ಬೈಂದೂರು: ಶಿರೂರಿನಲ್ಲಿ ನಡೆದ ಚತುಷ್ಪಥ ಹೆದ್ದಾರಿ ಕಾಮಗಾರಿಯಿಂದ ಗ್ರಾಮ ಪಂಚಾಯಿತಿ ಕಚೇರಿ, ಪ್ರಾಥಮಿಕ ಆರೋಗ್ಯ ಕೇಂದ್ರ್ರ, ಶಾಲೆ, ವಸತಿ ಪ್ರದೇಶ, ವ್ಯವಸಾಯ ಸೇವಾ ಸಹಕಾರಿ ಸಂಘ ಮುಂತಾದೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಬದಲಿ ರಸ್ತೆ ನಿರ್ಮಿಸುವ ಗುತ್ತಿಗೆದಾರ ಕಂಪನಿ ಐಆರ್ಬಿ ಭರವಸೆ ಅನುಷ್ಠಾನಗೊಂಡಿಲ್ಲ. ಹೀಗಾಗಿ ಇಲ್ಲಿನ ಜನರು ಪ್ರತಿಭಟನೆಗೆ ಸಿದ್ಧರಾಗಿದ್ದಾರೆ.