ಬಳಿಕ ಮಾತನಾಡಿದ ನಿತ್ಯಾನಂದ ಒಳಕಾಡು, ಗುಂಡಿಬೈಲು ರಸ್ತೆಯ ತುಂಬೆಲ್ಲ ಗುಂಡಿಗಳು ಬಿದ್ದಿದ್ದು, ವಾಹನಗಳು ಸಂಚರಿಸಲಾಗದ ಪರಿಸ್ಥಿತಿ ಎದುರಾಗಿದೆ. ಆಸ್ಪತ್ರೆಗೆ ರೋಗಿಗಳನ್ನು ಸಾಗಿಸುವುದು ಸವಾಲಿನ ಕೆಲಸವಾಗಿದೆ. ಸ್ವತಃ ಆಂಬುಲೆನ್ಸ್ನಲ್ಲಿ ಗರ್ಭಿಣಿಯನ್ನು ಸಾಗಿಸುವಾಗ ಹೊಂಡ ಗುಂಡಿಗಳನ್ನು ತಪ್ಪಿಸಿ ವಾಹನ ಓಡಿಸುವುದು ಸವಾಲಾಗಿತ್ತು ಎಂದು ಅನುಭವ ಹಂಚಿಕೊಂಡರು.