ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉಡುಪಿ ನಗರಸಭೆಯ ಸದಸ್ಯ ವಿಜಯ್ ಕೊಡವೂರು ಮಾತನಾಡಿ, ‘ಸೃಷ್ಟಿಯಲ್ಲಿ ಬದುಕುವ ಪ್ರತಿಯೊಂದು ಜೀವಿಗೂ ತಮ್ಮ ಜವಾಬ್ದಾರಿಯ ಅರಿವಿರಬೇಕು. ಮಾನವ ಜನ್ಮ ಶ್ರೇಷ್ಠವಾದದ್ದು, ಇಂದಿನ ಯುವ ಪೀಳಿಗೆಯಲ್ಲಿ ಸಂಸ್ಕಾರದ ಕೊರತೆಯಿದೆ. ಸಂಸ್ಕಾರದ ಪಾಠ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಹೇಳಿ ಕೊಡಬೇಕು’ ಎಂದರು.