<p>ಪಡುಬಿದ್ರಿ: ಸುಮಾರು ₹30 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಳ್ಳುತ್ತಿರುವ ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಪುನರ್ ಪ್ರತಿಷ್ಠೆ ಹಾಗೂ ವೈಭವದ ಬ್ರಹ್ಮಕಲಶೋತ್ಸವವು ಎಪ್ರಿಲ್ 23ರಿಂದ ಮೇ 4ರವರೆಗೆ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ.</p>.<p>ಪಡುಬಿದ್ರಿ ಶ್ರೀ ಲಕ್ಷ್ಮೀ ನಾರಾಯಣ ದೇವಳದ ಸಭಾಂಗಣದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬ್ರಹ್ಮಕಲಶೋತ್ಸವಕ್ಕಾಗಿ 20 ಸಮಿತಿಗಳನ್ನು ರಚಿಸಲಾಗಿದೆ ಎಂದರು.</p>.<p>ಕೆ.ಪ್ರಕಾಶ್ ಶೆಟ್ಟಿ ಮತ್ತು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಜಂಟಿಯಾಗಿ ಅವರು ಶ್ರೀ ದೇವಳದ ಬ್ರಹ್ಮಕಲಶೋತ್ಸವದ ಲೋಗೋ ಬಿಡುಗಡೆಗೊಳಿಸಿದರು.</p>.<p>ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ದೇವಳದ ಸರ್ವ ಕಾರ್ಯಗಳಿಗೆ ಸಹಕಾರ ನೀಡಲು ಬದ್ಧನಿದ್ದೇನೆ ಎಂದರು.</p>.<p>ಹೊರೆಕಾಣಿಕೆ ಮೆರವಣಿಗೆ ಸಮಿತಿಯ ಸಂಚಾಲಕ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಎಪ್ರಿಲ್ 26ರಂದು ನಡೆಯಲಿರುವ ಹೊರೆ ಕಾಣಿಕೆ ಮೆರವಣಿಗೆಯ ಮಾಹಿತಿ ನೀಡಿದರು.</p>.<p>ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುರಳೀನಾಥ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ನಟರಾಜ್ ಪಿ.ಎಸ್. ಮಾತನಾಡಿದರು.</p>.<p>ದೇವಳದ ಆನುವಂಶಿಕ ಮೊಕ್ತೇಸರರಾದ ರತ್ನಾಕರರಾಜ್ ಅರಸು ಕಿನ್ಯಕ್ಕ ಬಲ್ಲಾಳರು, ಪಡುಬಿದ್ರಿ ಪೇಟೆಮನೆ ಭವಾನಿಶಂಕರ್ ಹೆಗ್ಡೆ , ಜೀರ್ಣೊದ್ದಾರ ಸಮಿತಿಯ ಗೌರವಾಧ್ಯಕ್ಷ ಕೊರ್ನಾಯ ಪದ್ಮನಾಭ ರಾವ್, ಕಾರ್ಯನಿರ್ವಹಣಾಧಿಕಾರಿ ರಾಜಗೋಪಾಲ ಉಪಾಧ್ಯಾಯ, ಅರ್ಚಕ ಗುರುರಾಜ ಭಟ್ ಎರ್ಮಾಳು, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಪಿ.ರವೀಂದ್ರನಾಥ ಜಿ.ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಪಿ.ಆರ್.ನಾವಡ, ಕಾರ್ಯದರ್ಶಿಗಳಾದ ಶ್ರೀನಾಥ್ ಹೆಗ್ಡೆ , ವೈ.ಸುಕುಮಾರ್ ಉಪಸ್ಥಿತರಿದ್ದರು.</p>.<p>ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ನವೀನ್ಚಂದ್ರ ಜೆ.ಶೆಟ್ಟಿ ಸ್ವಾಗತಿಸಿದರು. ಪಿ.ಶ್ರೀಧರ ಆಚಾರ್ ನಿರೂಪಿಸಿದರು. ವೈ.ಸುಕುಮಾರ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-28-2014971765</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಡುಬಿದ್ರಿ: ಸುಮಾರು ₹30 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಳ್ಳುತ್ತಿರುವ ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಪುನರ್ ಪ್ರತಿಷ್ಠೆ ಹಾಗೂ ವೈಭವದ ಬ್ರಹ್ಮಕಲಶೋತ್ಸವವು ಎಪ್ರಿಲ್ 23ರಿಂದ ಮೇ 4ರವರೆಗೆ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ.</p>.<p>ಪಡುಬಿದ್ರಿ ಶ್ರೀ ಲಕ್ಷ್ಮೀ ನಾರಾಯಣ ದೇವಳದ ಸಭಾಂಗಣದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬ್ರಹ್ಮಕಲಶೋತ್ಸವಕ್ಕಾಗಿ 20 ಸಮಿತಿಗಳನ್ನು ರಚಿಸಲಾಗಿದೆ ಎಂದರು.</p>.<p>ಕೆ.ಪ್ರಕಾಶ್ ಶೆಟ್ಟಿ ಮತ್ತು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಜಂಟಿಯಾಗಿ ಅವರು ಶ್ರೀ ದೇವಳದ ಬ್ರಹ್ಮಕಲಶೋತ್ಸವದ ಲೋಗೋ ಬಿಡುಗಡೆಗೊಳಿಸಿದರು.</p>.<p>ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ದೇವಳದ ಸರ್ವ ಕಾರ್ಯಗಳಿಗೆ ಸಹಕಾರ ನೀಡಲು ಬದ್ಧನಿದ್ದೇನೆ ಎಂದರು.</p>.<p>ಹೊರೆಕಾಣಿಕೆ ಮೆರವಣಿಗೆ ಸಮಿತಿಯ ಸಂಚಾಲಕ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಎಪ್ರಿಲ್ 26ರಂದು ನಡೆಯಲಿರುವ ಹೊರೆ ಕಾಣಿಕೆ ಮೆರವಣಿಗೆಯ ಮಾಹಿತಿ ನೀಡಿದರು.</p>.<p>ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುರಳೀನಾಥ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ನಟರಾಜ್ ಪಿ.ಎಸ್. ಮಾತನಾಡಿದರು.</p>.<p>ದೇವಳದ ಆನುವಂಶಿಕ ಮೊಕ್ತೇಸರರಾದ ರತ್ನಾಕರರಾಜ್ ಅರಸು ಕಿನ್ಯಕ್ಕ ಬಲ್ಲಾಳರು, ಪಡುಬಿದ್ರಿ ಪೇಟೆಮನೆ ಭವಾನಿಶಂಕರ್ ಹೆಗ್ಡೆ , ಜೀರ್ಣೊದ್ದಾರ ಸಮಿತಿಯ ಗೌರವಾಧ್ಯಕ್ಷ ಕೊರ್ನಾಯ ಪದ್ಮನಾಭ ರಾವ್, ಕಾರ್ಯನಿರ್ವಹಣಾಧಿಕಾರಿ ರಾಜಗೋಪಾಲ ಉಪಾಧ್ಯಾಯ, ಅರ್ಚಕ ಗುರುರಾಜ ಭಟ್ ಎರ್ಮಾಳು, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಪಿ.ರವೀಂದ್ರನಾಥ ಜಿ.ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಪಿ.ಆರ್.ನಾವಡ, ಕಾರ್ಯದರ್ಶಿಗಳಾದ ಶ್ರೀನಾಥ್ ಹೆಗ್ಡೆ , ವೈ.ಸುಕುಮಾರ್ ಉಪಸ್ಥಿತರಿದ್ದರು.</p>.<p>ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ನವೀನ್ಚಂದ್ರ ಜೆ.ಶೆಟ್ಟಿ ಸ್ವಾಗತಿಸಿದರು. ಪಿ.ಶ್ರೀಧರ ಆಚಾರ್ ನಿರೂಪಿಸಿದರು. ವೈ.ಸುಕುಮಾರ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-28-2014971765</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>