<p><strong>ಉಡುಪಿ: </strong>ಕನ್ಯಾ ಮರಿಯಮ್ಮ ಅವರ ಜನ್ಮದಿನದ ಅಂಗವಾಗಿ ಶನಿವಾರ ಜಿಲ್ಲೆಯಾದ್ಯಂತ ಮೊಂತಿ ಫೆಸ್ತ್ (ತೆನೆಹಬ್ಬ) ಸಂಭ್ರಮ ಕಳೆಗಟ್ಟಿತ್ತು. ಕ್ರೈಸ್ತರು ಭಕ್ತಿ–ಭಾವದಿಂದ ಹಬ್ಬವನ್ನು ಆಚರಿಸಿದರು.</p>.<p>ತೆನೆ ಹಬ್ಬದ ಪ್ರಯುಕ್ತ ಪಾಂಗಳದ ಶಂಕರಪುರದ ಸಂತ ಯೋಹಾನ್ನರ ದೇವಾಲಯದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು. ಉಡುಪಿ ಧರ್ಮಾಧ್ಯಕ್ಷರಾದ ಜೆರಾಲ್ಡ್ ಲೋಬೊ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.</p>.<p>ಚರ್ಚ್ನ ಪ್ರಧಾನ ಧರ್ಮಗುರು ಫರ್ಡಿನಂಡ್ ಗೊನ್ಸಾಲ್ವಿಸ್, ಸಹಾಯಕ ಧರ್ಮಗುರು ರೋಯ್ಸನ್ ಫೆರ್ನಾಂಡಿಸ್, ರೋಮಿಯೊ ಲೂವಿಸ್, ಲೋರೆನ್ಸ್ ಮೆಂಡೋನ್ಸ, ಜಿತೇಶ್ ಕ್ಯಾಸ್ತೆಲಿನೊ ಈ ಸಂದರ್ಭ ಉಪಸ್ಥಿತರಿದ್ದರು.</p>.<p>ಉಡುಪಿ ಶೋಕ ಮಾತಾ ಇಗರ್ಜಿಯಲ್ಲಿ ಚರ್ಚ್ನ ಪ್ರಧಾನ ಧರ್ಮಗುರು ವಲೇರಿಯನ್ ಮೆಂಡೊನ್ಸಾ ಹೊಸ ತೆನೆಗಳನ್ನು ಆಶೀರ್ವವಚಿಸಿ ಹಬ್ಬದ ಸಂದೇಶವನ್ನು ನೀಡಿದರು. ಈ ವೇಳೆ ಸಹಾಯಕ ಧರ್ಮಗುರು ವಿಜಯ್ ಡಿಸೋಜಾ, ಹಾಗೂ ವಂ ವಿಲಿಯಂ ಮಾರ್ಟಿಸ್ ಉಪಸ್ಥಿತರಿದ್ದರು.</p>.<p>ಮಕ್ಕಳು ಕನ್ಯಾ ಮರಿಯಮ್ಮನವರ ಪ್ರತಿಮೆಗೆ ಹೂಗಳನ್ನು ಸಮರ್ಪಿಸಿದ ಬಳಿಕ ಜಿಲ್ಲೆಯ ಎಲ್ಲ ಚರ್ಚುಗಳಲ್ಲಿ ಧರ್ಮಗುರುಗಳು ಆಯಾ ಊರಿನ ಗುರಿಕಾರರು ಹೊಲಗಳಿಂದ ಆರಿಸಿ ತಂದ ಭತ್ತದ ತೆನೆಯನ್ನು ಆಶೀರ್ವದಿಸಿದರು. ಬಳಿಕ ಮೆರವಣಿಗೆಯ ಮೂಲಕ ತೆನೆಗಳನ್ನು ಚರ್ಚಿನ ಒಳಗೆ ಕೊಂಡೊಯ್ದು ಪವಿತ್ರ ಬಲಿಪೂಜೆ ನಡೆಸಲಾಯಿತು.</p>.<p>ಧರ್ಮಗುರುಗಳು ಕುಟುಂಬ ಜೀವನ ಹಾಗೂ ಮಹಿಳೆಯ ಸ್ಥಾನಮಾನದ ಕುರಿತು ಪ್ರವಚನ ನೀಡಿದರು. ಈ ಬಾರಿ ಕೊಡಗು ಮತ್ತು ಕೇರಳದಲ್ಲಿ ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ದೇವರು ಒಳಿತನ್ನು ಮಾಡುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.</p>.<p>ಬಲಿಪೂಜೆ ಬಳಿಕ ಧರ್ಮಗುರುಗಳು ಪ್ರತಿ ಕುಟುಂಬಕ್ಕೆ ಆಶೀರ್ವದಿಸಿದ ಹೊಸ ಭತ್ತದ ತೆನೆಗಳನ್ನು ನೀಡಿ ಹರಸಿದರು. ಮಕ್ಕಳಿಗೆ ಸಿಹಿ ತಿಂಡಿ, ಕಬ್ಬುಗಳನ್ನು ವಿತರಿಸಲಾಯಿತು.</p>.<p>ಕುಟುಂಬದ ಹಿರಿಯರು ಭತ್ತದ ತೆನೆಯನ್ನು ಮನೆಗೆ ತಂದು ದೇವರ ಪೀಠದ ಮೇಲಿಟ್ಟು ಪ್ರಾರ್ಥನೆ ಸಲ್ಲಿಸಿ, ತೆನೆಗಳನ್ನು ಸುಲಿದು ಪಾಯಸ ಮಾಡಿ ಕುಟುಂಬದ ಸದಸ್ಯರೊಂದಿಗೆ ಸವಿದರು. ಬಳಿಕ ಸಂರ್ಪೂಣ ಸಸ್ಯಹಾರದ ಭೋಜನವನ್ನು ತಯಾರಿಸಿ ಸವಿಯಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಕನ್ಯಾ ಮರಿಯಮ್ಮ ಅವರ ಜನ್ಮದಿನದ ಅಂಗವಾಗಿ ಶನಿವಾರ ಜಿಲ್ಲೆಯಾದ್ಯಂತ ಮೊಂತಿ ಫೆಸ್ತ್ (ತೆನೆಹಬ್ಬ) ಸಂಭ್ರಮ ಕಳೆಗಟ್ಟಿತ್ತು. ಕ್ರೈಸ್ತರು ಭಕ್ತಿ–ಭಾವದಿಂದ ಹಬ್ಬವನ್ನು ಆಚರಿಸಿದರು.</p>.<p>ತೆನೆ ಹಬ್ಬದ ಪ್ರಯುಕ್ತ ಪಾಂಗಳದ ಶಂಕರಪುರದ ಸಂತ ಯೋಹಾನ್ನರ ದೇವಾಲಯದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು. ಉಡುಪಿ ಧರ್ಮಾಧ್ಯಕ್ಷರಾದ ಜೆರಾಲ್ಡ್ ಲೋಬೊ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.</p>.<p>ಚರ್ಚ್ನ ಪ್ರಧಾನ ಧರ್ಮಗುರು ಫರ್ಡಿನಂಡ್ ಗೊನ್ಸಾಲ್ವಿಸ್, ಸಹಾಯಕ ಧರ್ಮಗುರು ರೋಯ್ಸನ್ ಫೆರ್ನಾಂಡಿಸ್, ರೋಮಿಯೊ ಲೂವಿಸ್, ಲೋರೆನ್ಸ್ ಮೆಂಡೋನ್ಸ, ಜಿತೇಶ್ ಕ್ಯಾಸ್ತೆಲಿನೊ ಈ ಸಂದರ್ಭ ಉಪಸ್ಥಿತರಿದ್ದರು.</p>.<p>ಉಡುಪಿ ಶೋಕ ಮಾತಾ ಇಗರ್ಜಿಯಲ್ಲಿ ಚರ್ಚ್ನ ಪ್ರಧಾನ ಧರ್ಮಗುರು ವಲೇರಿಯನ್ ಮೆಂಡೊನ್ಸಾ ಹೊಸ ತೆನೆಗಳನ್ನು ಆಶೀರ್ವವಚಿಸಿ ಹಬ್ಬದ ಸಂದೇಶವನ್ನು ನೀಡಿದರು. ಈ ವೇಳೆ ಸಹಾಯಕ ಧರ್ಮಗುರು ವಿಜಯ್ ಡಿಸೋಜಾ, ಹಾಗೂ ವಂ ವಿಲಿಯಂ ಮಾರ್ಟಿಸ್ ಉಪಸ್ಥಿತರಿದ್ದರು.</p>.<p>ಮಕ್ಕಳು ಕನ್ಯಾ ಮರಿಯಮ್ಮನವರ ಪ್ರತಿಮೆಗೆ ಹೂಗಳನ್ನು ಸಮರ್ಪಿಸಿದ ಬಳಿಕ ಜಿಲ್ಲೆಯ ಎಲ್ಲ ಚರ್ಚುಗಳಲ್ಲಿ ಧರ್ಮಗುರುಗಳು ಆಯಾ ಊರಿನ ಗುರಿಕಾರರು ಹೊಲಗಳಿಂದ ಆರಿಸಿ ತಂದ ಭತ್ತದ ತೆನೆಯನ್ನು ಆಶೀರ್ವದಿಸಿದರು. ಬಳಿಕ ಮೆರವಣಿಗೆಯ ಮೂಲಕ ತೆನೆಗಳನ್ನು ಚರ್ಚಿನ ಒಳಗೆ ಕೊಂಡೊಯ್ದು ಪವಿತ್ರ ಬಲಿಪೂಜೆ ನಡೆಸಲಾಯಿತು.</p>.<p>ಧರ್ಮಗುರುಗಳು ಕುಟುಂಬ ಜೀವನ ಹಾಗೂ ಮಹಿಳೆಯ ಸ್ಥಾನಮಾನದ ಕುರಿತು ಪ್ರವಚನ ನೀಡಿದರು. ಈ ಬಾರಿ ಕೊಡಗು ಮತ್ತು ಕೇರಳದಲ್ಲಿ ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ದೇವರು ಒಳಿತನ್ನು ಮಾಡುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.</p>.<p>ಬಲಿಪೂಜೆ ಬಳಿಕ ಧರ್ಮಗುರುಗಳು ಪ್ರತಿ ಕುಟುಂಬಕ್ಕೆ ಆಶೀರ್ವದಿಸಿದ ಹೊಸ ಭತ್ತದ ತೆನೆಗಳನ್ನು ನೀಡಿ ಹರಸಿದರು. ಮಕ್ಕಳಿಗೆ ಸಿಹಿ ತಿಂಡಿ, ಕಬ್ಬುಗಳನ್ನು ವಿತರಿಸಲಾಯಿತು.</p>.<p>ಕುಟುಂಬದ ಹಿರಿಯರು ಭತ್ತದ ತೆನೆಯನ್ನು ಮನೆಗೆ ತಂದು ದೇವರ ಪೀಠದ ಮೇಲಿಟ್ಟು ಪ್ರಾರ್ಥನೆ ಸಲ್ಲಿಸಿ, ತೆನೆಗಳನ್ನು ಸುಲಿದು ಪಾಯಸ ಮಾಡಿ ಕುಟುಂಬದ ಸದಸ್ಯರೊಂದಿಗೆ ಸವಿದರು. ಬಳಿಕ ಸಂರ್ಪೂಣ ಸಸ್ಯಹಾರದ ಭೋಜನವನ್ನು ತಯಾರಿಸಿ ಸವಿಯಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>