ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂತನ ಪ್ರಧಾನಿ ನರೇಂದ್ರ ಮೋದಿಗೆ ಪಲಿಮಾರು ಶ್ರೀಗಳಿಂದ ಶುಭ ಸಂದೇಶ

Last Updated 30 ಮೇ 2019, 15:30 IST
ಅಕ್ಷರ ಗಾತ್ರ

ಉಡುಪಿ: ಕಳೆದ ಐದು ವರ್ಷಗಳಲ್ಲಿ ಭಾರತ ದೇಶದ ಸಂಸ್ಕೃತಿ, ಪರಂಪರೆಯನ್ನು ಪ್ರಪಂಚದ ಉದ್ದಗಲಕ್ಕೂ ಪಸರಿಸಿ, ದೇಶದ ಪಾತಕೆಯನ್ನು ಜಗತ್ತಿನ ಎಲ್ಲಾ ದೇಶಗಳಲ್ಲಿ ಹಾರಿಸಿದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಅಭೂತಪೂರ್ವ ಜಯ ದಾಖಲಿಸಿ ಪ್ರಧಾನಿ ಹುದ್ದೆ ಅಲಂಕರಿಸುತ್ತಿರುವುದು ತುಂಬಾ ಸಂತೋಷದ ವಿಚಾರ ಎಂದು ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಹೇಳಿದ್ದಾರೆ.

ದೇಶಕ್ಕಾಗಿ ಹಗಲಿರುಳು ಶ್ರಮಿಸುವ ಅಪ್ಪಟ ದೇಶಪ್ರೇಮಿ ಮೋದಿ. ದೇಶಕ್ಕಾಗಿ ತಮ್ಮ ಬದುಕನ್ನು ಮುಡುಪಾಗಿಟ್ಟು, ರಾಷ್ಟ್ರ ಚಿಂತನೆಯನ್ನು ಮೈಗೂಡಿಸಿಕೊಂಡಿರುವ ಜನನಾಯಕ. ಕಳೆದ 5 ವರ್ಷಗಳಲ್ಲಿ ಮಾಡಿದ ದೇಶದ ಅಭಿವೃದ್ಧಿ ಕೆಲಸಗಳು, ಜನಪರ ಯೋಜನೆಗಳಿಗೆ ಭಾರತೀಯರು ಪೂರ್ಣ ಬೆಂಬಲ ನೀಡಿದ್ದಾರೆ. ಈ ಬಾರಿ ಅವರಿಗೆ ಇನ್ನಷ್ಟು ಹೆಚ್ಚಿನ ದೇಶಸೇವೆ ಮಾಡುವ ಶಕ್ತಿಯನ್ನು ಶ್ರೀಕೃಷ್ಣ ಮುಖ್ಯಪ್ರಾಣ ದೇವರು ಅನುಗ್ರಹಿಸಲಿ ಎಂದು ಹಾರೈಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT