ಮೂರನೇ ಬಾರಿ: ಈ ಬಾರಿಯ ಚುನಾವಣಾ ಪ್ರಚಾರದ ವೇಳೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಮಗೆ ಸಚಿವ ಸ್ಥಾನ ಸಿಗಲಿದೆ ಎಂದು ಅವರು ಹೇಳಿಕೆ ನೀಡಿದ್ದರು. ಇದೀಗ, ಮತ ಎಣಿಕೆ ನಂತರ ಕೆ.ಎಸ್. ಈಶ್ವರಪ್ಪ ಹಾಗೂ ಸಂಗಮೇಶ್ವರ ಪರಸ್ಪರ ಹಸ್ತಲಾಘವ ಮಾಡಿ ತಬ್ಬಿಕೊಂಡಿದ್ದ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಾ ಊಹಾಪೋಹಗಳಿಗೆ ಎಡೆ ಮಾಡಿದೆ.