ಆದರೆ, ಸಮ್ಮೇಳನದ ದಿಕ್ಷೂಚಿ ಭಾಷಣಕ್ಕೆ ಸಂಘಟಕ, ಕಲಾವಿದ, ಪ್ರಸಂಗ ಕರ್ತ ಅಥವಾ ವಿಮರ್ಶಕನೂ ಅಲ್ಲದ ರೋಹಿತ್ ಚಕ್ರತೀರ್ಥರನ್ನು ಆರಿಸಲಾಗಿದೆ. ಯಕ್ಷಗಾನ ಲೋಕದಲ್ಲಿ ಚಕ್ರತೀರ್ಥರಿಗಿಂತ ಬಹಳ ಸಾಧನೆ ಮಾಡಿರುವ ಡಾ.ವಿವೇಕ ರೈ, ಡಾ.ಚಿನ್ನಪ್ಪ ಗೌಡ, ಡಾ.ಚಂದ್ರಶೇಖರ ದಾಮ್ಲೆ, ಡಾ.ರಾಘವ ನಂಬಿಯಾರ್, ಡಾ.ಪಾದೆಕಲ್ಲು ವಿಷ್ಣು ಭಟ್, ಡಾ.ವಸಂತ ಭಾರದ್ವಾಜ್. ಡಾ.ನಾಗವೇಣಿ ಮಂಚಿ, ರಾಧಾಕೃಷ್ಣ ಕಲ್ಚಾರ್, ಕಲಾವಿದ ಜಬ್ಬಾರ್ ಸಮೋ, ಡಾ.ಪೃಥ್ವಿರಾಜ ಕವತ್ತಾರ್, ಡಾ.ಆನಂದ ರಾಮ ಉಪಾಧ್ಯ, ಡಾ.ಜಿ.ಎಸ್.ಭಟ್, ಗೋಪಾಲಕೃಷ್ಣ ಭಾಗವತ, ಕೆರೆಮನೆ ಶಿವಾನಂದ ಹೆಗಡೆ, ವಿದ್ವಾನ್ ರಂಗಾ ಭಟ್ಟ ಮೊದಲಾದ ಅಸಂಖ್ಯ ಮಹನೀಯರಿದ್ದಾರೆ.