ಉಡುಪಿ: ರಾಷ್ಟ್ರೀಯ ತನಿಖಾ ದಳ ಪಿಎಫ್ಐ ಕಚೇರಿ ಮೇಲೆ ನಡೆಸುತ್ತಿರುವ ದಾಳಿ ಖಂಡಿಸಿ ನಗರದ ಹಳೆ ಡಯಾನ ಸರ್ಕಲ್ ಬಳಿ ಗುರುವಾರ ರಸ್ತೆ ತಡೆದು ಪ್ರತಿಭಟನೆ ನಡೆಸದ ಪಿಎಫ್ಐ ಕಾರ್ಯಕರ್ತರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.
ಏಕಾಏಕಿ ಸರ್ಕಲ್ನಲ್ಲಿ ಜಮಾಯಿಸಿದ ಕಾರ್ಯಕರ್ತರು ಬಿಜೆಪಿ ಸರ್ಕಾರದ ಧೋರಣೆ ಖಂಡಿಸಿ ಘೋಷಣೆಗಳನ್ನು ಕೂಗಿದರು. ಕೂಡಲೇ ಮಧ್ಯೆ ಪ್ರವೇಶಿಸಿದ ಪೊಲೀಸರು ಲಾಠಿ ಬೀಸಿ ಕಾರ್ಯಕರ್ತರನ್ನು ಚದುರಿಸಿದರು.
ಪ್ರತಿರೋಧ ತೋರಿದ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.