ಉಡುಪಿ ಹಾಗೂ ಮಣಿಪಾಲದಲ್ಲಿ ಕೊರೊನಾ ಆಂತಕವಿಲ್ಲ. ಕಂಟೈನ್ಮೆಂಟ್ ವಲಯವಾಗಿದ್ದ ಎಂಐಟಿಯಲ್ಲಿ ಸೋಂಕಿನ ಪ್ರಮಾಣ ಇಳಿಮುಖವಾಗಿದೆ. ಜಿಲ್ಲೆಯಲ್ಲಿ 401 ಸಕ್ರಿಯ ಸೋಂಕಿತರು ಮಾತ್ರ ಇದ್ದಾರೆ. ಪ್ರತಿದಿನ ಸರಾಸರಿ 2,500 ಕೋವಿಡ್ ಪರೀಕ್ಷೆಗಳು ನಡೆಯುತ್ತಿದ್ದು ಶೇ 2.5ರಷ್ಟು ಮಾತ್ರ ಪಾಸಿಟಿವಿಟಿ ದರ ಬರುತ್ತಿದೆ.ಆರ್ಥಿಕ ಸಂಕಷ್ಟದಿಂದ ಜನರು ಸುಧಾರಿಸಿಕೊಳ್ಳುತ್ತಿರುವ ಹೊತ್ತಿನಲ್ಲಿ ಅನವಶ್ಯಕ ರಾತ್ರಿ ಕರ್ಫ್ಯೂ ಬೇಡ ಎಂದು ಶಾಸಕ ರಘುಪತಿ ಭಟ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.