ರಾಜ್ಯದಲ್ಲಿರುವ ಜಯದೇವ, ಕಿದ್ವಾಯಿ, ಹುಬ್ಬಳ್ಳಿಯ ಸರ್ಕಾರಿ ಮೆಡಿಕಲ್ ಕಾಲೇಜು, ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗಳಲ್ಲಿ ಜನರಿಗೆ ಗುಣಮಟ್ಟದ ಚಿಕಿತ್ಸೆ ದೊರೆಯುತ್ತಿದ್ದು, ಸರ್ಕಾರ ಕೂಡ ಖಾಸಗಿಯವರಂತೆ ಗುಣಮಟ್ಟದ ಸೇವೆ ನೀಡಬಲ್ಲದು ಎಂಬುದಕ್ಕೆ ನಿದರ್ಶನ. ಸರ್ಕಾರಿ ವ್ಯವಸ್ಥೆಯಲ್ಲಿ ಲೋಪ ದೋಷಗಳಿದ್ದರೆ ಜನರ ಪ್ರತಿಭಟನೆಯಿಂದ ಸರಿಪಡಿಸಲು ಸಾಧ್ಯವಿದೆ. ಆದರೆ ಖಾಸಗಿ ವ್ಯವಸ್ಥೆಯಲ್ಲಿ ಸಾದ್ಯವಿಲ್ಲ. ಹಾಗಾಗಿ, ಜಿಲ್ಲೆಯಲ್ಲಿ ಸಂಪೂರ್ಣ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.