ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಾದಿತ ರಾಮಮಂದಿರ ಎಂಬ ಪದ ಬಳಸಬೇಡಿ: ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ

ಸಿದ್ದರಾಮಯ್ಯಗೆ ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ ಸಲಹೆ
Last Updated 28 ಫೆಬ್ರುವರಿ 2021, 11:34 IST
ಅಕ್ಷರ ಗಾತ್ರ

ಉಡುಪಿ: ಅಯೋಧ್ಯೆಯ ರಾಮಮಂದಿರ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ಅಂತಿಮ ತೀರ್ಪು ನೀಡಿದ್ದರೂ ವಿವಾದಿತ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ ಎಂಬ ಸಿದ್ದರಾಮಯ್ಯನವರ ಹೇಳಿಕೆ ನಾಚಿಕೆಗೇಡು ಎಂದು ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.

ಭಾನುವಾರ ಪುರಾತತ್ವ ಶಾಸ್ತ್ರಜ್ಞ ಕೆ.ಕೆ.ಮೊಹಮ್ಮದ್ ಅವರಿಗೆ ಡಾ.ಗುರುರಾಜ ಭಟ್‌ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸ್ವಾಮೀಜಿ, ‘ವಿವಾದಿತ ಜಾಗದಲ್ಲಿ ರಾಮಮಂದಿರ ಇತ್ತು ಎಂಬ ಬಗ್ಗೆ ಸಾಕಷ್ಟು ಪುರಾವೆಗಳು ಲಭ್ಯವಾಗಿವೆ. ಸುಪ್ರೀಂಕೋರ್ಟ್‌ನ ಐವರು ನ್ಯಾಯಾಧೀಶರು ಸಹಮತದ ತೀರ್ಪು ನೀಡಿದ್ದಾರೆ. ಇಷ್ಟಾದರೂ ಜಾಗವನ್ನು ವಿವಾದಿತ ಎನ್ನುವುದು ಸರಿಯಲ್ಲ. ರಾಮಮಂದಿರಕ್ಕೆ ದೇಣಿಗೆ ಕೊಡುವುದಿಲ್ಲ ಎಂದು ಹೇಳಲಿ, ಆದರೆ, ‘ವಿವಾದಿತ’ ರಾಮಮಂದಿರಕ್ಕೆ ದೇಣಿಗೆ ಕೊಡುವುದಿಲ್ಲ ಎಂಬ ಶಬ್ಧವನ್ನು ಬಳಸಬಾರದು ಎಂದು ವಿದ್ಯಾಧೀಶ ಸ್ವಾಮೀಜಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT