<p><strong>ಉಡುಪಿ:</strong> ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಆನ್ಲೈನ್ನಲ್ಲಿ ಹಣ ವಂಚನೆ ಮಾಡಿರುವ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಉಡುಪಿಯ ಸೆನ್ ಅಪರಾಧ ಠಾಣೆಯ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.</p>.<p>ಪೆರಂಪಳ್ಳಿಯ ತೀರ್ಥರಾಜ ಶೆಣೈ ಎಂಬುವವರನ್ನು ಅಪರಿಚಿತ ವ್ಯಕ್ತಿಯು ಟೆಲಿಗ್ರಾಮ್ ಗ್ರೂಪ್ಗೆ ಸೇರಿಸಿದ್ದು, ಅದರಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ಆಮಿಷವೊಡ್ಡಲಾಗಿತ್ತು.</p>.<p>ಅದನ್ನು ನಂಬಿದ ತೀರ್ಥರಾಜ ಅವರು ಹಂತ ಹಂತವಾಗಿ ಒಟ್ಟು ₹ 44 ಲಕ್ಷ ಹೂಡಿಕೆ ಮಾಡಿದ್ದಾರೆ. ಬಳಿಕ ಹಣ ನೀಡದೆ ವಂಚಿಸಿರುವಾಗಿ ತೀರ್ಥರಾಜ ಅವರು ಸೆನ್ ಅಪರಾಧ ಠಾಣೆಗೆ ದೂರು ನೀಡಿದ್ದರು.</p>.<p>ಈ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ಜಿಲ್ಲೆಯ ಹುಣಸೂರಿನ ಶೋಯಬ್ ಅಹಮದ್ (28) ಮತ್ತು ಮುದ್ದಾಸಿರ್ ಅಹಮದ್(40) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ₹2 ಲಕ್ಷ ನಗದು ಹಾಗೂ ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆಯಲಾಗಿದೆ.</p>.<p>ಕಾಪು ತಾಲ್ಲೂಕಿನ ಶಂಕರಪುರದ ಜೊಸ್ಸಿ ರವೀಂದ್ರ ಡಿಕ್ರೂಸ್ ಎಂಬುವವರಿಗೆ ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಮಂಗಳೂರಿನ ಸುರತ್ಕಲ್ನ ಮೊಹಮದ್ ಕೈಸ್ (20), ಹೆಜಮಾಡಿ ಮಂಜತೋಟದ ಅಹಮದ್ ಅನ್ವೀಜ್(20), ಬಂಟ್ವಾಳದ ಮೂಡ ಗ್ರಾಮದ ಸಪ್ವಾನ್(30), ತಾಸೀರ್(31) ಬಂಧಿತ ಆರೋಪಿಗಳು. ಇವರಿಂದ ₹ 4 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಇತರ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜೊಸ್ಸಿ ಅವರಿಗೆ ಫೇಸ್ಬುಕ್ನಲ್ಲಿ ಅರೋಹಿ ಅಗರ್ವಾಲ್ ಎಂಬ ಮಹಿಳೆಯ ಪರಿಚಯವಾಗಿದ್ದು, ಆಕೆ ವಾಟ್ಸ್ಆ್ಯಪ್ನಲ್ಲಿ ಮೆಸೇಜ್ ಮಾಡಿ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿದ್ದಳು. ಅದನ್ನು ನಂಬಿದ ಜೊಸ್ಸಿ ಅವರು ಹಂತ ಹಂತವಾಗಿ ಒಟ್ಟು ₹ 75 ಲಕ್ಷ ಹೂಡಿಕೆ ಮಾಡಿದ್ದರು. ಬಳಿಕ ಹೂಡಿಕೆ ಮಾಡಿದ ಹಣವ್ನಾಗಲಿ, ಲಾಭಾಂಶವನ್ನಾಗಲಿ ನೀಡದೆ ವಂಚಿಸಲಾಗಿದೆ ಎಂದು ದೂರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಆನ್ಲೈನ್ನಲ್ಲಿ ಹಣ ವಂಚನೆ ಮಾಡಿರುವ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಉಡುಪಿಯ ಸೆನ್ ಅಪರಾಧ ಠಾಣೆಯ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.</p>.<p>ಪೆರಂಪಳ್ಳಿಯ ತೀರ್ಥರಾಜ ಶೆಣೈ ಎಂಬುವವರನ್ನು ಅಪರಿಚಿತ ವ್ಯಕ್ತಿಯು ಟೆಲಿಗ್ರಾಮ್ ಗ್ರೂಪ್ಗೆ ಸೇರಿಸಿದ್ದು, ಅದರಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ಆಮಿಷವೊಡ್ಡಲಾಗಿತ್ತು.</p>.<p>ಅದನ್ನು ನಂಬಿದ ತೀರ್ಥರಾಜ ಅವರು ಹಂತ ಹಂತವಾಗಿ ಒಟ್ಟು ₹ 44 ಲಕ್ಷ ಹೂಡಿಕೆ ಮಾಡಿದ್ದಾರೆ. ಬಳಿಕ ಹಣ ನೀಡದೆ ವಂಚಿಸಿರುವಾಗಿ ತೀರ್ಥರಾಜ ಅವರು ಸೆನ್ ಅಪರಾಧ ಠಾಣೆಗೆ ದೂರು ನೀಡಿದ್ದರು.</p>.<p>ಈ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ಜಿಲ್ಲೆಯ ಹುಣಸೂರಿನ ಶೋಯಬ್ ಅಹಮದ್ (28) ಮತ್ತು ಮುದ್ದಾಸಿರ್ ಅಹಮದ್(40) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ₹2 ಲಕ್ಷ ನಗದು ಹಾಗೂ ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆಯಲಾಗಿದೆ.</p>.<p>ಕಾಪು ತಾಲ್ಲೂಕಿನ ಶಂಕರಪುರದ ಜೊಸ್ಸಿ ರವೀಂದ್ರ ಡಿಕ್ರೂಸ್ ಎಂಬುವವರಿಗೆ ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಮಂಗಳೂರಿನ ಸುರತ್ಕಲ್ನ ಮೊಹಮದ್ ಕೈಸ್ (20), ಹೆಜಮಾಡಿ ಮಂಜತೋಟದ ಅಹಮದ್ ಅನ್ವೀಜ್(20), ಬಂಟ್ವಾಳದ ಮೂಡ ಗ್ರಾಮದ ಸಪ್ವಾನ್(30), ತಾಸೀರ್(31) ಬಂಧಿತ ಆರೋಪಿಗಳು. ಇವರಿಂದ ₹ 4 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಇತರ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜೊಸ್ಸಿ ಅವರಿಗೆ ಫೇಸ್ಬುಕ್ನಲ್ಲಿ ಅರೋಹಿ ಅಗರ್ವಾಲ್ ಎಂಬ ಮಹಿಳೆಯ ಪರಿಚಯವಾಗಿದ್ದು, ಆಕೆ ವಾಟ್ಸ್ಆ್ಯಪ್ನಲ್ಲಿ ಮೆಸೇಜ್ ಮಾಡಿ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿದ್ದಳು. ಅದನ್ನು ನಂಬಿದ ಜೊಸ್ಸಿ ಅವರು ಹಂತ ಹಂತವಾಗಿ ಒಟ್ಟು ₹ 75 ಲಕ್ಷ ಹೂಡಿಕೆ ಮಾಡಿದ್ದರು. ಬಳಿಕ ಹೂಡಿಕೆ ಮಾಡಿದ ಹಣವ್ನಾಗಲಿ, ಲಾಭಾಂಶವನ್ನಾಗಲಿ ನೀಡದೆ ವಂಚಿಸಲಾಗಿದೆ ಎಂದು ದೂರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>