<p>ಉಡುಪಿ: ಭಾಷೆಯಲ್ಲಿ ಮೇಲು, ಕೀಳು ಎಂಬ ಭಾವನೆ ತೋರದೆ ನೆರೆ ಹೊರೆಯ ಭಾಷೆಗಳನ್ನು ಕಲಿಯಬೇಕು. ಭಾಷೆಗಳ ನಡುವೆ ಬಾಂಧವ್ಯ ಬೆಳೆಯಬೇಕು ಎಂದು ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ಹೇಳಿದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲ್ಲೂಕು ಘಟಕ ಹಾಗೂ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ ಆಶ್ರಯದಲ್ಲಿ ಮಣಿಪಾಲದ ಸೋನಿಯಾ ಕ್ಲಿನಿಕ್ ಸಭಾಂಗಣದಲ್ಲಿ ನಡೆದ ‘ಕನ್ನಡ ಮಾತನಾಡು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ನೆರೆ ಹೊರೆಯವರಿಂದ ಭಾಷೆ ಕೊಡುಕೊಳ್ಳುವಿಕೆಯಾಗಬೇಕು. ಇದರಿಂದ ಭಾಷೆ ಬೆಳೆಯುತ್ತದೆ. ಭಾಷಾ ಜ್ಞಾನ ವಿಸ್ತಾರವಾಗಯತ್ತದೆ. ದುರದೃಷ್ಟವಶಾತ್ ಈ ಪ್ರಕ್ರಿಯೆ ಹಿಂದಿನಿಂದ ನಡೆದು ಕೊಂಡು ಬಂದಿಲ್ಲ ಎಂದರು.</p>.<p>ಭಾಷೆಗಳ ಜತೆಗೆ ನೆಲದ ಸಂಸ್ಕೃತಿ ಬಗ್ಗೆಯೂ ಅರಿಯಬೇಕು. ಭಾಷೆ ಒಂದು ಅಂಶವಾಗಿದ್ದು ಸಂಸ್ಕೃತಿ ಅದರ ಮೂಲವಾಗಿದೆ. ವ್ಯಾಕರಣದ ಮೂಲಕ ಭಾಷೆಯನ್ನು ಕಲಿಸುವ ಬದಲು ಸಂವಹನ ಮತ್ತು ಸನ್ನಿವೇಶಗಳ ಆಧಾರಿತವಾಗಿ ಭಾಷೆಯನ್ನು ಕಲಿಸುವುದು ಸೂಕ್ತ ಎಂದು ಅಭಿಪ್ರಾಯ ಪಟ್ಟರು.</p>.<p>ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲ್ಲೂಕು ಘಟಕದಿಂದ ನಡೆಯುತ್ತಿರುವ ಕನ್ನಡ ಮಾತನಾಡು ಕಾರ್ಯಕ್ರಮ ಭಾಷೆಯ ಬೆಳವಣಿಗೆಗೆ ಪೂರಕವಾಗಿದ್ದು ಅರ್ಥಪೂರ್ಣವಾಗಿದೆ ಎಂದರು.</p>.<p>ಸಾಹಿತಿ ಡಾ.ಗಣನಾಥ ಎಕ್ಕಾರು ಶುಭ ಹಾರೈಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ಕೇರಳ ಕಲ್ಚರಲ್ ಸೋಶಿಯಲ್ ಸೆಂಟರ್ ಕಾರ್ಯದರ್ಶಿ ಬಿನೇಶ್, ಸದಸ್ಯರಾದ ಮೋಹನ್ ರಾವ್, ಥಾಮಸ್ ಇದ್ದರು.</p>.<p>ಉಡುಪಿ ಕಸಾಪ ಅಧ್ಯಕ್ಷ ಎಚ್.ಪಿ.ರವಿರಾಜ್ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು ವಂದಿಸಿದರು. ರಾಜೇಶ್ ಪಣಿಯಾಡಿ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಭಾಷೆಯಲ್ಲಿ ಮೇಲು, ಕೀಳು ಎಂಬ ಭಾವನೆ ತೋರದೆ ನೆರೆ ಹೊರೆಯ ಭಾಷೆಗಳನ್ನು ಕಲಿಯಬೇಕು. ಭಾಷೆಗಳ ನಡುವೆ ಬಾಂಧವ್ಯ ಬೆಳೆಯಬೇಕು ಎಂದು ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ಹೇಳಿದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲ್ಲೂಕು ಘಟಕ ಹಾಗೂ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ ಆಶ್ರಯದಲ್ಲಿ ಮಣಿಪಾಲದ ಸೋನಿಯಾ ಕ್ಲಿನಿಕ್ ಸಭಾಂಗಣದಲ್ಲಿ ನಡೆದ ‘ಕನ್ನಡ ಮಾತನಾಡು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ನೆರೆ ಹೊರೆಯವರಿಂದ ಭಾಷೆ ಕೊಡುಕೊಳ್ಳುವಿಕೆಯಾಗಬೇಕು. ಇದರಿಂದ ಭಾಷೆ ಬೆಳೆಯುತ್ತದೆ. ಭಾಷಾ ಜ್ಞಾನ ವಿಸ್ತಾರವಾಗಯತ್ತದೆ. ದುರದೃಷ್ಟವಶಾತ್ ಈ ಪ್ರಕ್ರಿಯೆ ಹಿಂದಿನಿಂದ ನಡೆದು ಕೊಂಡು ಬಂದಿಲ್ಲ ಎಂದರು.</p>.<p>ಭಾಷೆಗಳ ಜತೆಗೆ ನೆಲದ ಸಂಸ್ಕೃತಿ ಬಗ್ಗೆಯೂ ಅರಿಯಬೇಕು. ಭಾಷೆ ಒಂದು ಅಂಶವಾಗಿದ್ದು ಸಂಸ್ಕೃತಿ ಅದರ ಮೂಲವಾಗಿದೆ. ವ್ಯಾಕರಣದ ಮೂಲಕ ಭಾಷೆಯನ್ನು ಕಲಿಸುವ ಬದಲು ಸಂವಹನ ಮತ್ತು ಸನ್ನಿವೇಶಗಳ ಆಧಾರಿತವಾಗಿ ಭಾಷೆಯನ್ನು ಕಲಿಸುವುದು ಸೂಕ್ತ ಎಂದು ಅಭಿಪ್ರಾಯ ಪಟ್ಟರು.</p>.<p>ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲ್ಲೂಕು ಘಟಕದಿಂದ ನಡೆಯುತ್ತಿರುವ ಕನ್ನಡ ಮಾತನಾಡು ಕಾರ್ಯಕ್ರಮ ಭಾಷೆಯ ಬೆಳವಣಿಗೆಗೆ ಪೂರಕವಾಗಿದ್ದು ಅರ್ಥಪೂರ್ಣವಾಗಿದೆ ಎಂದರು.</p>.<p>ಸಾಹಿತಿ ಡಾ.ಗಣನಾಥ ಎಕ್ಕಾರು ಶುಭ ಹಾರೈಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ಕೇರಳ ಕಲ್ಚರಲ್ ಸೋಶಿಯಲ್ ಸೆಂಟರ್ ಕಾರ್ಯದರ್ಶಿ ಬಿನೇಶ್, ಸದಸ್ಯರಾದ ಮೋಹನ್ ರಾವ್, ಥಾಮಸ್ ಇದ್ದರು.</p>.<p>ಉಡುಪಿ ಕಸಾಪ ಅಧ್ಯಕ್ಷ ಎಚ್.ಪಿ.ರವಿರಾಜ್ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು ವಂದಿಸಿದರು. ರಾಜೇಶ್ ಪಣಿಯಾಡಿ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>