<p><strong>ಕುಂದಾಪುರ</strong> : ‘ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಯೋಜನೆಯಲ್ಲಿ ನರ್ಸ್ಗಳ ಮಾಸಿಕ ವೇತನ ₹2,500ರಿಂದ ₹3 ಸಾವಿರ ಹೆಚ್ಚಾಗಿದ್ದು, ಇದನ್ನು ನೀಡಲು ಆರೋಗ್ಯ ಇಲಾಖೆಯಲ್ಲಿ 3 ತಿಂಗಳ ಹೆಚ್ಚುವರಿ ವೇತನ ಲಂಚ ಪಡೆಯಲಾಗುತ್ತಿದೆ’ ಎಂದು ಶಾಸಕ ಕಿರಣ್ ಕುಮಾರ್ ಕೊಡ್ಗಿ ಆರೋಪಿಸಿದರು.</p>.<p>ಇಲ್ಲಿ ಮಂಗಳವಾರ ನಡೆದ ತಾಲ್ಲೂಕು ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಸಿಬ್ಬಂದಿಯ ವೇತನದಲ್ಲಿ ಏರಿಕೆಯಾಗಿರುವ ಅಲ್ಪ ಪ್ರಮಾಣಕ್ಕೂ ಲಂಚ ಪಡೆಯುವ ದುಷ್ಟತನ ಯಾಕೆ? ಕೇಳಿರುವುದು ಹಾಗೂ ಪಡೆದಿರುವುದು ಯಾರು ಎನ್ನುವುದಕ್ಕೆ ಸಾಕ್ಷಿ ಇದೆ. ಸದ್ಯ ಹೆಸರು ಬಹಿರಂಗಪಡಿಸುವುದಿಲ್ಲ. ಪಡೆದವರು ತಕ್ಷಣ ಅದನ್ನು ಮರಳಿಸಬೇಕು’ ಎಂದು ಸೂಚನೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ‘ನಮ್ಮ ಜಿಲ್ಲೆ ಇಷ್ಟೊಂದು ಲಂಚಬಾಕತನದಲ್ಲಿ ಹೆಸರು ಕೆಡಿಸಿಕೊಂಡಿರಲಿಲ್ಲ. ಹಣ ಪಡೆದವರು ಮರಳಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ</strong> : ‘ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಯೋಜನೆಯಲ್ಲಿ ನರ್ಸ್ಗಳ ಮಾಸಿಕ ವೇತನ ₹2,500ರಿಂದ ₹3 ಸಾವಿರ ಹೆಚ್ಚಾಗಿದ್ದು, ಇದನ್ನು ನೀಡಲು ಆರೋಗ್ಯ ಇಲಾಖೆಯಲ್ಲಿ 3 ತಿಂಗಳ ಹೆಚ್ಚುವರಿ ವೇತನ ಲಂಚ ಪಡೆಯಲಾಗುತ್ತಿದೆ’ ಎಂದು ಶಾಸಕ ಕಿರಣ್ ಕುಮಾರ್ ಕೊಡ್ಗಿ ಆರೋಪಿಸಿದರು.</p>.<p>ಇಲ್ಲಿ ಮಂಗಳವಾರ ನಡೆದ ತಾಲ್ಲೂಕು ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಸಿಬ್ಬಂದಿಯ ವೇತನದಲ್ಲಿ ಏರಿಕೆಯಾಗಿರುವ ಅಲ್ಪ ಪ್ರಮಾಣಕ್ಕೂ ಲಂಚ ಪಡೆಯುವ ದುಷ್ಟತನ ಯಾಕೆ? ಕೇಳಿರುವುದು ಹಾಗೂ ಪಡೆದಿರುವುದು ಯಾರು ಎನ್ನುವುದಕ್ಕೆ ಸಾಕ್ಷಿ ಇದೆ. ಸದ್ಯ ಹೆಸರು ಬಹಿರಂಗಪಡಿಸುವುದಿಲ್ಲ. ಪಡೆದವರು ತಕ್ಷಣ ಅದನ್ನು ಮರಳಿಸಬೇಕು’ ಎಂದು ಸೂಚನೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ‘ನಮ್ಮ ಜಿಲ್ಲೆ ಇಷ್ಟೊಂದು ಲಂಚಬಾಕತನದಲ್ಲಿ ಹೆಸರು ಕೆಡಿಸಿಕೊಂಡಿರಲಿಲ್ಲ. ಹಣ ಪಡೆದವರು ಮರಳಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>