ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಮಳೆಗೆ ಜರಿದ ಕೋಟೆರಾನ ಬೆಟ್ಟಕ್ಕೆ ಅಧಿಕಾರಿಗಳ ತಂಡ ಭೇಟಿ

Last Updated 23 ಸೆಪ್ಟೆಂಬರ್ 2020, 15:19 IST
ಅಕ್ಷರ ಗಾತ್ರ

ಉಡುಪಿ: ಈಚೆಗೆ ಸುರಿದ ಭಾರಿ ಮಳೆಗೆ ಹೆಬ್ರಿ ತಾಲ್ಲೂಕು ಮಡಾಮಕ್ಕಿ ಸಮೀಪ ಜರಿದಿರುವ ಕೋಟೆರಾಯನ ಬೆಟ್ಟಕ್ಕೆ ಬುಧವಾರ ಕುಂದಾಪುರ ತಹಶೀಲ್ದಾರ್ ಹಾಗೂ ಕಂದಾಯ ನಿರೀಕ್ಷಕರನ್ನೊಳಗೊಂಡ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಬೆಟ್ಟ ಜರಿದಿರುವ ಪ್ರದೇಶದಿಂದ 3 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಮನೆಗಳಿಲ್ಲ. ಮೀಸಲು ಅರಣ್ಯವಾದ ಕಾರಣ ಕೃಷಿ ಚಟುವಟಿಕೆಗಳೂ ಇಲ್ಲ. ಗುಡ್ಡಕುಸಿತದಿಂದ ಜನವಸತಿ ಪ್ರದೇಶಕ್ಕೆ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ ಎಂದು ಕುಂದಾಪುರ ಉಪ ವಿಭಾಗಾಧಿಕಾರಿ ಕೆ.ರಾಜು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಬೆಟ್ಟದ ಬುಡದಲ್ಲಿರುವ ಮನ್ನಾಡಿ ಗ್ರಾಮಕ್ಕೂ ಭೇಟಿನೀಡಿ ಜನರ ಅಭಿಪ್ರಾಯ ಹಾಗೂ ಅಹವಾಲು ಆಲಿಸಲಾಗಿದೆ. ಮಂಗಳವಾರ ವನ್ಯಜೀವಿ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲಿದ್ದಾರೆ. ಭೂಗರ್ಭ ಇಲಾಖೆಯ ಅಧಿಕಾರಿಗಳಿಗೂ ಸ್ಥಳಕ್ಕೆ ತೆರಳಿ ವಸ್ತುಸ್ಥಿತಿ ಅಧ್ಯಯನಮಾಡಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಎಸಿ ತಿಳಿಸಿದರು.

ಮಳೆ ಕ್ಷೀಣ:ಜಿಲ್ಲೆಯಲ್ಲಿ ಬುಧವಾರ ಸಾಧಾರಣ ಪ್ರಮಾಣದ ಮಳೆಯಾಗಿದ್ದು, ಬೈಂದೂರು ತಾಲ್ಲೂಕಿನ ಕಾಲ್ತೋಡಿನಲ್ಲಿ ಗರಿಷ್ಠ 7.8 ಸೆಂ.ಮೀ, ಕುಂದಾಪುರದ ಕಿರಿಮಂಜೇಶ್ವರದಲ್ಲಿ 7.5 ಸೆಂ.ಮೀ ಮಳ ಬಿದ್ದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT