<p><strong>ಉಡುಪಿ: </strong>ಈಚೆಗೆ ಸುರಿದ ಭಾರಿ ಮಳೆಗೆ ಹೆಬ್ರಿ ತಾಲ್ಲೂಕು ಮಡಾಮಕ್ಕಿ ಸಮೀಪ ಜರಿದಿರುವ ಕೋಟೆರಾಯನ ಬೆಟ್ಟಕ್ಕೆ ಬುಧವಾರ ಕುಂದಾಪುರ ತಹಶೀಲ್ದಾರ್ ಹಾಗೂ ಕಂದಾಯ ನಿರೀಕ್ಷಕರನ್ನೊಳಗೊಂಡ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.</p>.<p>ಬೆಟ್ಟ ಜರಿದಿರುವ ಪ್ರದೇಶದಿಂದ 3 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಮನೆಗಳಿಲ್ಲ. ಮೀಸಲು ಅರಣ್ಯವಾದ ಕಾರಣ ಕೃಷಿ ಚಟುವಟಿಕೆಗಳೂ ಇಲ್ಲ. ಗುಡ್ಡಕುಸಿತದಿಂದ ಜನವಸತಿ ಪ್ರದೇಶಕ್ಕೆ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ ಎಂದು ಕುಂದಾಪುರ ಉಪ ವಿಭಾಗಾಧಿಕಾರಿ ಕೆ.ರಾಜು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<p>ಬೆಟ್ಟದ ಬುಡದಲ್ಲಿರುವ ಮನ್ನಾಡಿ ಗ್ರಾಮಕ್ಕೂ ಭೇಟಿನೀಡಿ ಜನರ ಅಭಿಪ್ರಾಯ ಹಾಗೂ ಅಹವಾಲು ಆಲಿಸಲಾಗಿದೆ. ಮಂಗಳವಾರ ವನ್ಯಜೀವಿ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲಿದ್ದಾರೆ. ಭೂಗರ್ಭ ಇಲಾಖೆಯ ಅಧಿಕಾರಿಗಳಿಗೂ ಸ್ಥಳಕ್ಕೆ ತೆರಳಿ ವಸ್ತುಸ್ಥಿತಿ ಅಧ್ಯಯನಮಾಡಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಎಸಿ ತಿಳಿಸಿದರು.</p>.<p><strong>ಮಳೆ ಕ್ಷೀಣ:</strong>ಜಿಲ್ಲೆಯಲ್ಲಿ ಬುಧವಾರ ಸಾಧಾರಣ ಪ್ರಮಾಣದ ಮಳೆಯಾಗಿದ್ದು, ಬೈಂದೂರು ತಾಲ್ಲೂಕಿನ ಕಾಲ್ತೋಡಿನಲ್ಲಿ ಗರಿಷ್ಠ 7.8 ಸೆಂ.ಮೀ, ಕುಂದಾಪುರದ ಕಿರಿಮಂಜೇಶ್ವರದಲ್ಲಿ 7.5 ಸೆಂ.ಮೀ ಮಳ ಬಿದ್ದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಈಚೆಗೆ ಸುರಿದ ಭಾರಿ ಮಳೆಗೆ ಹೆಬ್ರಿ ತಾಲ್ಲೂಕು ಮಡಾಮಕ್ಕಿ ಸಮೀಪ ಜರಿದಿರುವ ಕೋಟೆರಾಯನ ಬೆಟ್ಟಕ್ಕೆ ಬುಧವಾರ ಕುಂದಾಪುರ ತಹಶೀಲ್ದಾರ್ ಹಾಗೂ ಕಂದಾಯ ನಿರೀಕ್ಷಕರನ್ನೊಳಗೊಂಡ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.</p>.<p>ಬೆಟ್ಟ ಜರಿದಿರುವ ಪ್ರದೇಶದಿಂದ 3 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಮನೆಗಳಿಲ್ಲ. ಮೀಸಲು ಅರಣ್ಯವಾದ ಕಾರಣ ಕೃಷಿ ಚಟುವಟಿಕೆಗಳೂ ಇಲ್ಲ. ಗುಡ್ಡಕುಸಿತದಿಂದ ಜನವಸತಿ ಪ್ರದೇಶಕ್ಕೆ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ ಎಂದು ಕುಂದಾಪುರ ಉಪ ವಿಭಾಗಾಧಿಕಾರಿ ಕೆ.ರಾಜು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<p>ಬೆಟ್ಟದ ಬುಡದಲ್ಲಿರುವ ಮನ್ನಾಡಿ ಗ್ರಾಮಕ್ಕೂ ಭೇಟಿನೀಡಿ ಜನರ ಅಭಿಪ್ರಾಯ ಹಾಗೂ ಅಹವಾಲು ಆಲಿಸಲಾಗಿದೆ. ಮಂಗಳವಾರ ವನ್ಯಜೀವಿ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲಿದ್ದಾರೆ. ಭೂಗರ್ಭ ಇಲಾಖೆಯ ಅಧಿಕಾರಿಗಳಿಗೂ ಸ್ಥಳಕ್ಕೆ ತೆರಳಿ ವಸ್ತುಸ್ಥಿತಿ ಅಧ್ಯಯನಮಾಡಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಎಸಿ ತಿಳಿಸಿದರು.</p>.<p><strong>ಮಳೆ ಕ್ಷೀಣ:</strong>ಜಿಲ್ಲೆಯಲ್ಲಿ ಬುಧವಾರ ಸಾಧಾರಣ ಪ್ರಮಾಣದ ಮಳೆಯಾಗಿದ್ದು, ಬೈಂದೂರು ತಾಲ್ಲೂಕಿನ ಕಾಲ್ತೋಡಿನಲ್ಲಿ ಗರಿಷ್ಠ 7.8 ಸೆಂ.ಮೀ, ಕುಂದಾಪುರದ ಕಿರಿಮಂಜೇಶ್ವರದಲ್ಲಿ 7.5 ಸೆಂ.ಮೀ ಮಳ ಬಿದ್ದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>