<p><strong>ಪಡುಬಿದ್ರಿ:</strong> ಪಡುಬಿದ್ರಿ ಬೀಚ್ ಸಮುದ್ರ ಕೊರೆತ ತಡೆಯ ಕಾಮಗಾರಿ ಬ್ಯಾನರ್ ರಾಜಕೀಯಕ್ಕೆ ಕಾರಣವಾಗಿದೆ. ಇಲ್ಲಿನ ಬೀಚ್ ಕಡಲ ತೀರದಲ್ಲಿ ಸಮುದ್ರ ಕೊರೆತ ದೀರ್ಘ ಕಾಲಿಕ ಪ್ರತಿಬಂಧ ಸಂರಕ್ಷಣಾ ಕಾಮಗಾರಿಗೆ ₹ 2 ಕೋಟಿ ವೆಚ್ಚದಲ್ಲಿ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರತಿದೆ. ಒಂದೆಡೆ ಪಡುಬಿದ್ರಿ ಗ್ರಾಮ ಪಂಚಾಯಿತಿ ಹೆಸರಿನಲ್ಲಿ ಅನುದಾನ ಒದಗಿಸಿಕೊಟ್ಟ ಶಾಸಕರಿಗೆ ಅಭಿನಂದನೆ ಕೋರಿ ಫೋಟೋ ಬಳಸಿ ಬ್ಯಾನರ್ ಅಳವಡಿಸಿದ್ದಾರೆ.</p>.<p>ಅಭಿನಂದನೆ ಸಲ್ಲಿಸಿರುವುದಕ್ಕೆ ಅಸಮಾಧಾನಗೊಂಡಿರುವ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಪಕ್ಕದಲ್ಲೇ ಇನ್ನೊಂದು ಬ್ಯಾನರ್ ಅಳವಡಿಸಿ ಸಚಿವ ಮಂಕಾಳ ವೈದ್ಯ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರ ಫೋಟೊ ಹಾಕಿ ಅಭಿನಂದನೆಗಳ ಸಲ್ಲಿಸಸಿದ್ದಾರೆ.</p>.<p>ಎರಡು ವರ್ಷಗಳ ಹಿಂದೆ ಪಡುಬಿದ್ರಿ ಮುಖ್ಯಬೀಚ್ ಕಡಲ್ಕೊರೆತದಿಂದ ಸಂಪೂರ್ಣ ಹಾನಿಯಾಗಿತ್ತು. ಈ ವೇಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉಡುಪಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಬೀಚ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮೀನುಗಾರಿಕಾ ಮತ್ತು ಬಂದರು ಸಚಿವರಾದ ಮಾಂಕಾಳ ವೈದ್ಯ ಅವರು ಈ ಬಗ್ಗೆ ಅನುದಾನ ದೊರಕಿಸಿಕೊಡುವ ಭರವಸೆ ನೀಡಿ ಅನುದಾದ ದೊರಕಿಸಿಕೊಟ್ಟಿದ್ದಾರೆ. ಆದರೆ ಗ್ರಾಮ ಪಂಚಾಯಿತಿಯು ಸಚಿವರ ಹೆಸರು ಮತ್ತು ಪೋಟೋ ಬಳಸದೆ ಕೇವಲ ಶಾಸಕರ ಹೆಸರನ್ನು ನಮೂದಿಸಿ ಅಭಿನಂದನೆ ಸಲ್ಲಿಸಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಮುಖಂಡ ಅಶೋಕ್ ಸಾಲ್ಯಾನ್ ತಿಳಿಸಿದ್ದಾರೆ.</p>.<p>ಕಳೆದ ವರ್ಷ ತೀವ್ರ ಹಾನಿಗೊಳಗಾದ ಬೀಚ್ ಪ್ರದೇಶದಲ್ಲಿ ಶಾಸಕರ ಮುತವರ್ಜಿಯಿಂದ ಅನುಮೋದನೆಗೊಂಡ ₹ 2 ಕೋಟಿಯ ಕಾಮಗಾರಿಗೆ ಚಾಲನೆ ದೊರಕಿದೆ. ಇದಕ್ಕೆ ಅಭಿನಂದನೆ ಸಲ್ಲಿಸಿ ಗ್ರಾಮ ಪಂಚಾಯಿತಿ ಬ್ಯಾನರ್ ಅಳವಡಿಸಿರುವುದು ಸರಿಯಾಗಿದೆ. ಆದರೆ ಗ್ರಾಮೀಣ ಕಾಂಗ್ರೆಸ್ ಪಕ್ಷವು ಸಚಿವರ ಫೋಟೊದೊಂದಿಗೆ ಮಾಜಿ ಸಚಿವರ ಫೋಟೊ ಹಾಕಿರುವುದು ಸರಿಯಲ್ಲ ಎಂದು ಬಿಜೆಪಿ ಮುಖಂಡ ಶಶಿಕಾಂತ್ ಪಡುಬಿದ್ರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಡುಬಿದ್ರಿ:</strong> ಪಡುಬಿದ್ರಿ ಬೀಚ್ ಸಮುದ್ರ ಕೊರೆತ ತಡೆಯ ಕಾಮಗಾರಿ ಬ್ಯಾನರ್ ರಾಜಕೀಯಕ್ಕೆ ಕಾರಣವಾಗಿದೆ. ಇಲ್ಲಿನ ಬೀಚ್ ಕಡಲ ತೀರದಲ್ಲಿ ಸಮುದ್ರ ಕೊರೆತ ದೀರ್ಘ ಕಾಲಿಕ ಪ್ರತಿಬಂಧ ಸಂರಕ್ಷಣಾ ಕಾಮಗಾರಿಗೆ ₹ 2 ಕೋಟಿ ವೆಚ್ಚದಲ್ಲಿ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರತಿದೆ. ಒಂದೆಡೆ ಪಡುಬಿದ್ರಿ ಗ್ರಾಮ ಪಂಚಾಯಿತಿ ಹೆಸರಿನಲ್ಲಿ ಅನುದಾನ ಒದಗಿಸಿಕೊಟ್ಟ ಶಾಸಕರಿಗೆ ಅಭಿನಂದನೆ ಕೋರಿ ಫೋಟೋ ಬಳಸಿ ಬ್ಯಾನರ್ ಅಳವಡಿಸಿದ್ದಾರೆ.</p>.<p>ಅಭಿನಂದನೆ ಸಲ್ಲಿಸಿರುವುದಕ್ಕೆ ಅಸಮಾಧಾನಗೊಂಡಿರುವ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಪಕ್ಕದಲ್ಲೇ ಇನ್ನೊಂದು ಬ್ಯಾನರ್ ಅಳವಡಿಸಿ ಸಚಿವ ಮಂಕಾಳ ವೈದ್ಯ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರ ಫೋಟೊ ಹಾಕಿ ಅಭಿನಂದನೆಗಳ ಸಲ್ಲಿಸಸಿದ್ದಾರೆ.</p>.<p>ಎರಡು ವರ್ಷಗಳ ಹಿಂದೆ ಪಡುಬಿದ್ರಿ ಮುಖ್ಯಬೀಚ್ ಕಡಲ್ಕೊರೆತದಿಂದ ಸಂಪೂರ್ಣ ಹಾನಿಯಾಗಿತ್ತು. ಈ ವೇಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉಡುಪಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಬೀಚ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮೀನುಗಾರಿಕಾ ಮತ್ತು ಬಂದರು ಸಚಿವರಾದ ಮಾಂಕಾಳ ವೈದ್ಯ ಅವರು ಈ ಬಗ್ಗೆ ಅನುದಾನ ದೊರಕಿಸಿಕೊಡುವ ಭರವಸೆ ನೀಡಿ ಅನುದಾದ ದೊರಕಿಸಿಕೊಟ್ಟಿದ್ದಾರೆ. ಆದರೆ ಗ್ರಾಮ ಪಂಚಾಯಿತಿಯು ಸಚಿವರ ಹೆಸರು ಮತ್ತು ಪೋಟೋ ಬಳಸದೆ ಕೇವಲ ಶಾಸಕರ ಹೆಸರನ್ನು ನಮೂದಿಸಿ ಅಭಿನಂದನೆ ಸಲ್ಲಿಸಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಮುಖಂಡ ಅಶೋಕ್ ಸಾಲ್ಯಾನ್ ತಿಳಿಸಿದ್ದಾರೆ.</p>.<p>ಕಳೆದ ವರ್ಷ ತೀವ್ರ ಹಾನಿಗೊಳಗಾದ ಬೀಚ್ ಪ್ರದೇಶದಲ್ಲಿ ಶಾಸಕರ ಮುತವರ್ಜಿಯಿಂದ ಅನುಮೋದನೆಗೊಂಡ ₹ 2 ಕೋಟಿಯ ಕಾಮಗಾರಿಗೆ ಚಾಲನೆ ದೊರಕಿದೆ. ಇದಕ್ಕೆ ಅಭಿನಂದನೆ ಸಲ್ಲಿಸಿ ಗ್ರಾಮ ಪಂಚಾಯಿತಿ ಬ್ಯಾನರ್ ಅಳವಡಿಸಿರುವುದು ಸರಿಯಾಗಿದೆ. ಆದರೆ ಗ್ರಾಮೀಣ ಕಾಂಗ್ರೆಸ್ ಪಕ್ಷವು ಸಚಿವರ ಫೋಟೊದೊಂದಿಗೆ ಮಾಜಿ ಸಚಿವರ ಫೋಟೊ ಹಾಕಿರುವುದು ಸರಿಯಲ್ಲ ಎಂದು ಬಿಜೆಪಿ ಮುಖಂಡ ಶಶಿಕಾಂತ್ ಪಡುಬಿದ್ರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>