ದೇಶಕ್ಕಾಗಿ ಹಗಲಿರುಳು ಶ್ರಮಿಸುವ ಅಪ್ಪಟ ದೇಶಪ್ರೇಮಿ ಮೋದಿ. ದೇಶಕ್ಕಾಗಿ ತಮ್ಮ ಬದುಕನ್ನು ಮುಡುಪಾಗಿಟ್ಟು, ರಾಷ್ಟ್ರ ಚಿಂತನೆಯನ್ನು ಮೈಗೂಡಿಸಿಕೊಂಡಿರುವ ಜನನಾಯಕ. ಕಳೆದ 5 ವರ್ಷಗಳಲ್ಲಿ ಮಾಡಿದ ದೇಶದ ಅಭಿವೃದ್ಧಿ ಕೆಲಸಗಳು, ಜನಪರ ಯೋಜನೆಗಳಿಗೆ ಭಾರತೀಯರು ಪೂರ್ಣ ಬೆಂಬಲ ನೀಡಿದ್ದಾರೆ. ಈ ಬಾರಿ ಅವರಿಗೆ ಇನ್ನಷ್ಟು ಹೆಚ್ಚಿನ ದೇಶಸೇವೆ ಮಾಡುವ ಶಕ್ತಿಯನ್ನು ಶ್ರೀಕೃಷ್ಣ ಮುಖ್ಯಪ್ರಾಣ ದೇವರು ಅನುಗ್ರಹಿಸಲಿ ಎಂದು ಹಾರೈಸಿದ್ದಾರೆ.