<p><strong>ಉಡುಪಿ</strong>: ನಿತ್ಯೋತ್ಸವ ಕವಿ ಕೆ.ಎಸ್.ನಿಸಾರ್ ಅಹಮ್ಮದ್ ಅವರಿಗೆ ಉಡುಪಿ ಮೇಲೆ ವಿಶೇಷ ಪ್ರೀತಿ. ಇಲ್ಲಿನ ಸಾಹಿತ್ಯಾಸಕ್ತರ ಜತೆ ನಿಕಟ ಸಂಪರ್ಕ ಹೊಂದಿದ್ದ ಕೆಎಸ್ಎನ್ ಹಲವು ಬಾರಿ ಜಿಲ್ಲೆಗೆ ಭೇಟಿ ನೀಡಿ ಸಾಹಿತ್ಯ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಾರೆ.</p>.<p>ಸೆ.6, 2014ರಲ್ಲಿ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ನಡೆದ ಗೋವಿಂದ ಪೈ ಪ್ರಶಸ್ತಿ ಸ್ವೀಕಾರ ಸಮಾರಂಭದಲ್ಲಿ ನಿಸಾರ್ ಅಹಮ್ಮದ್ ಭಾಗವಹಿಸಿದ್ದರು. 2015ರಲ್ಲಿ ಬೈಂದೂರಿನಲ್ಲಿ ನಡೆದ ಗೋಪಾಲಕೃಷ್ಣ ಅಡಿಗರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<p>ಅವರಿಗೆ ಪಂಪ ಪ್ರಶಸ್ತಿ ಸಿಕ್ಕ ಬಳಿಕ 2017ರ ಡಿಸೆಂಬರ್ನಲ್ಲಿ ಉಡುಪಿಗೆ ಕರೆಸಿ ಸನ್ಮಾನ ಮಾಡಲಾಗಿತ್ತು.ರಂಗಸ್ಥಳ ಹಾಗೂ ಅಮೋಘ ಸಂಸ್ಥೆ ಕಾರ್ಯಕ್ರಮ ಆಯೋಜಿಸಿದ್ದವು ಎಂದು ಅಂದಿನ ದಿನಗಳನ್ನು ಮೆಲುಕು ಹಾಕಿದರು ಹಿರಿಯ ಸಾಹಿತಿ ಮರಳೀಧರ ಉಪಾಧ್ಯ.</p>.<p>ಉಡುಪಿಯ ಒಳಕಾಡು ಶಾಲೆಯಲ್ಲಿ ಕೈಯಾರರ ಬದುಕು ಬರಹ ಕುರಿತು ವಿಚಾರ ಸಂಕಿರಣದಲ್ಲಿ ನಿಸಾರ್ ಅಹಮ್ಮದ್ ಭಾಗವಹಿಸಿದ್ದರು. ನಂತರ ಅರಣ್ಯ ಇಲಾಖೆಯ ಕಾರ್ಯಕ್ರಮಕ್ಕೂ ಬಂದಿದ್ದರು. ನಿತ್ಯೋತ್ಸವ ಕವಿ ಎಂದರೆ ಕರಾವಳಿಗರಿಗೆ ವಿಶೇಷ ಪ್ರೀತಿ ಇತ್ತು ಎಂದು ಸ್ಮರಿಸಿದರು ಅವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ನಿತ್ಯೋತ್ಸವ ಕವಿ ಕೆ.ಎಸ್.ನಿಸಾರ್ ಅಹಮ್ಮದ್ ಅವರಿಗೆ ಉಡುಪಿ ಮೇಲೆ ವಿಶೇಷ ಪ್ರೀತಿ. ಇಲ್ಲಿನ ಸಾಹಿತ್ಯಾಸಕ್ತರ ಜತೆ ನಿಕಟ ಸಂಪರ್ಕ ಹೊಂದಿದ್ದ ಕೆಎಸ್ಎನ್ ಹಲವು ಬಾರಿ ಜಿಲ್ಲೆಗೆ ಭೇಟಿ ನೀಡಿ ಸಾಹಿತ್ಯ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಾರೆ.</p>.<p>ಸೆ.6, 2014ರಲ್ಲಿ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ನಡೆದ ಗೋವಿಂದ ಪೈ ಪ್ರಶಸ್ತಿ ಸ್ವೀಕಾರ ಸಮಾರಂಭದಲ್ಲಿ ನಿಸಾರ್ ಅಹಮ್ಮದ್ ಭಾಗವಹಿಸಿದ್ದರು. 2015ರಲ್ಲಿ ಬೈಂದೂರಿನಲ್ಲಿ ನಡೆದ ಗೋಪಾಲಕೃಷ್ಣ ಅಡಿಗರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<p>ಅವರಿಗೆ ಪಂಪ ಪ್ರಶಸ್ತಿ ಸಿಕ್ಕ ಬಳಿಕ 2017ರ ಡಿಸೆಂಬರ್ನಲ್ಲಿ ಉಡುಪಿಗೆ ಕರೆಸಿ ಸನ್ಮಾನ ಮಾಡಲಾಗಿತ್ತು.ರಂಗಸ್ಥಳ ಹಾಗೂ ಅಮೋಘ ಸಂಸ್ಥೆ ಕಾರ್ಯಕ್ರಮ ಆಯೋಜಿಸಿದ್ದವು ಎಂದು ಅಂದಿನ ದಿನಗಳನ್ನು ಮೆಲುಕು ಹಾಕಿದರು ಹಿರಿಯ ಸಾಹಿತಿ ಮರಳೀಧರ ಉಪಾಧ್ಯ.</p>.<p>ಉಡುಪಿಯ ಒಳಕಾಡು ಶಾಲೆಯಲ್ಲಿ ಕೈಯಾರರ ಬದುಕು ಬರಹ ಕುರಿತು ವಿಚಾರ ಸಂಕಿರಣದಲ್ಲಿ ನಿಸಾರ್ ಅಹಮ್ಮದ್ ಭಾಗವಹಿಸಿದ್ದರು. ನಂತರ ಅರಣ್ಯ ಇಲಾಖೆಯ ಕಾರ್ಯಕ್ರಮಕ್ಕೂ ಬಂದಿದ್ದರು. ನಿತ್ಯೋತ್ಸವ ಕವಿ ಎಂದರೆ ಕರಾವಳಿಗರಿಗೆ ವಿಶೇಷ ಪ್ರೀತಿ ಇತ್ತು ಎಂದು ಸ್ಮರಿಸಿದರು ಅವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>