<p><strong>ಉಡುಪಿ</strong>: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಬೈಂದೂರು ಹಾಗೂ ಕುಂದಾಪುರ ತಾಲ್ಲೂಕಿನ ಕೆಲವು ಗ್ರಾಮ ಪಂಚಾಯಿತಿ ಸದಸ್ಯರು ಸೋಮವಾರ ನಡೆದ ದಕ್ಷಿಣ ಕನ್ನಡ -ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನಪರಿಷತ್ ಉಪ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ.</p>.<p>ಬೈಂದೂರು ತಾಲ್ಲೂಕಿನ ಜಡ್ಕಲ್ ಗ್ರಾಮ ಪಂಚಾಯಿತಿಯ ಎಲ್ಲಾ 18 ಮಂದಿ ಸದಸ್ಯರು ಹಾಗೂ ಕುಂದಾಪುರ ತಾಲ್ಲೂಕಿನ ಕೆರಾಡಿ ಪಂಚಾಯಿತಿಯ ಎಲ್ಲಾ 14 ಮಂದಿ ಸದಸ್ಯರು ಮತದಾನ ಬಹಿಷ್ಕರಿಸಿದ್ದಾರೆ.</p>.<p>ಕುಂದಾಪುರ ತಾಲ್ಲೂಕಿನ ಚಿತ್ತೂರಿನಲ್ಲಿ ಇಬ್ಬರು ಸದಸ್ಯರಷ್ಟೇ ಮತದಾನ ಮಾಡಿದ್ದಾರೆ. ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಉಳಿದ ಆರು ಮಂದಿ ಮತದಾನ ಮಾಡಿಲ್ಲ. ಇಡೂರು ಕುಂಜ್ಞಾಡಿ ಗ್ರಾಮ ಪಂಚಾಯಿತಿಯ 12 ಸದಸ್ಯರ ಪೈಕಿ ಎಂಟು ಮಂದಿಯಷ್ಟೇ ಮತದಾನ ಮಾಡಿದ್ದಾರೆ.</p>.<p>ಕುಂದಾಪುರ ತಾಲ್ಲೂಕಿನ ಗೋಳಿಹೊಳೆ ಗ್ರಾಮ ಪಂಚಾಯಿತಿಯಲ್ಲಿ 16 ಮಂದಿ ಸದಸ್ಯರಲ್ಲಿ ಐದು ಮಂದಿಯಷ್ಟೇ ಮತದಾನ ಮಾಡಿದ್ದಾರೆ. ಆಲೂರು ಗ್ರಾಮ ಪಂಚಾಯಿತಿಯ 14 ಮಂದಿ ಸದಸ್ಯರಲ್ಲಿ ಐದು ಮಂದಿಯಷ್ಟೇ ಮತ ಚಲಾಯಿಸಿದ್ದಾರೆ.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಸಹಾಯಕ ಆಯುಕ್ತ ಮಹೇಶ್ಚಂದ್ರ ಅವರು ಮತದಾನ ಬಹಿಷ್ಕಾರಕ್ಕೆ ಕರೆ ನೀಡಿದ್ದ ಗ್ರಾಮ ಪಂಚಾಯಿತಿಗಳ ಸದಸ್ಯರ ಮನವೊಲಿಸಲು ಯತ್ನಿಸಿದ್ದರೂ ಪ್ರಯೋಜನವಾಗಿಲ್ಲ.</p>.<p>ಕಸ್ತೂರಿ ರಂಗನ್ ವರದಿಯಿಂದ ತಮ್ಮ ಗ್ರಾಮಗಳನ್ನು ಹೊರಗಿಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಈ ಗ್ರಾಮ ಪಂಚಾಯಿತಿಗಳ ಸದಸ್ಯರು ಆಗ್ರಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಬೈಂದೂರು ಹಾಗೂ ಕುಂದಾಪುರ ತಾಲ್ಲೂಕಿನ ಕೆಲವು ಗ್ರಾಮ ಪಂಚಾಯಿತಿ ಸದಸ್ಯರು ಸೋಮವಾರ ನಡೆದ ದಕ್ಷಿಣ ಕನ್ನಡ -ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನಪರಿಷತ್ ಉಪ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ.</p>.<p>ಬೈಂದೂರು ತಾಲ್ಲೂಕಿನ ಜಡ್ಕಲ್ ಗ್ರಾಮ ಪಂಚಾಯಿತಿಯ ಎಲ್ಲಾ 18 ಮಂದಿ ಸದಸ್ಯರು ಹಾಗೂ ಕುಂದಾಪುರ ತಾಲ್ಲೂಕಿನ ಕೆರಾಡಿ ಪಂಚಾಯಿತಿಯ ಎಲ್ಲಾ 14 ಮಂದಿ ಸದಸ್ಯರು ಮತದಾನ ಬಹಿಷ್ಕರಿಸಿದ್ದಾರೆ.</p>.<p>ಕುಂದಾಪುರ ತಾಲ್ಲೂಕಿನ ಚಿತ್ತೂರಿನಲ್ಲಿ ಇಬ್ಬರು ಸದಸ್ಯರಷ್ಟೇ ಮತದಾನ ಮಾಡಿದ್ದಾರೆ. ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಉಳಿದ ಆರು ಮಂದಿ ಮತದಾನ ಮಾಡಿಲ್ಲ. ಇಡೂರು ಕುಂಜ್ಞಾಡಿ ಗ್ರಾಮ ಪಂಚಾಯಿತಿಯ 12 ಸದಸ್ಯರ ಪೈಕಿ ಎಂಟು ಮಂದಿಯಷ್ಟೇ ಮತದಾನ ಮಾಡಿದ್ದಾರೆ.</p>.<p>ಕುಂದಾಪುರ ತಾಲ್ಲೂಕಿನ ಗೋಳಿಹೊಳೆ ಗ್ರಾಮ ಪಂಚಾಯಿತಿಯಲ್ಲಿ 16 ಮಂದಿ ಸದಸ್ಯರಲ್ಲಿ ಐದು ಮಂದಿಯಷ್ಟೇ ಮತದಾನ ಮಾಡಿದ್ದಾರೆ. ಆಲೂರು ಗ್ರಾಮ ಪಂಚಾಯಿತಿಯ 14 ಮಂದಿ ಸದಸ್ಯರಲ್ಲಿ ಐದು ಮಂದಿಯಷ್ಟೇ ಮತ ಚಲಾಯಿಸಿದ್ದಾರೆ.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಸಹಾಯಕ ಆಯುಕ್ತ ಮಹೇಶ್ಚಂದ್ರ ಅವರು ಮತದಾನ ಬಹಿಷ್ಕಾರಕ್ಕೆ ಕರೆ ನೀಡಿದ್ದ ಗ್ರಾಮ ಪಂಚಾಯಿತಿಗಳ ಸದಸ್ಯರ ಮನವೊಲಿಸಲು ಯತ್ನಿಸಿದ್ದರೂ ಪ್ರಯೋಜನವಾಗಿಲ್ಲ.</p>.<p>ಕಸ್ತೂರಿ ರಂಗನ್ ವರದಿಯಿಂದ ತಮ್ಮ ಗ್ರಾಮಗಳನ್ನು ಹೊರಗಿಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಈ ಗ್ರಾಮ ಪಂಚಾಯಿತಿಗಳ ಸದಸ್ಯರು ಆಗ್ರಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>