<p>ಉಡುಪಿ: ಚಿತ್ರ ನಿರ್ದೇಶಕರ ತಾತ್ವಿಕ ದೃಷ್ಟಿಕೋನ ಎಲ್ಲಾ ತಾಂತ್ರಿಕ ಅಂಶಗಳಿಗಿಂತ ಹೆಚ್ಚು ಮಹತ್ವದ್ದು ಮತ್ತು ಈ ದೃಷ್ಟಿಕೋನವೇ ತಾಂತ್ರಿಕ ಅಂಶಗಳು ಬಳಸಲ್ಪಡುವ ರೀತಿಯನ್ನು ನಿರ್ಧರಿಸುತ್ತದೆ ಎಂದು ಚಿತ್ರ ನಿರ್ದೇಶಕ ಪಿ.ಎನ್. ರಾಮಚಂದ್ರ ಹೇಳಿದರು.</p>.<p>ಮಣಿಪಾಲದ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್), ಮಾಹೆ ಮತ್ತು ಉಡುಪಿ ಚಿತ್ರ ಸಮಾಜದ ಆಶ್ರಯದಲ್ಲಿ ಚಲನಚಿತ್ರ ನಿರ್ಮಾಣದ ಕರಕುಶಲತೆ ಕುರಿತು ಹಮ್ಮಿಕೊಂಡಿದ್ದ ಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>ತಾತ್ವಿಕ ದೃಷ್ಟಿಕೋನವನ್ನು ಚಲನಚಿತ್ರದಲ್ಲಿ ತರಲು ಎಲ್ಲಾ ತಾಂತ್ರಿಕತೆಗಳನ್ನು ಸಜ್ಜುಗೊಳಿಸಬೇಕಾಗಿದೆ. ಚಲನಚಿತ್ರ ನಿರ್ದೇಶಕರ ತಾತ್ವಿಕ ನೆಲೆಯು ಚಲನಚಿತ್ರ ನಿರ್ಮಾಣದ ಕರಕುಶಲ ಸ್ವರೂಪವನ್ನು ನಿರ್ಧರಿಸುತ್ತದೆ ಎಂದು ಅವರು ಹೇಳಿದರು.</p>.<p>ಬಳಿಕ ಅವರ ಇತ್ತೀಚಿನ ಚಿತ್ರ ‘ಹಿಯರ್ ಓ, ಮಹಾತ್ಮ’ ಪ್ರದರ್ಶನಗೊಂಡಿತು. ಲೇಖಕ ಮುರಳೀಧರ ಉಪಾಧ್ಯ ಹಿರಿಯಡ್ಕ, ಚಿಂತಕ ಫಣಿರಾಜ್, ವರದೇಶ್ ಹಿರೇಗಂಗೆ, ಶ್ರೀಕುಮಾರ್, ನಾಗೇಶ್ ಉದ್ಯಾವರ, ಸಂತೋಷ್ ನಾಯಕ್ ಪಟ್ಲ ಸಂವಾದದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಚಿತ್ರ ನಿರ್ದೇಶಕರ ತಾತ್ವಿಕ ದೃಷ್ಟಿಕೋನ ಎಲ್ಲಾ ತಾಂತ್ರಿಕ ಅಂಶಗಳಿಗಿಂತ ಹೆಚ್ಚು ಮಹತ್ವದ್ದು ಮತ್ತು ಈ ದೃಷ್ಟಿಕೋನವೇ ತಾಂತ್ರಿಕ ಅಂಶಗಳು ಬಳಸಲ್ಪಡುವ ರೀತಿಯನ್ನು ನಿರ್ಧರಿಸುತ್ತದೆ ಎಂದು ಚಿತ್ರ ನಿರ್ದೇಶಕ ಪಿ.ಎನ್. ರಾಮಚಂದ್ರ ಹೇಳಿದರು.</p>.<p>ಮಣಿಪಾಲದ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್), ಮಾಹೆ ಮತ್ತು ಉಡುಪಿ ಚಿತ್ರ ಸಮಾಜದ ಆಶ್ರಯದಲ್ಲಿ ಚಲನಚಿತ್ರ ನಿರ್ಮಾಣದ ಕರಕುಶಲತೆ ಕುರಿತು ಹಮ್ಮಿಕೊಂಡಿದ್ದ ಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>ತಾತ್ವಿಕ ದೃಷ್ಟಿಕೋನವನ್ನು ಚಲನಚಿತ್ರದಲ್ಲಿ ತರಲು ಎಲ್ಲಾ ತಾಂತ್ರಿಕತೆಗಳನ್ನು ಸಜ್ಜುಗೊಳಿಸಬೇಕಾಗಿದೆ. ಚಲನಚಿತ್ರ ನಿರ್ದೇಶಕರ ತಾತ್ವಿಕ ನೆಲೆಯು ಚಲನಚಿತ್ರ ನಿರ್ಮಾಣದ ಕರಕುಶಲ ಸ್ವರೂಪವನ್ನು ನಿರ್ಧರಿಸುತ್ತದೆ ಎಂದು ಅವರು ಹೇಳಿದರು.</p>.<p>ಬಳಿಕ ಅವರ ಇತ್ತೀಚಿನ ಚಿತ್ರ ‘ಹಿಯರ್ ಓ, ಮಹಾತ್ಮ’ ಪ್ರದರ್ಶನಗೊಂಡಿತು. ಲೇಖಕ ಮುರಳೀಧರ ಉಪಾಧ್ಯ ಹಿರಿಯಡ್ಕ, ಚಿಂತಕ ಫಣಿರಾಜ್, ವರದೇಶ್ ಹಿರೇಗಂಗೆ, ಶ್ರೀಕುಮಾರ್, ನಾಗೇಶ್ ಉದ್ಯಾವರ, ಸಂತೋಷ್ ನಾಯಕ್ ಪಟ್ಲ ಸಂವಾದದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>