<p><strong>ಪಡುಬಿದ್ರಿ: ‘</strong>ಗ್ರಾಮಮಟ್ಟದಿಂದಲೇ ಚುನಾವಣೆಗೆ ಸಿದ್ಧತೆ ಪ್ರಾರಂಭಿಸಿ, ಪ್ರತಿ ಬೂತ್ನಲ್ಲಿ ಸಂಘಟನಾ ಕಾರ್ಯಕರ್ತರ ತಂಡವನ್ನು ಬಲಪಡಿಸಿಕೊಳ್ಳಬೇಕು’ ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.</p>.<p>ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಡುಬಿದ್ರಿ ಗ್ರಾಮ ಸಮಿತಿ ವತಿಯಿಂದ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಚುನಾವಣೆಗಳ ಪೂರ್ವ ಸಿದ್ಧತೆ ಮತ್ತು ಕಾರ್ಯತಂತ್ರ ಕುರಿತಂತೆ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಪ್ರತಿ ಘಟಕವು ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ, ಜನರ ಮನ ಗೆಲ್ಲುವ ರೀತಿಯಲ್ಲಿ ಪ್ರಚಾರ ಹಮ್ಮಿಕೊಳ್ಳಬೇಕು. ಪಕ್ಷದ ಸಂಘಟನಾ ಬಲವರ್ಧನೆ, ಮತದಾರರ ಸಂಪರ್ಕ ಮತ್ತು ಚುನಾವಣಾ ಪ್ರಚಾರ ತಂತ್ರಗಳ ಕುರಿತು ಮಾರ್ಗದರ್ಶನ ನೀಡಿದರು.</p>.<p>ಎಸ್ಡಿಪಿಐ ಪಡುಬಿದ್ರಿ ಗ್ರಾಮ ಸಮಿತಿ ಅಧ್ಯಕ್ಷ ಅಬ್ದುಲ್ ಅಝೀಝ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮುಂಬರುವ ಚುನಾವಣೆಗೆ ಸಂಬಂಧಿಸಿದ ಪೂರ್ವ ತಯಾರಿ, ಅಭ್ಯರ್ಥಿಗಳ ಆಯ್ಕೆ ಮಾನದಂಡ, ಪ್ರಚಾರ ತಂತ್ರ, ಮತದಾರರ ಜಾಗೃತಿ ಅಭಿಯಾನ, ಮತ್ತು ಮತಗಟ್ಟೆ ಮಟ್ಟದ ಹೋರಾಟದ ರೂಪುರೇಷೆಗಳ ಕುರಿತು ಚರ್ಚೆ ನಡೆಯಿತು.</p>.<p>ಎಸ್ಡಿಪಿಐ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಝಾಕ್ ವೈ.ಎಸ್. ಹಾಗೂ ಶಂಶುದ್ದೀನ್, ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷ ಸಾದಿಕ್ ಕೆ.ಪಿ. ಹಾಗೂ ಕಾರ್ಯದರ್ಶಿ ತೌಫೀಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಡುಬಿದ್ರಿ: ‘</strong>ಗ್ರಾಮಮಟ್ಟದಿಂದಲೇ ಚುನಾವಣೆಗೆ ಸಿದ್ಧತೆ ಪ್ರಾರಂಭಿಸಿ, ಪ್ರತಿ ಬೂತ್ನಲ್ಲಿ ಸಂಘಟನಾ ಕಾರ್ಯಕರ್ತರ ತಂಡವನ್ನು ಬಲಪಡಿಸಿಕೊಳ್ಳಬೇಕು’ ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.</p>.<p>ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಡುಬಿದ್ರಿ ಗ್ರಾಮ ಸಮಿತಿ ವತಿಯಿಂದ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಚುನಾವಣೆಗಳ ಪೂರ್ವ ಸಿದ್ಧತೆ ಮತ್ತು ಕಾರ್ಯತಂತ್ರ ಕುರಿತಂತೆ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಪ್ರತಿ ಘಟಕವು ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ, ಜನರ ಮನ ಗೆಲ್ಲುವ ರೀತಿಯಲ್ಲಿ ಪ್ರಚಾರ ಹಮ್ಮಿಕೊಳ್ಳಬೇಕು. ಪಕ್ಷದ ಸಂಘಟನಾ ಬಲವರ್ಧನೆ, ಮತದಾರರ ಸಂಪರ್ಕ ಮತ್ತು ಚುನಾವಣಾ ಪ್ರಚಾರ ತಂತ್ರಗಳ ಕುರಿತು ಮಾರ್ಗದರ್ಶನ ನೀಡಿದರು.</p>.<p>ಎಸ್ಡಿಪಿಐ ಪಡುಬಿದ್ರಿ ಗ್ರಾಮ ಸಮಿತಿ ಅಧ್ಯಕ್ಷ ಅಬ್ದುಲ್ ಅಝೀಝ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮುಂಬರುವ ಚುನಾವಣೆಗೆ ಸಂಬಂಧಿಸಿದ ಪೂರ್ವ ತಯಾರಿ, ಅಭ್ಯರ್ಥಿಗಳ ಆಯ್ಕೆ ಮಾನದಂಡ, ಪ್ರಚಾರ ತಂತ್ರ, ಮತದಾರರ ಜಾಗೃತಿ ಅಭಿಯಾನ, ಮತ್ತು ಮತಗಟ್ಟೆ ಮಟ್ಟದ ಹೋರಾಟದ ರೂಪುರೇಷೆಗಳ ಕುರಿತು ಚರ್ಚೆ ನಡೆಯಿತು.</p>.<p>ಎಸ್ಡಿಪಿಐ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಝಾಕ್ ವೈ.ಎಸ್. ಹಾಗೂ ಶಂಶುದ್ದೀನ್, ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷ ಸಾದಿಕ್ ಕೆ.ಪಿ. ಹಾಗೂ ಕಾರ್ಯದರ್ಶಿ ತೌಫೀಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>