ದೇಶವನ್ನು ಮುನ್ನಡೆಸುವ ಮಹಾ ನಾಯಕರು ಹುಟ್ಟಿದ್ದು ಗ್ರಾಮೀಣ ಪ್ರದೇಶಗಳಲ್ಲಿ. ಓದಿದ್ದು ಮಾತೃ ಭಾಷೆಯಲ್ಲಿ. ಕನ್ನಡ ಮಾಧ್ಯಮ ಶಾಲೆಗಳು ವಿದ್ಯಾರ್ಥಿಗಳಲ್ಲಿ ಅದಮ್ಯ, ಆತ್ಮವಿಶ್ವಾಸ ತುಂಬುವ, ಸಂಪ್ರದಾಯ ಮತ್ತು ಸಂಸ್ಕೃತಿಯ ಸೊಗಡನ್ನು ಮೈಗೂಡಿಸುವ ಕೇಂದ್ರಗಳಾಗಿವೆ. ಹಲವು ಕ್ಷೇತ್ರಗಳಲ್ಲಿ ದಾಖಲೆಗಳನ್ನು ನಿರ್ಮಿಸಿರುವ ನಿಟ್ಟೂರು ವಿದ್ಯಾಸಂಸ್ಥೆಗೆ ಧನಸಹಾಯ ಮಾಡುತ್ತಿರುವುದು ಅತೀವ ಸಂತಸ ತಂದಿದೆ ಎಂದರು.