‘ನಟ ದರ್ಶನ್ಗೆ ನಿರ್ದಿಷ್ಟ ಪಕ್ಷದ ಪರವಾಗಿ ಪ್ರಚಾರ ಮಾಡುವಂತೆ ಎಂದೂ ಹೇಳಿಲ್ಲ, ಹೇಳುವುದೂ ಇಲ್ಲ. ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವುದು ಹೊಸದಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್, ರೈತ ಸಂಘ, ಬಿಜೆಪಿ ಪರ ಪ್ರಚಾರ ಮಾಡಿದ್ದರು. ಮಂಡ್ಯದಲ್ಲಿ ನನ್ನ ಪರವಾಗಿಯೂ ಪ್ರಚಾರ ಮಾಡಲು ಕರೆದಿರಲಿಲ್ಲ. ಸ್ವಇಚ್ಛೆಯಿಂದ ದರ್ಶನ್ ಹಾಗೂ ಯಶ್ ಪ್ರಚಾರಕ್ಕೆ ಬಂದಿದ್ದರು’ ಎಂದು ಹೇಳಿದರು.