<p><strong>ಉಡುಪಿ: </strong>ಬೈಂದೂರು ವ್ಯಾಪ್ತಿಯ ಉಪ್ಪುಂದ ಬಳಿಯ ತಾರಾಪತಿ ಕಡಲ ಕಿನಾರೆಯಲ್ಲಿ ಆಲಿವ್ ರಿಡ್ಲಿ ಜಾತಿಗೆ ಸೇರಿದ ಕಡಲಾಮೆಯ ಮೊಟ್ಟೆಯಿಂದ ನೂರಕ್ಕೂ ಹೆಚ್ಚು ಮರಿಗಳು ಹೊರಬಂದು ಕಡಲು ಸೇರಿವೆ.</p>.<p>‘60 ದಿನಗಳ ಹಿಂದೆ ತಾರಾಪತಿ ಕಡಲು ಕಿನಾರೆಯಲ್ಲಿ ಆಮೆ ಮೊಟ್ಟೆ ಇಟ್ಟಿರುವ ಜಾಗವನ್ನು ಗುರುತಿಸಿ ಅದರ ಮೇಲೆ ಗೂಡನ್ನು ಸ್ಥಾಪಿಸಿದ್ದೆವು. ಸೋಮವಾರ ಬೆಳಿಗ್ಗೆ ಈ ಮೊಟ್ಟೆಗಳಿಂದ 100 ರಿಂದ 105 ರಷ್ಟು ಮರಿಗಳು ಹೊರಬಂದು ಸುರಕ್ಷಿತವಾಗಿ ಕಡಲು ಸೇರಿವೆ’ ಎಂದು ಬೈಂದೂರು ವಲಯ ಅರಣ್ಯಾಧಿಕಾರಿ ಸಂದೇಶ್ ಕುಮಾರ್ ತಿಳಿಸಿದ್ದಾರೆ.</p>.<p>ಬೈಂದೂರು ವ್ಯಾಪ್ತಿಯಲ್ಲಿ ಮೂರು ಕಡೆ ಗ್ರಾಮಸ್ಥರ ಸಹಕಾರದಲ್ಲಿ ಅರಣ್ಯ ಇಲಾಖೆಯು ಕಡಲಾಮೆಗಳ ಮೊಟ್ಟೆಗಳನ್ನು ಸಂರಕ್ಷಿಸಿದ್ದು, ಈಗಾಗಲೇ 300 ಕ್ಕೂ ಹೆಚ್ಚು ಮರಿಗಳು ಸುರಕ್ಷಿತವಾಗಿ ಸಮುದ್ರ ಸೇರಿವೆ ಎಂದು ಅವರು ವಿವರಿಸಿದರು.<br><br>ಕುಂದಾಪುರ ಅರಣ್ಯ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ., ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಊರವರ ಸಹಕಾರದಲ್ಲಿ ಕಡಲಾಮೆ ಮೊಟ್ಟೆಗಳನ್ನು ಸಂರಕ್ಷಿಸಿದ್ದರು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಬೈಂದೂರು ವ್ಯಾಪ್ತಿಯ ಉಪ್ಪುಂದ ಬಳಿಯ ತಾರಾಪತಿ ಕಡಲ ಕಿನಾರೆಯಲ್ಲಿ ಆಲಿವ್ ರಿಡ್ಲಿ ಜಾತಿಗೆ ಸೇರಿದ ಕಡಲಾಮೆಯ ಮೊಟ್ಟೆಯಿಂದ ನೂರಕ್ಕೂ ಹೆಚ್ಚು ಮರಿಗಳು ಹೊರಬಂದು ಕಡಲು ಸೇರಿವೆ.</p>.<p>‘60 ದಿನಗಳ ಹಿಂದೆ ತಾರಾಪತಿ ಕಡಲು ಕಿನಾರೆಯಲ್ಲಿ ಆಮೆ ಮೊಟ್ಟೆ ಇಟ್ಟಿರುವ ಜಾಗವನ್ನು ಗುರುತಿಸಿ ಅದರ ಮೇಲೆ ಗೂಡನ್ನು ಸ್ಥಾಪಿಸಿದ್ದೆವು. ಸೋಮವಾರ ಬೆಳಿಗ್ಗೆ ಈ ಮೊಟ್ಟೆಗಳಿಂದ 100 ರಿಂದ 105 ರಷ್ಟು ಮರಿಗಳು ಹೊರಬಂದು ಸುರಕ್ಷಿತವಾಗಿ ಕಡಲು ಸೇರಿವೆ’ ಎಂದು ಬೈಂದೂರು ವಲಯ ಅರಣ್ಯಾಧಿಕಾರಿ ಸಂದೇಶ್ ಕುಮಾರ್ ತಿಳಿಸಿದ್ದಾರೆ.</p>.<p>ಬೈಂದೂರು ವ್ಯಾಪ್ತಿಯಲ್ಲಿ ಮೂರು ಕಡೆ ಗ್ರಾಮಸ್ಥರ ಸಹಕಾರದಲ್ಲಿ ಅರಣ್ಯ ಇಲಾಖೆಯು ಕಡಲಾಮೆಗಳ ಮೊಟ್ಟೆಗಳನ್ನು ಸಂರಕ್ಷಿಸಿದ್ದು, ಈಗಾಗಲೇ 300 ಕ್ಕೂ ಹೆಚ್ಚು ಮರಿಗಳು ಸುರಕ್ಷಿತವಾಗಿ ಸಮುದ್ರ ಸೇರಿವೆ ಎಂದು ಅವರು ವಿವರಿಸಿದರು.<br><br>ಕುಂದಾಪುರ ಅರಣ್ಯ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ., ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಊರವರ ಸಹಕಾರದಲ್ಲಿ ಕಡಲಾಮೆ ಮೊಟ್ಟೆಗಳನ್ನು ಸಂರಕ್ಷಿಸಿದ್ದರು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>