<p><strong>ಉಡುಪಿ</strong>: ಬ್ರಾಹ್ಮಣರ ಜಾತಿ ಹೆಸರಿನಲ್ಲಿ ಕೀಳುಮಟ್ಟದಲ್ಲಿ ಮಾತನಾಡಿರುವುದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಶೋಭೆ ತರುವುದಿಲ್ಲ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.</p>.<p>ಬುಧವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಕುಟುಂಬ ಆಧಾರಿತ ಮುಖ್ಯಮಂತ್ರಿ ಆಯ್ಕೆ ನಡೆಯುವುದು ಜೆಡಿಎಸ್ ಪಕ್ಷದಲ್ಲಿ ಮಾತ್ರ. ಬಿಜೆಪಿಯಲ್ಲಿ ಕುಟುಂಬ ಹಾಗೂ ಜಾತಿ ಆಧಾರಿತ ಮುಖ್ಯಮಂತ್ರಿ ಆಯ್ಕೆ ನಡೆಯುವುದಿಲ್ಲ. ಪಕ್ಷನಿಷ್ಠೆ, ಅನುಭವ ಹಾಗೂ ಅರ್ಹತೆ ಇರುವ ಯಾವ ಸಮುದಾಯದವರು ಬೇಕಾದರೂ ಮುಖ್ಯಮಂತ್ರಿಯಾಗಬಹುದು ಎಂದರು.</p>.<p>ಕಾಂಗ್ರೆಸ್ ಹಾಗೂ ಜೆಡಿಎಸ್ ರಾಜ್ಯದ ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆಗಳನ್ನು ಎದುಸಿರಿಲ್ಲ. ಜಾತಿ ಆಧಾರಿತ ಹಾಗೂ ಸಮಾಜ ವಿಭಜಿಸುವ ಕಾರ್ಯವನ್ನು ಹಿಂದಿನಿಂದಲೂ ಮಾಡಿಕೊಂಡು ಬಂದಿವೆ ಎಂದು ವಾಗ್ದಾಳಿ ನಡೆಸಿದರು.</p>.<p>ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬ್ರಾಹ್ಮಣ ಸಿಎಂ ಹೇಳಿಕೆ ಪರೋಕ್ಷವಾಗಿ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ಸೂಚನೆಯಾಗಿದೆ. ಬಿಜೆಪಿ ಪಕ್ಷದಿಂದ ಯಾರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.</p>.<p><strong>ಮತ್ತೆ ಬಿಜೆಪಿ ತೆಕ್ಕೆಗೆ ಕರಾವಳಿ:</strong></p>.<p>ಕ್ಯಾಂಪ್ಕೋ ಸುವರ್ಣ ಮಹೋತ್ಸವದ ಅಂಗವಾಗಿ ಅಡಿಕೆ ಬೆಳೆಗಾರರ ಹಾಗೂ ಸಹಕಾರಿಗಳ ಸಮ್ಮೇಳನ ಪುತ್ತೂರಿನಲ್ಲಿ ನಡೆಯುತ್ತಿದ್ದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಭಾಗವಹಿಸುತ್ತಿದ್ದಾರೆ. ಶಾ ಭೇಟಿ ಹಿನ್ನೆಲೆಯಲ್ಲಿ ಸಹಜವಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.</p>.<p>ಮುಂಬರುವ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಹಿಂದುತ್ವ ಹಾಗೂ ಅಭಿವೃದ್ಧಿಗೆ ಮತದಾರ ಮತ ಹಾಕುವ ವಿಶ್ವಾಸವಿದೆ ಎಂದರು.</p>.<p><strong>ಸಾಮಾನ್ಯ ಪ್ರಕ್ರಿಯೆ:</strong></p>.<p>ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತಿವರ್ಷ ಬಜೆಟ್ ಮಂಡನೆಗೂ ಮುನ್ನ ವಿದ್ಯುತ್ ದರ ಪರಿಷ್ಕರಣೆ ಸಂಬಂಧ ಸರ್ಕಾರಕ್ಕೆ ಮನವಿ ಸಲ್ಲಿಸುತ್ತವೆ. ಇದೊಂದು ಸಹಜ ಪ್ರಕ್ರಿಯೆ. ಕೆಆರ್ಸಿಯು ಸಾರ್ವಜನಿಕರ ಹಾಗೂ ವಿದ್ಯುತ್ ಸರಬರಾಜು ಕಂಪೆನಿಗಳ ಅಭಿಪ್ರಾಯ ಪಡೆದು ವಿದ್ಯುತ್ ದರ ಏರಿಕೆಯ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.</p>.<p>ಇವನ್ನೂ ಓದಿ: <a href="https://cms.prajavani.net/district/uttara-kannada/priest-urges-to-clarification-from-h-d-kumaraswamy-on-statement-about-brahmin-pralhad-joshi-1013521.html" itemprop="url">ಬ್ರಾಹ್ಮಣರ ಕುರಿತ ಹೇಳಿಕೆ: ಕುಮಾರಸ್ವಾಮಿ ಎದುರು ಸ್ಪಷ್ಟನೆಗೆ ಆಗ್ರಹಿಸಿದ ಅರ್ಚಕ </a></p>.<p> <a href="https://www.prajavani.net/karnataka-news/brahmana-cm-issue-pejavar-shree-reaction-on-hdk-statement-1013172.html" itemprop="url" target="_blank">ಬ್ರಾಹ್ಮಣರೇಕೆ ಮುಖ್ಯಮಂತ್ರಿ ಆಗಬಾರದು? ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ</a></p>.<p> <a href="https://www.prajavani.net/karnataka-news/brahamana-sabha-statement-on-hdk-1013174.html" itemprop="url" target="_blank">ಕುಮಾರಸ್ವಾಮಿ ಹೇಳಿಕೆಗೆ ಬ್ರಾಹ್ಮಣ ಮಹಾಸಭಾ ಖಂಡನೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಬ್ರಾಹ್ಮಣರ ಜಾತಿ ಹೆಸರಿನಲ್ಲಿ ಕೀಳುಮಟ್ಟದಲ್ಲಿ ಮಾತನಾಡಿರುವುದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಶೋಭೆ ತರುವುದಿಲ್ಲ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.</p>.<p>ಬುಧವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಕುಟುಂಬ ಆಧಾರಿತ ಮುಖ್ಯಮಂತ್ರಿ ಆಯ್ಕೆ ನಡೆಯುವುದು ಜೆಡಿಎಸ್ ಪಕ್ಷದಲ್ಲಿ ಮಾತ್ರ. ಬಿಜೆಪಿಯಲ್ಲಿ ಕುಟುಂಬ ಹಾಗೂ ಜಾತಿ ಆಧಾರಿತ ಮುಖ್ಯಮಂತ್ರಿ ಆಯ್ಕೆ ನಡೆಯುವುದಿಲ್ಲ. ಪಕ್ಷನಿಷ್ಠೆ, ಅನುಭವ ಹಾಗೂ ಅರ್ಹತೆ ಇರುವ ಯಾವ ಸಮುದಾಯದವರು ಬೇಕಾದರೂ ಮುಖ್ಯಮಂತ್ರಿಯಾಗಬಹುದು ಎಂದರು.</p>.<p>ಕಾಂಗ್ರೆಸ್ ಹಾಗೂ ಜೆಡಿಎಸ್ ರಾಜ್ಯದ ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆಗಳನ್ನು ಎದುಸಿರಿಲ್ಲ. ಜಾತಿ ಆಧಾರಿತ ಹಾಗೂ ಸಮಾಜ ವಿಭಜಿಸುವ ಕಾರ್ಯವನ್ನು ಹಿಂದಿನಿಂದಲೂ ಮಾಡಿಕೊಂಡು ಬಂದಿವೆ ಎಂದು ವಾಗ್ದಾಳಿ ನಡೆಸಿದರು.</p>.<p>ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬ್ರಾಹ್ಮಣ ಸಿಎಂ ಹೇಳಿಕೆ ಪರೋಕ್ಷವಾಗಿ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ಸೂಚನೆಯಾಗಿದೆ. ಬಿಜೆಪಿ ಪಕ್ಷದಿಂದ ಯಾರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.</p>.<p><strong>ಮತ್ತೆ ಬಿಜೆಪಿ ತೆಕ್ಕೆಗೆ ಕರಾವಳಿ:</strong></p>.<p>ಕ್ಯಾಂಪ್ಕೋ ಸುವರ್ಣ ಮಹೋತ್ಸವದ ಅಂಗವಾಗಿ ಅಡಿಕೆ ಬೆಳೆಗಾರರ ಹಾಗೂ ಸಹಕಾರಿಗಳ ಸಮ್ಮೇಳನ ಪುತ್ತೂರಿನಲ್ಲಿ ನಡೆಯುತ್ತಿದ್ದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಭಾಗವಹಿಸುತ್ತಿದ್ದಾರೆ. ಶಾ ಭೇಟಿ ಹಿನ್ನೆಲೆಯಲ್ಲಿ ಸಹಜವಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.</p>.<p>ಮುಂಬರುವ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಹಿಂದುತ್ವ ಹಾಗೂ ಅಭಿವೃದ್ಧಿಗೆ ಮತದಾರ ಮತ ಹಾಕುವ ವಿಶ್ವಾಸವಿದೆ ಎಂದರು.</p>.<p><strong>ಸಾಮಾನ್ಯ ಪ್ರಕ್ರಿಯೆ:</strong></p>.<p>ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತಿವರ್ಷ ಬಜೆಟ್ ಮಂಡನೆಗೂ ಮುನ್ನ ವಿದ್ಯುತ್ ದರ ಪರಿಷ್ಕರಣೆ ಸಂಬಂಧ ಸರ್ಕಾರಕ್ಕೆ ಮನವಿ ಸಲ್ಲಿಸುತ್ತವೆ. ಇದೊಂದು ಸಹಜ ಪ್ರಕ್ರಿಯೆ. ಕೆಆರ್ಸಿಯು ಸಾರ್ವಜನಿಕರ ಹಾಗೂ ವಿದ್ಯುತ್ ಸರಬರಾಜು ಕಂಪೆನಿಗಳ ಅಭಿಪ್ರಾಯ ಪಡೆದು ವಿದ್ಯುತ್ ದರ ಏರಿಕೆಯ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.</p>.<p>ಇವನ್ನೂ ಓದಿ: <a href="https://cms.prajavani.net/district/uttara-kannada/priest-urges-to-clarification-from-h-d-kumaraswamy-on-statement-about-brahmin-pralhad-joshi-1013521.html" itemprop="url">ಬ್ರಾಹ್ಮಣರ ಕುರಿತ ಹೇಳಿಕೆ: ಕುಮಾರಸ್ವಾಮಿ ಎದುರು ಸ್ಪಷ್ಟನೆಗೆ ಆಗ್ರಹಿಸಿದ ಅರ್ಚಕ </a></p>.<p> <a href="https://www.prajavani.net/karnataka-news/brahmana-cm-issue-pejavar-shree-reaction-on-hdk-statement-1013172.html" itemprop="url" target="_blank">ಬ್ರಾಹ್ಮಣರೇಕೆ ಮುಖ್ಯಮಂತ್ರಿ ಆಗಬಾರದು? ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ</a></p>.<p> <a href="https://www.prajavani.net/karnataka-news/brahamana-sabha-statement-on-hdk-1013174.html" itemprop="url" target="_blank">ಕುಮಾರಸ್ವಾಮಿ ಹೇಳಿಕೆಗೆ ಬ್ರಾಹ್ಮಣ ಮಹಾಸಭಾ ಖಂಡನೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>