ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವೇಶ ತೀರ್ಥ ಸ್ವಾಮೀಜಿ ಸನ್ಯಾಸ ನಿಷ್ಠೆ, ರಾಷ್ಟ್ರ ನಿಷ್ಠೆ, ಸಾಮಾಜಿಕ ನಿಷ್ಠೆ, ವಿಶಾಲ ಚಿಂತನೆಯನ್ನು ಹೊಂದಿದ್ದಾರೆ. ಇದೇ ಕಾರಣಕ್ಕೆ ಎಲ್ಲೆಡೆ ಅಪಾರ ಭಕ್ತರನ್ನು ಹೊಂದಿದ್ದಾರೆ. ಶಿರೂರು ಶ್ರೀಗಳ ಸಾವಿನ ಪ್ರಕರಣದಲ್ಲಿ ಅನಗತ್ಯವಾಗಿ ಪೇಜಾವರ ಶ್ರೀಗಳ ವಿರುದ್ಧ ಅವಹೇಳನ ಮಾಡುತ್ತಿರುವುದು ಅವರ ಅಭಿಮಾನಿಗಳು ಹಾಗೂ ಭಕ್ತರಿಗೆ ನೋವು ತಂದಿದೆ ಎಂದರು.