ಭಾನುವಾರ, ಏಪ್ರಿಲ್ 2, 2023
24 °C

ದುಶ್ಚಟಗಳಿಗೆ ಮಕ್ಕಳು ಬಲಿಯಾಗದಂತೆ ಎಚ್ಚರ ವಹಿಸಿ: ಸೌಜನ್ಯಾ ಶೆಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪಡುಬಿದ್ರಿ: ಪದವಿಪೂರ್ವ ಹಂತದಲ್ಲಿ ಮಕ್ಕಳ ಮನಸ್ಸು ಚಂಚಲವಾಗಿರುತ್ತದೆ. ಆಗ ಅವರು ಅಡ್ಡದಾರಿಗೆ ಇಳಿಯದಂತೆ ಜಾಗೃತಿ ವಹಿಸಬೇಕು. ದುಶ್ಚಟಗಳಿಗೆ ಬಲಿಯಾಗದಂತೆ ಪೋಷಕರು ಎಚ್ಚರದಿಂದಿರಬೇಕು ಎಂದು ಉಡುಪಿಯ ಡಾ.ಎ.ವಿ. ಬಾಳಿಗ ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯಾ ಶೆಟ್ಟಿ ಹೇಳಿದರು.

ಇಲ್ಲಿನ ಅದಮಾರು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಪಾಲಕರ ಸಭೆಯಲ್ಲಿ ಅವರು ಮಾತನಾಡಿದರು.

ಟಿವಿ, ಮೊಬೈಲ್, ಬೈಕ್‌ಗಳತ್ತ ಆಕರ್ಷಿತರಾಗಿ ಮಕ್ಕಳು ತಮ್ಮ ಜೀವನವನ್ನೂ ಹಾಳುಮಾಡಿಕೊಳ್ಳದಂತೆ ನೋಡಿಕೊಳ್ಳಬೇಕು ಎಂದರು.

ಸಂಸ್ಥೆಯ ಪ್ರಾಂಶುಪಾಲ ಸಂಜೀವ ನಾಯ್ಕ್‌ ಅಧ್ಯಕ್ಷತೆ ವಹಿಸಿ, ‘ಮಕ್ಕಳು ಹೆತ್ತವರಿಗೆ ಅಮೂಲ್ಯ ಆಸ್ತಿ. ಮಕ್ಕಳನ್ನು ಕಾಲೇಜಿಗೆ ಕಳುಹಿಸಿದ ಮೇಲೆ ಅವರನ್ನು ನಾವು ಮನೆಯ ಮಕ್ಕಳಂತೆ ಇಲ್ಲಿ ನೋಡಿಕೊಳ್ಳುತ್ತೇವೆ, ಶಿಸ್ತು  ಕಲಿಸುತ್ತೇವೆ, ಮನೆಯಲ್ಲಿ ಹೆತ್ತವರು ಮಕ್ಕಳ ಬಗ್ಗೆ ನಿಗಾ ವಹಿಸಲೇಬೇಕು’ ಎಂದರು.

ವಿಜ್ಷಾನ ವಿಭಾಗದ ಸಂಯೋಜಕ ಸುಬ್ರಹ್ಮಣ್ಯ ಭಟ್ ಇದ್ದರು. ಉಪನ್ಯಾಸಕರ ಪ್ರತಿನಿಧಿಯಾದ ಡಾ.ಜಯಶಂಕರ ಕಂಗಣ್ಣಾರು ಸ್ವಾಗತಿಸಿದರು. ಭೌತಶಾಸ್ತ್ರ ಉಪನ್ಯಾಸಕ ತೇಜಸ್ ಬಲ್ಲಾಳ್ ವಂದಿಸಿದರು. ಮಧುಸೂದನ್ ಗಾಂವ್‌ಕರ್ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು