಕೊಡ್ಗಿಯವರು ಮರೆಯಾದರೂ ಅವರು ನಡೆದು ಬಂದ ದಾರಿ, ಅವರು ಸೇವೆ ಸಲ್ಲಿಸಿದ ಕ್ಷೇತ್ರಗಳು, ಅವರ ಚಿಂತನೆಗಳು ಹಾಗೂ ಅವರು ಮಾಡಿದ ಕೆಲಸಗಳು ಜನಮಾನಸದಲ್ಲಿ ಉಳಿಯಬೇಕು ಎನ್ನುವ ಕಾರಣದಿಂದ ಸಮಾನಮನಸ್ಕ ಕೊಡ್ಗಿ ಅಭಿಮಾನಿಗಳು ಒಟ್ಟು ಸೇರಿ ಕೊಡ್ಗಿ ನೆನಪು ಎನ್ನುವ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಕೊಡ್ಗಿಯವರ ಹೆಸರು ಚಿರಸ್ಥಾಯಿಯಾಗಿಸಲು ಏನೇನು ಮಾಡಬೇಕು ಎನ್ನುವ ಬಗ್ಗೆ ಸಾರ್ವಜನಿಕ ಚಿಂತನೆಗಳು ನಡೆದು, ಅಭಿಪ್ರಾಯಗಳ ಕ್ರೋಡೀಕರಣ ಮಾಡಿ ಶಾಶ್ವತವಾದ ಯೋಜನೆ ರೂಪಿಸಲು ಪ್ರಯತ್ನಿಸಲಾಗುವುದು’ ಎಂದರು.</p>.<p>ವಿಧಾನ ಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಮಾತನಾಡಿ, ‘ಎ.ಜಿ.ಕೊಡ್ಗಿ ಎಂದಿಗೂ ಮುಖ ನೋಡಿ ರಾಜಕಾರಣ ಮಾಡಿದವರಲ್ಲ. ನೇರ ಹಾಗೂ ನಿಷ್ಠುರವಾದಿಯಾಗಿದ್ದ ಅವರು ನನ್ನನ್ನು ಸೇರಿ ಅನೇಕರಿಗೆ ಮಾರ್ಗದರ್ಶನ ಮಾಡಿದ್ದ ಧೀಮಂತರು. ಅಮಾಸೆಬೈಲಿನಲ್ಲಿ ಪಂಚಾಯತ್ ರಾಜ್ ಇಲಾಖೆಯ ತರಬೇತಿ ಕೇಂದ್ರವನ್ನು ಆರಂಭಿಸುವ ಮೂಲಕ ನೀರಾವರಿ ಹಾಗೂ ಗ್ರಾಮೀಣಾಭಿವೃದ್ಧಿ ಬಗ್ಗೆ ಅವರಿದ್ದ ಅಪಾರವಾದ ಜ್ಞಾನವನ್ನು ಗೌರವಿಸುವ ಕೆಲಸ ಸರ್ಕಾರದಿಂದ ನಡೆಯಬೇಕು’ ಎಂದರು.</p>.<p>ಕುಮ್ಕಿ ಹಕ್ಕನ್ನು ನೀಡುವ ಕುರಿತು ಕಳೆದ ಹಲವು ವರ್ಷಗಳಿಂದ ಇರುವ ಗೊಂದಲದ ನಿವಾರಣೆಗೆ ಸರ್ಕಾರ ಇಚ್ಛಾಶಕ್ತಿ ತೋರಬೇಕಾದ ಅಗತ್ಯ ಇದೆ. ವ್ಯಕ್ತಿಗೆ ಕುಮ್ಕಿ ಹಕ್ಕು ನೀಡಿದಲ್ಲಿ ಅದರ ಮೂಲ ಉದ್ದೇಶಗಳು ಬದಲಾಗುವ ಸಾಧ್ಯತೆ ಇರುವುದರಿಂದ, ಮಾರಾಟ ಮಾಡಲು ಅವಕಾಶ ಇಲ್ಲದಂತೆ ಭೂಮಿಗೆ ಹಾಗೂ ಕೃಷಿ ಹಾಗೂ ಅರಣ್ಯ ಚಟುವಟಿಕೆಗೆ ಸೀಮಿತವಾಗುವಂತೆ ಹಕ್ಕು ನೀಡುವ ಕುರಿತು ಚಿಂತನೆ ನಡೆಯಬೇಕು. 50–60 ವರ್ಷಗಳಿಗಿಂತ ಹೆಚ್ಚು ಕಾಲ ಸರ್ಕಾರದ ಗೇರು ಭೂಮಿಯನ್ನು ಜೋಪಾನ ಮಾಡಿ ಕಾಯ್ದುಕೊಂಡವರಿಗೂ, ಸಾಮಾಜಿಕ ನ್ಯಾಯ ನೀಡುವ ಕೆಲಸ ಸರ್ಕಾರದಿಂದ ಆಗಬೇಕು. ಕೃಷಿಕರಿಗೆ ಅನುಕೂಲವಾಗುವ ಸಾಮಾನ್ಯ ಬೆಲೆಯಲ್ಲಿ ಗೇರು ಲೀಸ್ ಹೊಂದಿರುವವರಿಗೆ ಭೂಮಿ ನೀಡುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಲಿ ಎಂದು ಹೇಳಿದ ಅವರು, ಕೊಡ್ಗಿಯವರು ಬದುಕಿದ್ದ ದಿನಗಳಲ್ಲಿ ಈ ಕುರಿತು ಪ್ರಾಮಾಣಿಕ ಹೋರಾಟ ಮಾಡಿದ್ದರು ಎನ್ನುವುದನ್ನು ನೆನಪಿಸಿಕೊಂಡರು.</p>.<p>ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಮಾಜಿ ಶಾಸಕ ಬಿ.ಅಪ್ಪಣ್ಣ ಹೆಗ್ಡೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಎಲ್.ಎಚ್.ಮಂಜುನಾಥ್, ಕರ್ಣಾಟಕ ಬ್ಯಾಂಕಿನ ಮಾರಾಟ ವಿಭಾಗದ ಹಿರಿಯ ಆಧಿಕಾರಿ ಗೋಕುಲದಾಸ್, ಅಮಾಸೆಬೈಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಸ್ಥಳೀಯ ಪ್ರಮುಖರಾದ ಬಿ.ಕೆ. ನರಸಿಂಹ ಶೆಟ್ಟಿ ಇದ್ದರು.</p>.<p>ಅಮಾಸೆಬೈಲು ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎ.ಅಶೋಕಕುಮಾರ ಕೊಡ್ಗಿ ಸ್ವಾಗತಿಸಿದರು. ರಾಜೇಶ್ ಕುಂದಾಪುರ ನಿರೂಪಿಸಿದರು. ಪತ್ರಕರ್ತ ಯು.ಎಸ್. ಶೆಣೈ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ</strong>: ‘ಮೂಲ ಸೌಕರ್ಯ ವಂಚಿತವಾಗಿದ್ದ ಅಮಾಸೆಬೈಲು ಎನ್ನುವ ಮಲೆನಾಡು ಭಾಗದ ಗ್ರಾಮವನ್ನು ದೇಶವೇ ದೃಷ್ಟಿಸಿ ನೋಡುವಂತೆ ಅಭಿವೃದ್ಧಿಪಡಿಸಿದ ಮಾಜಿ ಶಾಸಕ ಎ.ಜಿ.ಕೊಡ್ಗಿಯವರ ಚಿಂತನೆ, ಪ್ರಾಮಾಣಿಕತೆ, ಬದ್ಧತೆ, ನಡೆ-ನುಡಿ ಇಂದಿನ ಯುವಕರಿಗೆ ದಾರಿದೀಪವಾಗಬೇಕು. ಈ ನಿಟ್ಟಿನಲ್ಲಿ ಅಮಾಸೆಬೈಲಿನಲ್ಲಿ ಅವರ ಹೆಸರಿನಲ್ಲಿ ಸಾಂಸ್ಕೃತಿಕ ಭವನದ ನಿರ್ಮಾಣವಾಗಬೇಕು’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.</p>.<p>ಅಮಾಸೆಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎ.ಜಿ.ಕೊಡ್ಗಿ ಬಯಲು ರಂಗ ಮಂಟಪದಲ್ಲಿ ದಿವಂಗತ ಎ.ಜಿ.ಕೊಡ್ಗಿಯವರ 94ನೇ ಜನ್ಮದಿನದ ಪ್ರಯುಕ್ತ ಶನಿವಾರ ಎ.ಜಿ.ಕೊಡ್ಗಿ ಅಭಿಮಾನಿಗಳು ಹಾಗೂ ಅಮಾಸೆಬೈಲು ಚಾರಿಟಬಲ್ ಟ್ರಸ್ಟ್ ಜೊತೆಯಾಗಿ ಆಯೋಜಿಸಿದ್ದ ಕೊಡ್ಗಿ ನೆನಪು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತಾಡಿದರು.</p>.<p>ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ‘ನಾಡು ಕಂಡ ಹಿರಿಯ ಮುತ್ಸದ್ದಿ ಹಾಗೂ ಚಿಂತಕ ಎ.ಜಿ.ಕೊಡ್ಗಿಯವರು ಮರೆಯಾದರೂ ಅವರು ನಡೆದು ಬಂದ ದಾರಿ, ಅವರು ಸೇವೆ ಸಲ್ಲಿಸಿದ ಕ್ಷೇತ್ರಗಳು, ಅವರ ಚಿಂತನೆಗಳು ಹಾಗೂ ಅವರು ಮಾಡಿದ ಕೆಲಸಗಳು ಜನಮಾನಸದಲ್ಲಿ ಉಳಿಯಬೇಕು ಎನ್ನುವ ಕಾರಣದಿಂದ ಸಮಾನಮನಸ್ಕ ಕೊಡ್ಗಿ ಅಭಿಮಾನಿಗಳು ಒಟ್ಟು ಸೇರಿ ಕೊಡ್ಗಿ ನೆನಪು ಎನ್ನುವ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಕೊಡ್ಗಿಯವರ ಹೆಸರು ಚಿರಸ್ಥಾಯಿಯಾಗಿಸಲು ಏನೇನು ಮಾಡಬೇಕು ಎನ್ನುವ ಬಗ್ಗೆ ಸಾರ್ವಜನಿಕ ಚಿಂತನೆಗಳು ನಡೆದು, ಅಭಿಪ್ರಾಯಗಳ ಕ್ರೋಡೀಕರಣ ಮಾಡಿ ಶಾಶ್ವತವಾದ ಯೋಜನೆ ರೂಪಿಸಲು ಪ್ರಯತ್ನಿಸಲಾಗುವುದು’ ಎಂದರು.</p>.<p>ವಿಧಾನ ಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಮಾತನಾಡಿ, ‘ಎ.ಜಿ.ಕೊಡ್ಗಿ ಎಂದಿಗೂ ಮುಖ ನೋಡಿ ರಾಜಕಾರಣ ಮಾಡಿದವರಲ್ಲ. ನೇರ ಹಾಗೂ ನಿಷ್ಠುರವಾದಿಯಾಗಿದ್ದ ಅವರು ನನ್ನನ್ನು ಸೇರಿ ಅನೇಕರಿಗೆ ಮಾರ್ಗದರ್ಶನ ಮಾಡಿದ್ದ ಧೀಮಂತರು. ಅಮಾಸೆಬೈಲಿನಲ್ಲಿ ಪಂಚಾಯತ್ ರಾಜ್ ಇಲಾಖೆಯ ತರಬೇತಿ ಕೇಂದ್ರವನ್ನು ಆರಂಭಿಸುವ ಮೂಲಕ ನೀರಾವರಿ ಹಾಗೂ ಗ್ರಾಮೀಣಾಭಿವೃದ್ಧಿ ಬಗ್ಗೆ ಅವರಿದ್ದ ಅಪಾರವಾದ ಜ್ಞಾನವನ್ನು ಗೌರವಿಸುವ ಕೆಲಸ ಸರ್ಕಾರದಿಂದ ನಡೆಯಬೇಕು’ ಎಂದರು.</p>.<p>ಕುಮ್ಕಿ ಹಕ್ಕನ್ನು ನೀಡುವ ಕುರಿತು ಕಳೆದ ಹಲವು ವರ್ಷಗಳಿಂದ ಇರುವ ಗೊಂದಲದ ನಿವಾರಣೆಗೆ ಸರ್ಕಾರ ಇಚ್ಛಾಶಕ್ತಿ ತೋರಬೇಕಾದ ಅಗತ್ಯ ಇದೆ. ವ್ಯಕ್ತಿಗೆ ಕುಮ್ಕಿ ಹಕ್ಕು ನೀಡಿದಲ್ಲಿ ಅದರ ಮೂಲ ಉದ್ದೇಶಗಳು ಬದಲಾಗುವ ಸಾಧ್ಯತೆ ಇರುವುದರಿಂದ, ಮಾರಾಟ ಮಾಡಲು ಅವಕಾಶ ಇಲ್ಲದಂತೆ ಭೂಮಿಗೆ ಹಾಗೂ ಕೃಷಿ ಹಾಗೂ ಅರಣ್ಯ ಚಟುವಟಿಕೆಗೆ ಸೀಮಿತವಾಗುವಂತೆ ಹಕ್ಕು ನೀಡುವ ಕುರಿತು ಚಿಂತನೆ ನಡೆಯಬೇಕು. 50–60 ವರ್ಷಗಳಿಗಿಂತ ಹೆಚ್ಚು ಕಾಲ ಸರ್ಕಾರದ ಗೇರು ಭೂಮಿಯನ್ನು ಜೋಪಾನ ಮಾಡಿ ಕಾಯ್ದುಕೊಂಡವರಿಗೂ, ಸಾಮಾಜಿಕ ನ್ಯಾಯ ನೀಡುವ ಕೆಲಸ ಸರ್ಕಾರದಿಂದ ಆಗಬೇಕು. ಕೃಷಿಕರಿಗೆ ಅನುಕೂಲವಾಗುವ ಸಾಮಾನ್ಯ ಬೆಲೆಯಲ್ಲಿ ಗೇರು ಲೀಸ್ ಹೊಂದಿರುವವರಿಗೆ ಭೂಮಿ ನೀಡುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಲಿ ಎಂದು ಹೇಳಿದ ಅವರು, ಕೊಡ್ಗಿಯವರು ಬದುಕಿದ್ದ ದಿನಗಳಲ್ಲಿ ಈ ಕುರಿತು ಪ್ರಾಮಾಣಿಕ ಹೋರಾಟ ಮಾಡಿದ್ದರು ಎನ್ನುವುದನ್ನು ನೆನಪಿಸಿಕೊಂಡರು.</p>.<p>ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಮಾಜಿ ಶಾಸಕ ಬಿ.ಅಪ್ಪಣ್ಣ ಹೆಗ್ಡೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಎಲ್.ಎಚ್.ಮಂಜುನಾಥ್, ಕರ್ಣಾಟಕ ಬ್ಯಾಂಕಿನ ಮಾರಾಟ ವಿಭಾಗದ ಹಿರಿಯ ಆಧಿಕಾರಿ ಗೋಕುಲದಾಸ್, ಅಮಾಸೆಬೈಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಸ್ಥಳೀಯ ಪ್ರಮುಖರಾದ ಬಿ.ಕೆ. ನರಸಿಂಹ ಶೆಟ್ಟಿ ಇದ್ದರು.</p>.<p>ಅಮಾಸೆಬೈಲು ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎ.ಅಶೋಕಕುಮಾರ ಕೊಡ್ಗಿ ಸ್ವಾಗತಿಸಿದರು. ರಾಜೇಶ್ ಕುಂದಾಪುರ ನಿರೂಪಿಸಿದರು. ಪತ್ರಕರ್ತ ಯು.ಎಸ್. ಶೆಣೈ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>