<p><strong>ಬೈಂದೂರು</strong>: ಕಿರಿಮಂಜೇಶ್ವರ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಡೆದ ಪೋಷಣ್ ಮಾಸಾಚರಣೆ ಪೌಷ್ಟಿಕ ಆಹಾರಗಳ ಬಗ್ಗೆ ಮಾಹಿತಿ ಶಿಬಿರವು ನಾಗೂರಿನ ಶಾಂತೇರಿ ಕಾಮಾಕ್ಷಿ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆಯಿತು.</p>.<p>ಕಿರಿಮಂಜೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಶೇಖರ್ ಖಾರ್ವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿರಿಯರ ಸಾಂಪ್ರದಾಯಿಕ ಆಹಾರ ಪದ್ಧತಿ ಹಾಗೂ ನಮ್ಮ ಸುತ್ತಮುತ್ತ ಬೆಳೆಯುವ ಸೊಪ್ಪು, ತರಕಾರಿಗಳು ಪೋಷಕಾಂಶಗಳ ಆಗರವಾಗಿವೆ. ದಿನನಿತ್ಯದ ಆಹಾರದಲ್ಲಿ ಇದನ್ನು ಉಪಯೋಗಿಸುವುದರಿಂದ ನಮಗೆ ಪೌಷ್ಟಿಕಾಂಶಗಳ ಕೊರತೆ ಉಂಟಾಗದು ಎಂದರು.</p>.<p>ಅಂಗನವಾಡಿ ಮೇಲ್ವಿಚಾರಕಿ ರೇಖಾ ಮಾತನಾಡಿ, ಮಕ್ಕಳು, ಮಹಿಳೆಯರಿಗೆ ಮಾತ್ರವಲ್ಲ ಪುರುಷರಿಗೂ ಪೌಷ್ಟಿಕಾಂಶವುಳ್ಳ ಆಹಾರ ಅಗತ್ಯ. ಯುವಜನರು ಸಾಂಪ್ರದಾಯಿಕ ಪೌಷ್ಟಿಕ ಆಹಾರ ಸೇವನೆ ಬಿಟ್ಟು ಪಾಶ್ಚಿಮಾತ್ಯ ಆಹಾರದ ಕಡೆಗೆ ಒಲವು ತೋರುತ್ತಿದ್ದಾರೆ. ಇದರಿಂದ ರಕ್ತಹೀನತೆ, ಅಪೌಷ್ಟಿಕತೆ, ಬೊಜ್ಜುತನ ಉಂಟಾಗುತ್ತದೆ. ಈ ದಿಸೆಯಲ್ಲಿ ಆಹಾರ ಕ್ರಮಗಳ ಅರಿವು ಮೂಡಿಸಲು ಕೇಂದ್ರ ಸರ್ಕಾರವು ಪೋಷಣ್ ಅಭಿಯಾನ ಜಾರಿಗೆ ತಂದಿದೆ ಎಂದರು.</p>.<p>ಮಹಿಳೆಯರು ಮನೆಯಿಂದ ತಯಾರಿಸಿ ತಂದಿದ್ದ ತಿಂಡಿಗಳ ಪ್ರದರ್ಶನ ಹಾಗೂ ಆಯ್ಕೆಯಾದ ತಿನಿಸುಗಳಿಗೆ ಬಹುಮಾನ ನೀಡಲಾಯಿತು. ಗರ್ಭಿಣಿಯರಿಗೆ ಸೀಮಂತ ನೆರವೇರಿಸಲಾಯಿತು.</p>.<p>ಕಿರಿಮಂಜೇಶ್ವರ ಗ್ರಾಮ ಪಂಚಾಯಿತಿ ಪಿಡಿಒ ರಾಜೇಶ್, ವೈದ್ಯಾಧಿಕಾರಿ ನಿಶಾ ರೆಬೆಲ್ಲೊ, ಕಿರಿಮಂಜೇಶ್ವರ ಗ್ರಾಮ ಪಂಚಾಯಿತಿ ಸದಸ್ಯರಾದ ರಾಜು ದೇವಾಡಿಗ, ಕೃಷ್ಣ ಖಾರ್ವಿ, ಈಶ್ವರ್ ದೇವಾಡಿಗ, ಆನಂದ ಪೂಜಾರಿ, ಸರಸ್ವತಿ ನಾಯರಿ, ನೇತ್ರಾವತಿ, ಶಶಿಕಲಾ, ಜಯಲಕ್ಷ್ಮಿ ಉಪಸ್ಥಿತರಿದ್ದರು.</p>.<p>ಅಂಗನವಾಡಿ ಕಾರ್ಯಕರ್ತೆ ಪ್ರವೀಣಾ ಹೊಸಹಿತ್ಲು ಸ್ವಾಗತಿಸಿದರು. ಪದ್ಮನಾಭ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು. ಪ್ರವೀಣಾ ನಾಗೂರು ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಂದೂರು</strong>: ಕಿರಿಮಂಜೇಶ್ವರ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಡೆದ ಪೋಷಣ್ ಮಾಸಾಚರಣೆ ಪೌಷ್ಟಿಕ ಆಹಾರಗಳ ಬಗ್ಗೆ ಮಾಹಿತಿ ಶಿಬಿರವು ನಾಗೂರಿನ ಶಾಂತೇರಿ ಕಾಮಾಕ್ಷಿ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆಯಿತು.</p>.<p>ಕಿರಿಮಂಜೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಶೇಖರ್ ಖಾರ್ವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿರಿಯರ ಸಾಂಪ್ರದಾಯಿಕ ಆಹಾರ ಪದ್ಧತಿ ಹಾಗೂ ನಮ್ಮ ಸುತ್ತಮುತ್ತ ಬೆಳೆಯುವ ಸೊಪ್ಪು, ತರಕಾರಿಗಳು ಪೋಷಕಾಂಶಗಳ ಆಗರವಾಗಿವೆ. ದಿನನಿತ್ಯದ ಆಹಾರದಲ್ಲಿ ಇದನ್ನು ಉಪಯೋಗಿಸುವುದರಿಂದ ನಮಗೆ ಪೌಷ್ಟಿಕಾಂಶಗಳ ಕೊರತೆ ಉಂಟಾಗದು ಎಂದರು.</p>.<p>ಅಂಗನವಾಡಿ ಮೇಲ್ವಿಚಾರಕಿ ರೇಖಾ ಮಾತನಾಡಿ, ಮಕ್ಕಳು, ಮಹಿಳೆಯರಿಗೆ ಮಾತ್ರವಲ್ಲ ಪುರುಷರಿಗೂ ಪೌಷ್ಟಿಕಾಂಶವುಳ್ಳ ಆಹಾರ ಅಗತ್ಯ. ಯುವಜನರು ಸಾಂಪ್ರದಾಯಿಕ ಪೌಷ್ಟಿಕ ಆಹಾರ ಸೇವನೆ ಬಿಟ್ಟು ಪಾಶ್ಚಿಮಾತ್ಯ ಆಹಾರದ ಕಡೆಗೆ ಒಲವು ತೋರುತ್ತಿದ್ದಾರೆ. ಇದರಿಂದ ರಕ್ತಹೀನತೆ, ಅಪೌಷ್ಟಿಕತೆ, ಬೊಜ್ಜುತನ ಉಂಟಾಗುತ್ತದೆ. ಈ ದಿಸೆಯಲ್ಲಿ ಆಹಾರ ಕ್ರಮಗಳ ಅರಿವು ಮೂಡಿಸಲು ಕೇಂದ್ರ ಸರ್ಕಾರವು ಪೋಷಣ್ ಅಭಿಯಾನ ಜಾರಿಗೆ ತಂದಿದೆ ಎಂದರು.</p>.<p>ಮಹಿಳೆಯರು ಮನೆಯಿಂದ ತಯಾರಿಸಿ ತಂದಿದ್ದ ತಿಂಡಿಗಳ ಪ್ರದರ್ಶನ ಹಾಗೂ ಆಯ್ಕೆಯಾದ ತಿನಿಸುಗಳಿಗೆ ಬಹುಮಾನ ನೀಡಲಾಯಿತು. ಗರ್ಭಿಣಿಯರಿಗೆ ಸೀಮಂತ ನೆರವೇರಿಸಲಾಯಿತು.</p>.<p>ಕಿರಿಮಂಜೇಶ್ವರ ಗ್ರಾಮ ಪಂಚಾಯಿತಿ ಪಿಡಿಒ ರಾಜೇಶ್, ವೈದ್ಯಾಧಿಕಾರಿ ನಿಶಾ ರೆಬೆಲ್ಲೊ, ಕಿರಿಮಂಜೇಶ್ವರ ಗ್ರಾಮ ಪಂಚಾಯಿತಿ ಸದಸ್ಯರಾದ ರಾಜು ದೇವಾಡಿಗ, ಕೃಷ್ಣ ಖಾರ್ವಿ, ಈಶ್ವರ್ ದೇವಾಡಿಗ, ಆನಂದ ಪೂಜಾರಿ, ಸರಸ್ವತಿ ನಾಯರಿ, ನೇತ್ರಾವತಿ, ಶಶಿಕಲಾ, ಜಯಲಕ್ಷ್ಮಿ ಉಪಸ್ಥಿತರಿದ್ದರು.</p>.<p>ಅಂಗನವಾಡಿ ಕಾರ್ಯಕರ್ತೆ ಪ್ರವೀಣಾ ಹೊಸಹಿತ್ಲು ಸ್ವಾಗತಿಸಿದರು. ಪದ್ಮನಾಭ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು. ಪ್ರವೀಣಾ ನಾಗೂರು ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>