<p><strong>ಪಡುಬಿದ್ರಿ:</strong> ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಶ್ರೀಕ್ಷೇತ್ರ ಉಚ್ಚಿಲದಲ್ಲಿ ನವದುರ್ಗೆಯರ ಸಹಿತ ಶಾರದಾ ಮಾತೆ ವಿಗ್ರಹಗಳ ಜಲಸ್ತಂಭನದೊಂದಿಗೆ 10 ದಿನಗಳಿಂದ ನಡೆದ ಉಡುಪಿ–ಉಚ್ಚಿಲ ದಸರಾ ಉತ್ಸವ ಶನಿವಾರ ವೈಭವದಿಂದ ಸಮಾಪನಗೊಂಡಿತು.</p>.<p>ಚಂಡಿಕಾಯಾಗ, ವಿಸರ್ಜನಾ ಶೋಭಾಯಾತ್ರೆಯ ಪ್ರಯುಕ್ತ ಬೆಳಗ್ಗಿನಿಂದಲೇ ಸಹಸ್ರಾರು ಮಂದಿ ಕ್ಷೇತ್ರಕ್ಕೆ ಬಂದಿದ್ದು, ಭಕ್ತಾದಿಗಳ ಅನುಕೂಲಕ್ಕಾಗಿ ಬೆಳಿಗ್ಗೆ 10.30ಕ್ಕೆ ಪಲ್ಲ ಪೂಜೆ ನೆರವೇರಿಸಿ, 11ರಿಂದಲೇ ಮಹಾ ಅನ್ನಸಂತರ್ಪಣೆ ಆರಂಭವಾಯಿತು. ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ಸೇವೆ ಹಾಗೂ ಶಾರದಾ ಮಾತೆಗೆ ಮಹಾ ಮಂಗಳಾರತಿ ನಡೆಯಿತು.</p>.<p>ಕ್ಷೇತ್ರದ ಪ್ರಧಾನ ತಂತ್ರಿ ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ ಮತ್ತು ಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ಅವರ ಪೌರೋಹಿತ್ಯದಲ್ಲಿ ಮಹಾಚಂಡಿಕಾಯಾಗ ನಡೆದು, ಸಹಸ್ರ ಸಂಖ್ಯೆಯಲ್ಲಿ ನಾರಿಕೇಳ, ನವಧಾನ್ಯ, ರವಕೆ ಕಣ, ರೇಷ್ಮೆ ಸೀರೆ, ಫಲವಸ್ತುಗಳನ್ನು ಸಮರ್ಪಿಸಿ, ಪೂರ್ಣಾಹುತಿ ನೆರವೇರಿಸಲಾಯಿತು. ದಸರಾ ಪ್ರಯುಕ್ತ ನವದುರ್ಗೆಯರ ಸಹಿತ ಶಾರದಾ ವಿಗ್ರಹಗಳ ಶೋಭಾಯಾತ್ರೆಯು ನಡೆಯಿತು.</p>.<p class="Subhead">ಡ್ರೋನ್ ಮೂಲಕ ಪುಷ್ಪಾರ್ಚನೆ: ಶ್ರೀಕ್ಷೇತ್ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಿಂದ 3 ಗಂಟೆಗೆ ಧಾರ್ಮಿಕ ವಿಧಿವಿಧಾನಗಳ ಬಳಿಕ, 4ಗಂಟೆಗೆ ದೇವಳದ ಗೋಪುರದ ಮುಂಭಾಗದಲ್ಲಿ ಅಂಬಾರಿ ಹೊತ್ತ ಆನೆಯ ಟ್ಯಾಬ್ಲೊಗೆ ಗಣ್ಯರು ಪುಷ್ಪಾರ್ಚನೆ ನಡೆಸಿ ಶೋಭಾಯಾತ್ರೆಗೆ ಚಾಲನೆ ನೀಡಿದರು. ಅಂಬಾರಿ ಹೊತ್ತ ಅಂಬಾರಿಯ ಟ್ಯಾಬ್ಲೊ, ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಕ್ಕೆ ಡ್ರೋನ್ ಡ್ರಾಪ್ಸ್ ತೀರ್ಥಹಳ್ಳಿ ಅವರಿಂದ ಡ್ರೋನ್ ಮೂಲಕ ಪುಷ್ಪಾರ್ಚನೆ ಸೇರಿದ ಭಕ್ತರಲ್ಲಿ ಕಣ್ಮನೆ ಸೆಳೆಯಿತು.</p>.<p>ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ, ಎರ್ಮಾಳು ಜನಾರ್ದನ ದೇವಸ್ಥಾನ, ಎರ್ಮಾಳು ಬಡಾ, ಉಚ್ಚಿಲ ಪೇಟೆ, ಮೂಳೂರು, ಕೊಪ್ಪಲಂಗಡಿಯ ಮೂಲಕ ಉದ್ದದವರೆಗೆ ಸಾಗಿದ ಶೋಭಾಯಾತ್ರೆಯಲ್ಲಿ 45 ಟ್ಯಾಬ್ಲೊ, ಭಜನಾ ತಂಡಗಳು, ವಾದ್ಯ ಮೇಳಗಳು ಉಚ್ಚಿಲ ದಸರಾ ವೈಭವಕ್ಕೆ ಮೆರುಗು ತಂದಿತು. ಬಳಿಕ ಸಾಮೂಹಿಕ ಮಂಗಳಾರತಿ ಬಳಿಕ ಸಮುದ್ರ ಪೂಜೆ ಸಲ್ಲಿಸಲಾಯಿತು.</p>.<p>ಶಾರದೆ ಮತ್ತು ನವದುರ್ಗೆಯರನ್ನು ಹೊತ್ತುಕೊಂಡ ಟ್ಯಾಬ್ಲೊಗಳ ಸಹಿತವಾಗಿ ದೇವಸ್ಥಾನದ ಬಿರುದಾವಳಿ, ಸಿಂಧೂರ ಯುದ್ಧ ವಿಮಾನದ ಮಾದರಿ ವಿಶೇಷ ಗಮನಸೆಳೆದಿದ್ದು, ಅದರೊಂದಿಗೆ 20 ಬಣ್ಣದ ಕೊಡೆ, ಕೊಂಬು ಡೋಲು, ಸ್ಯಾಕ್ಸೋಪೋನ್, ಸಿಂಗಾರಿ ಮೇಳ, ನಾಸಿಕ್ ಬ್ಯಾಂಡ್, ಚೆಂಡೆ, ಬ್ಯಾಂಡ್ ಸೆಟ್, ಕೋಳಿ ಮತ್ತು ಮೀನು, ಸು ಫ್ರಂ ಸೋ ಚಿತ್ರದ ಗೊಂಬೆ ಬಳಗ, ಕೇರಳ ಗೊಂಬೆ, ಕುಣಿತ ಭಜನೆ, ತಾಲೀಮು, ಆಮೆ, ಕುರುಕ್ಷೇತ್ರ, ಮತ್ಸ್ಯಾವತಾರ, ಲಂಕಿಣಿ, ಉಚ್ಚಿಲ ಶ್ರೀಮಹಾಲಕ್ಷ್ಮಿ, ವರಾಹವತಾರ, ಮಂತ್ರದೇವತೆ, ಡ್ರ್ಯಾಗನ್ ಟ್ಯಾಬ್ಲೊ, ಸದಿಯ ಸಾಹುಕಾರ್, ಮಾಧವ ಮಂಗಲ, ಭಜನೆ ಟ್ಯಾಬ್ಲೊ, ಪರ್ಸಿನ್ ಬೋಟ್, ಅಯ್ಯಪ್ಪ, ಮಹಿಷಾಸುರ ಮರ್ದಿನಿ, ಹುಲಿವೇಷ, ಅಯೋಧ್ಯ, ಪರಿಸರ, ದಶಾವತಾರ, ರಾಕ್ಷಸವೇಷಗಳ ಟ್ಯಾಬ್ಲೊ, ಡಿಜೆ ಶೋಭಾಯಾತ್ರೆಗೆ ಮೆರುಗು ನೀಡಿತು.</p>.<p>ಶೋಭಾಯಾತ್ರೆಯಲ್ಲಿ ಪಾಲ್ಗೊಂಡವರಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆಗಾಗಿ ನೀರು ಸರಬರಾಜು ವಾಹನ, ಶುಚಿತ್ವ ವಾಹನ, ಕುಡಿಯುವ ನೀರಿನ ವಾಹನ ಮತ್ತು ಮೆಟಲೈಟ್ ವಾಹನಗಳು ಮೆರವಣಿಗೆಗೆ ಸಾಥ್ ನೀಡಿತು.</p>.<p>ಉಚ್ಚಿಲ ದಸರಾ ರೂವಾರಿ ಜಿ. ಶಂಕರ್, ಶಾಲಿನಿ ಜಿ.ಶಂಕರ್ ಮತ್ತು ಕುಟುಂಬಸ್ಥರು, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ಮುಖಂಡ ವಿನಯಕುಮಾರ್ ಸೊರಕೆ, ಪ್ರಸಾದ್ರಾಜ್ ಕಾಂಚನ್, ಪ್ರಮುಖರಾದ ಗಿರಿಧರ ಸುವರ್ಣ, ವಿನಯ ಕರ್ಕೇರ, ಶರಣ್ ಕುಮಾರ್ ಮಟ್ಟು, ಸತೀಶ್ ಕುಂದರ್, ರತ್ನಾಕರ ಸಾಲ್ಯಾನ್, ಸುಜಿತ್ ಸಾಲ್ಯಾನ್, ಸತೀಶ್ ಅಮೀನ್ ಬಾರ್ಕೂರು, ಶಿವಕುಮಾರ್ ಮೆಂಡನ್, ಮನೋಜ್ ಕಾಂಚನ್, ಗುಂಡು ಅಮೀನ್, ವಾಸುದೇವ ಸಾಲ್ಯಾನ್, ಮಹಿಳಾ ಸಂಚಾಲಕಿ ಸಂಧ್ಯಾದೀಪ ಸುನಿಲ್, ಸುಗುಣಾ ಕರ್ಕೇರ, ಉಷಾರಾಣಿ, ದೇವಳ ಪ್ರಬಂಧಕ ಸತೀಶ್ ಅಮೀನ್ ಪಡುಕೆರೆ, ಶಾಲಿನಿ ಶಂಕರ್, ಶಾಮಿಲಿ ನವೀನ್, ಮೋಹನ್ ಬೇಂಗ್ರೆ, ಶಿಲ್ಪಾ ಜಿ.ಸುವರ್ಣ, ಎಂ.ಎ.ಗಫೂರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಡುಬಿದ್ರಿ:</strong> ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಶ್ರೀಕ್ಷೇತ್ರ ಉಚ್ಚಿಲದಲ್ಲಿ ನವದುರ್ಗೆಯರ ಸಹಿತ ಶಾರದಾ ಮಾತೆ ವಿಗ್ರಹಗಳ ಜಲಸ್ತಂಭನದೊಂದಿಗೆ 10 ದಿನಗಳಿಂದ ನಡೆದ ಉಡುಪಿ–ಉಚ್ಚಿಲ ದಸರಾ ಉತ್ಸವ ಶನಿವಾರ ವೈಭವದಿಂದ ಸಮಾಪನಗೊಂಡಿತು.</p>.<p>ಚಂಡಿಕಾಯಾಗ, ವಿಸರ್ಜನಾ ಶೋಭಾಯಾತ್ರೆಯ ಪ್ರಯುಕ್ತ ಬೆಳಗ್ಗಿನಿಂದಲೇ ಸಹಸ್ರಾರು ಮಂದಿ ಕ್ಷೇತ್ರಕ್ಕೆ ಬಂದಿದ್ದು, ಭಕ್ತಾದಿಗಳ ಅನುಕೂಲಕ್ಕಾಗಿ ಬೆಳಿಗ್ಗೆ 10.30ಕ್ಕೆ ಪಲ್ಲ ಪೂಜೆ ನೆರವೇರಿಸಿ, 11ರಿಂದಲೇ ಮಹಾ ಅನ್ನಸಂತರ್ಪಣೆ ಆರಂಭವಾಯಿತು. ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ಸೇವೆ ಹಾಗೂ ಶಾರದಾ ಮಾತೆಗೆ ಮಹಾ ಮಂಗಳಾರತಿ ನಡೆಯಿತು.</p>.<p>ಕ್ಷೇತ್ರದ ಪ್ರಧಾನ ತಂತ್ರಿ ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ ಮತ್ತು ಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ಅವರ ಪೌರೋಹಿತ್ಯದಲ್ಲಿ ಮಹಾಚಂಡಿಕಾಯಾಗ ನಡೆದು, ಸಹಸ್ರ ಸಂಖ್ಯೆಯಲ್ಲಿ ನಾರಿಕೇಳ, ನವಧಾನ್ಯ, ರವಕೆ ಕಣ, ರೇಷ್ಮೆ ಸೀರೆ, ಫಲವಸ್ತುಗಳನ್ನು ಸಮರ್ಪಿಸಿ, ಪೂರ್ಣಾಹುತಿ ನೆರವೇರಿಸಲಾಯಿತು. ದಸರಾ ಪ್ರಯುಕ್ತ ನವದುರ್ಗೆಯರ ಸಹಿತ ಶಾರದಾ ವಿಗ್ರಹಗಳ ಶೋಭಾಯಾತ್ರೆಯು ನಡೆಯಿತು.</p>.<p class="Subhead">ಡ್ರೋನ್ ಮೂಲಕ ಪುಷ್ಪಾರ್ಚನೆ: ಶ್ರೀಕ್ಷೇತ್ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಿಂದ 3 ಗಂಟೆಗೆ ಧಾರ್ಮಿಕ ವಿಧಿವಿಧಾನಗಳ ಬಳಿಕ, 4ಗಂಟೆಗೆ ದೇವಳದ ಗೋಪುರದ ಮುಂಭಾಗದಲ್ಲಿ ಅಂಬಾರಿ ಹೊತ್ತ ಆನೆಯ ಟ್ಯಾಬ್ಲೊಗೆ ಗಣ್ಯರು ಪುಷ್ಪಾರ್ಚನೆ ನಡೆಸಿ ಶೋಭಾಯಾತ್ರೆಗೆ ಚಾಲನೆ ನೀಡಿದರು. ಅಂಬಾರಿ ಹೊತ್ತ ಅಂಬಾರಿಯ ಟ್ಯಾಬ್ಲೊ, ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಕ್ಕೆ ಡ್ರೋನ್ ಡ್ರಾಪ್ಸ್ ತೀರ್ಥಹಳ್ಳಿ ಅವರಿಂದ ಡ್ರೋನ್ ಮೂಲಕ ಪುಷ್ಪಾರ್ಚನೆ ಸೇರಿದ ಭಕ್ತರಲ್ಲಿ ಕಣ್ಮನೆ ಸೆಳೆಯಿತು.</p>.<p>ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ, ಎರ್ಮಾಳು ಜನಾರ್ದನ ದೇವಸ್ಥಾನ, ಎರ್ಮಾಳು ಬಡಾ, ಉಚ್ಚಿಲ ಪೇಟೆ, ಮೂಳೂರು, ಕೊಪ್ಪಲಂಗಡಿಯ ಮೂಲಕ ಉದ್ದದವರೆಗೆ ಸಾಗಿದ ಶೋಭಾಯಾತ್ರೆಯಲ್ಲಿ 45 ಟ್ಯಾಬ್ಲೊ, ಭಜನಾ ತಂಡಗಳು, ವಾದ್ಯ ಮೇಳಗಳು ಉಚ್ಚಿಲ ದಸರಾ ವೈಭವಕ್ಕೆ ಮೆರುಗು ತಂದಿತು. ಬಳಿಕ ಸಾಮೂಹಿಕ ಮಂಗಳಾರತಿ ಬಳಿಕ ಸಮುದ್ರ ಪೂಜೆ ಸಲ್ಲಿಸಲಾಯಿತು.</p>.<p>ಶಾರದೆ ಮತ್ತು ನವದುರ್ಗೆಯರನ್ನು ಹೊತ್ತುಕೊಂಡ ಟ್ಯಾಬ್ಲೊಗಳ ಸಹಿತವಾಗಿ ದೇವಸ್ಥಾನದ ಬಿರುದಾವಳಿ, ಸಿಂಧೂರ ಯುದ್ಧ ವಿಮಾನದ ಮಾದರಿ ವಿಶೇಷ ಗಮನಸೆಳೆದಿದ್ದು, ಅದರೊಂದಿಗೆ 20 ಬಣ್ಣದ ಕೊಡೆ, ಕೊಂಬು ಡೋಲು, ಸ್ಯಾಕ್ಸೋಪೋನ್, ಸಿಂಗಾರಿ ಮೇಳ, ನಾಸಿಕ್ ಬ್ಯಾಂಡ್, ಚೆಂಡೆ, ಬ್ಯಾಂಡ್ ಸೆಟ್, ಕೋಳಿ ಮತ್ತು ಮೀನು, ಸು ಫ್ರಂ ಸೋ ಚಿತ್ರದ ಗೊಂಬೆ ಬಳಗ, ಕೇರಳ ಗೊಂಬೆ, ಕುಣಿತ ಭಜನೆ, ತಾಲೀಮು, ಆಮೆ, ಕುರುಕ್ಷೇತ್ರ, ಮತ್ಸ್ಯಾವತಾರ, ಲಂಕಿಣಿ, ಉಚ್ಚಿಲ ಶ್ರೀಮಹಾಲಕ್ಷ್ಮಿ, ವರಾಹವತಾರ, ಮಂತ್ರದೇವತೆ, ಡ್ರ್ಯಾಗನ್ ಟ್ಯಾಬ್ಲೊ, ಸದಿಯ ಸಾಹುಕಾರ್, ಮಾಧವ ಮಂಗಲ, ಭಜನೆ ಟ್ಯಾಬ್ಲೊ, ಪರ್ಸಿನ್ ಬೋಟ್, ಅಯ್ಯಪ್ಪ, ಮಹಿಷಾಸುರ ಮರ್ದಿನಿ, ಹುಲಿವೇಷ, ಅಯೋಧ್ಯ, ಪರಿಸರ, ದಶಾವತಾರ, ರಾಕ್ಷಸವೇಷಗಳ ಟ್ಯಾಬ್ಲೊ, ಡಿಜೆ ಶೋಭಾಯಾತ್ರೆಗೆ ಮೆರುಗು ನೀಡಿತು.</p>.<p>ಶೋಭಾಯಾತ್ರೆಯಲ್ಲಿ ಪಾಲ್ಗೊಂಡವರಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆಗಾಗಿ ನೀರು ಸರಬರಾಜು ವಾಹನ, ಶುಚಿತ್ವ ವಾಹನ, ಕುಡಿಯುವ ನೀರಿನ ವಾಹನ ಮತ್ತು ಮೆಟಲೈಟ್ ವಾಹನಗಳು ಮೆರವಣಿಗೆಗೆ ಸಾಥ್ ನೀಡಿತು.</p>.<p>ಉಚ್ಚಿಲ ದಸರಾ ರೂವಾರಿ ಜಿ. ಶಂಕರ್, ಶಾಲಿನಿ ಜಿ.ಶಂಕರ್ ಮತ್ತು ಕುಟುಂಬಸ್ಥರು, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ಮುಖಂಡ ವಿನಯಕುಮಾರ್ ಸೊರಕೆ, ಪ್ರಸಾದ್ರಾಜ್ ಕಾಂಚನ್, ಪ್ರಮುಖರಾದ ಗಿರಿಧರ ಸುವರ್ಣ, ವಿನಯ ಕರ್ಕೇರ, ಶರಣ್ ಕುಮಾರ್ ಮಟ್ಟು, ಸತೀಶ್ ಕುಂದರ್, ರತ್ನಾಕರ ಸಾಲ್ಯಾನ್, ಸುಜಿತ್ ಸಾಲ್ಯಾನ್, ಸತೀಶ್ ಅಮೀನ್ ಬಾರ್ಕೂರು, ಶಿವಕುಮಾರ್ ಮೆಂಡನ್, ಮನೋಜ್ ಕಾಂಚನ್, ಗುಂಡು ಅಮೀನ್, ವಾಸುದೇವ ಸಾಲ್ಯಾನ್, ಮಹಿಳಾ ಸಂಚಾಲಕಿ ಸಂಧ್ಯಾದೀಪ ಸುನಿಲ್, ಸುಗುಣಾ ಕರ್ಕೇರ, ಉಷಾರಾಣಿ, ದೇವಳ ಪ್ರಬಂಧಕ ಸತೀಶ್ ಅಮೀನ್ ಪಡುಕೆರೆ, ಶಾಲಿನಿ ಶಂಕರ್, ಶಾಮಿಲಿ ನವೀನ್, ಮೋಹನ್ ಬೇಂಗ್ರೆ, ಶಿಲ್ಪಾ ಜಿ.ಸುವರ್ಣ, ಎಂ.ಎ.ಗಫೂರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>