<p><strong>ಉಡುಪಿ: </strong>ಅನರ್ಹ ಶಾಸಕರು ರಾಜೀನಾಮೆ ನೀಡಿದ ಕಾರಣಕ್ಕೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿರುವುದರಲ್ಲಿ ತಪ್ಪಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಸಮರ್ಥಿಸಿಕೊಂಡರು.</p>.<p>ಸೋಮವಾರ ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಅನರ್ಹ ಶಾಸಕರು ಯಾರ ಬಂಧನದಲ್ಲಿ ಇಲ್ಲ. ಉಪ ಚುನಾವಣೆಯಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸಬೇಕು ಎಂಬುದನ್ನು ಅವರೇ ನಿರ್ಧರಿಸಲಿದ್ದಾರೆ ಎಂದರು.</p>.<p>ಅನರ್ಹ ಶಾಸಕರಿಗೆ ಪಕ್ಷ ಸೇರುವಂತೆ ಆಹ್ವಾನ ನೀಡಲಾಗಿದೆ. ಬಿಜೆಪಿಗೆ ಬರುವ ವಿಶ್ವಾಸವಿದ್ದು, ಪಕ್ಷದ ಚಿಹ್ನೆಯಿಂದಲೇ ಸ್ಪರ್ಧಿಸುವ ವಿಶ್ವಾಸವಿದೆ. ಬರದಿದ್ದರೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಅವರು ಸ್ವತಂತ್ರರು ಎಂದರು.</p>.<p>ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದು, ವಿರೋಧ ಪಕ್ಷದ ನಾಯಕರಾಗಿದ್ದು ಬ್ಲಾಕ್ಮೇಲ್ ರಾಜಕಾರಣದ ಮೂಲಕ. ಅವರಿಂದ ಯಾವ ಪಾಠ ಕಲಿಯುವ ಅವಶ್ಯಕತೆ ಇಲ್ಲ ಕುಟುಕಿದರು.</p>.<p>ಸಿ.ಎಚ್.ವಿಜಯಶಂಕರ್ ಸಜ್ಜನ ನಾಯಕರು. ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ. ದೇವೇಗೌಡ ಹಾಗೂ ಕುಮಾರಸ್ವಾಮಿ ಟೀಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ. ಚುನಾವಣೆ ಮುಗಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಅನರ್ಹ ಶಾಸಕರು ರಾಜೀನಾಮೆ ನೀಡಿದ ಕಾರಣಕ್ಕೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿರುವುದರಲ್ಲಿ ತಪ್ಪಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಸಮರ್ಥಿಸಿಕೊಂಡರು.</p>.<p>ಸೋಮವಾರ ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಅನರ್ಹ ಶಾಸಕರು ಯಾರ ಬಂಧನದಲ್ಲಿ ಇಲ್ಲ. ಉಪ ಚುನಾವಣೆಯಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸಬೇಕು ಎಂಬುದನ್ನು ಅವರೇ ನಿರ್ಧರಿಸಲಿದ್ದಾರೆ ಎಂದರು.</p>.<p>ಅನರ್ಹ ಶಾಸಕರಿಗೆ ಪಕ್ಷ ಸೇರುವಂತೆ ಆಹ್ವಾನ ನೀಡಲಾಗಿದೆ. ಬಿಜೆಪಿಗೆ ಬರುವ ವಿಶ್ವಾಸವಿದ್ದು, ಪಕ್ಷದ ಚಿಹ್ನೆಯಿಂದಲೇ ಸ್ಪರ್ಧಿಸುವ ವಿಶ್ವಾಸವಿದೆ. ಬರದಿದ್ದರೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಅವರು ಸ್ವತಂತ್ರರು ಎಂದರು.</p>.<p>ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದು, ವಿರೋಧ ಪಕ್ಷದ ನಾಯಕರಾಗಿದ್ದು ಬ್ಲಾಕ್ಮೇಲ್ ರಾಜಕಾರಣದ ಮೂಲಕ. ಅವರಿಂದ ಯಾವ ಪಾಠ ಕಲಿಯುವ ಅವಶ್ಯಕತೆ ಇಲ್ಲ ಕುಟುಕಿದರು.</p>.<p>ಸಿ.ಎಚ್.ವಿಜಯಶಂಕರ್ ಸಜ್ಜನ ನಾಯಕರು. ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ. ದೇವೇಗೌಡ ಹಾಗೂ ಕುಮಾರಸ್ವಾಮಿ ಟೀಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ. ಚುನಾವಣೆ ಮುಗಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>