ಕೊರೊನಾ ಸೋಂಕು ಹರಡುವಿಕೆ ತಡೆಗೆ ದೇವಸ್ಥಾನದ ಆವರಣದೊಳಗೆ ಅರ್ಚಕರು, ಪುರೋಹಿತರು, ಸಿಬ್ಬಂದಿ ಸಮ್ಮುಖದಲ್ಲಿ ರಥೋತ್ಸವ ನಡೆಯಲಿದೆ. ಸಾರ್ವಜನಿಕರ ಭಾಗವಹಿಸುವಿಕೆಗೆ ಅವಕಾಶ ಇರುವುದಿಲ್ಲ. 25ರ ವಿಜಯದಶಮಿ ದಿನ ಮುಂಜಾನೆ 4ರಿಂದ ದೇವಸ್ಥಾನದಲ್ಲಿ ವಿದ್ಯಾರಂಭ ಆರಂಭವಾಗಲಿದ್ದು, ದಂಪತಿ ಸಹಿತ ಮಗುವಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ ಎಂದು ತಿಳಿಸಿದ್ದಾರೆ.