<p><strong>ಉಡುಪಿ:</strong> ಈಚೆಗೆ ನಿಧನರಾದ ನಿವೃತ್ತ ಉಪನ್ಯಾಸಕ ಪ್ರೊ. ಹೆರಂಜೆ ಕೃಷ್ಣ ಭಟ್ ಅವರ ಸ್ಮರಣಾರ್ಥ ಉಡುಪಿಯ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಬುಧವಾರ ನುಡಿನಮನ ಕಾರ್ಯಕ್ರಮ ಜರುಗಿತು.</p>.<p>ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರು ಮಾತನಾಡಿ, ಹೆರಂಜೆ ಕೃಷ್ಣ ಭಟ್ ಅವರು ಅತ್ಯಂತ ಜವಾಬ್ದಾರಿಯಿಂದ ಎಲ್ಲ ಕೆಲಸವನ್ನೂ ನಿಭಾಯಿಸುತ್ತಿದ್ದರು. ಎಲ್ಲರೂ ಅವರನ್ನು ಮಿತಭಾಷಿ ಎನ್ನುತ್ತಾರೆ. ನಮ್ಮೊಂದಿಗೆ ಗಂಟೆಗಳ ಕಾಲ ವಿವಿಧ ವಿಚಾರ-ವಿಷಯಗಳಿಗೆ ಮನಸ್ಸು ಬಿಚ್ಚಿ ಮಾತನಾಡುತ್ತಿದ್ದರು ಎಂದು ಹೇಳಿದರು.</p>.<p>ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಸುಶ್ರೀಂದ್ರ ತೀರ್ಥರು ಮಾತನಾಡಿದರು. ಎಂ.ಎಲ್. ಸಾಮಗ, ಪಾದೆಕಲ್ಲು ವಿಷ್ಣು ಭಟ್, ಎಂ.ಪ್ರಭಾಕರ ಜೋಶಿ, ಕೆ.ಪಿ. ರಾವ್, ರಾಘವ ನಂಬಿಯಾರ್, ಭಾಸ್ಕರಾನಂದ ಕುಮಾರ, ಪ್ರದೀಪ ಕಲ್ಕೂರ, ಹರಿರಾಮ ಆಚಾರ್ಯ, ಎನ್.ಟಿ. ಭಟ್ ನುಡಿನಮನ ಸಲ್ಲಿಸಿದರು.</p>.<p>ಮಠದ ದಿವಾನ ನಾಗರಾಜ ಆಚಾರ್ಯ, ವಿದೇಶ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಶ್ರೀಗಳ ಆಪ್ತ ಕಾರ್ಯದರ್ಶಿ ರತೀಶ ತಂತ್ರಿ, ಮಹಿತೋಷ ಆಚಾರ್ಯ, ರಮೇಶ ಭಟ್, ಬಿ.ಗೋಪಾಲ ಆಚಾರ್ಯ ಇದ್ದರು.</p>.<p>ಉಡುಪಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ಕಾರ್ಯಕ್ರಮ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಈಚೆಗೆ ನಿಧನರಾದ ನಿವೃತ್ತ ಉಪನ್ಯಾಸಕ ಪ್ರೊ. ಹೆರಂಜೆ ಕೃಷ್ಣ ಭಟ್ ಅವರ ಸ್ಮರಣಾರ್ಥ ಉಡುಪಿಯ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಬುಧವಾರ ನುಡಿನಮನ ಕಾರ್ಯಕ್ರಮ ಜರುಗಿತು.</p>.<p>ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರು ಮಾತನಾಡಿ, ಹೆರಂಜೆ ಕೃಷ್ಣ ಭಟ್ ಅವರು ಅತ್ಯಂತ ಜವಾಬ್ದಾರಿಯಿಂದ ಎಲ್ಲ ಕೆಲಸವನ್ನೂ ನಿಭಾಯಿಸುತ್ತಿದ್ದರು. ಎಲ್ಲರೂ ಅವರನ್ನು ಮಿತಭಾಷಿ ಎನ್ನುತ್ತಾರೆ. ನಮ್ಮೊಂದಿಗೆ ಗಂಟೆಗಳ ಕಾಲ ವಿವಿಧ ವಿಚಾರ-ವಿಷಯಗಳಿಗೆ ಮನಸ್ಸು ಬಿಚ್ಚಿ ಮಾತನಾಡುತ್ತಿದ್ದರು ಎಂದು ಹೇಳಿದರು.</p>.<p>ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಸುಶ್ರೀಂದ್ರ ತೀರ್ಥರು ಮಾತನಾಡಿದರು. ಎಂ.ಎಲ್. ಸಾಮಗ, ಪಾದೆಕಲ್ಲು ವಿಷ್ಣು ಭಟ್, ಎಂ.ಪ್ರಭಾಕರ ಜೋಶಿ, ಕೆ.ಪಿ. ರಾವ್, ರಾಘವ ನಂಬಿಯಾರ್, ಭಾಸ್ಕರಾನಂದ ಕುಮಾರ, ಪ್ರದೀಪ ಕಲ್ಕೂರ, ಹರಿರಾಮ ಆಚಾರ್ಯ, ಎನ್.ಟಿ. ಭಟ್ ನುಡಿನಮನ ಸಲ್ಲಿಸಿದರು.</p>.<p>ಮಠದ ದಿವಾನ ನಾಗರಾಜ ಆಚಾರ್ಯ, ವಿದೇಶ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಶ್ರೀಗಳ ಆಪ್ತ ಕಾರ್ಯದರ್ಶಿ ರತೀಶ ತಂತ್ರಿ, ಮಹಿತೋಷ ಆಚಾರ್ಯ, ರಮೇಶ ಭಟ್, ಬಿ.ಗೋಪಾಲ ಆಚಾರ್ಯ ಇದ್ದರು.</p>.<p>ಉಡುಪಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ಕಾರ್ಯಕ್ರಮ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>