ಭಾನುವಾರ ಪುರಾತತ್ವ ಶಾಸ್ತ್ರಜ್ಞ ಕೆ.ಕೆ.ಮೊಹಮ್ಮದ್ ಅವರಿಗೆ ಡಾ.ಗುರುರಾಜ ಭಟ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸ್ವಾಮೀಜಿ, ‘ವಿವಾದಿತ ಜಾಗದಲ್ಲಿ ರಾಮಮಂದಿರ ಇತ್ತು ಎಂಬ ಬಗ್ಗೆ ಸಾಕಷ್ಟು ಪುರಾವೆಗಳು ಲಭ್ಯವಾಗಿವೆ. ಸುಪ್ರೀಂಕೋರ್ಟ್ನ ಐವರು ನ್ಯಾಯಾಧೀಶರು ಸಹಮತದ ತೀರ್ಪು ನೀಡಿದ್ದಾರೆ. ಇಷ್ಟಾದರೂ ಜಾಗವನ್ನು ವಿವಾದಿತ ಎನ್ನುವುದು ಸರಿಯಲ್ಲ. ರಾಮಮಂದಿರಕ್ಕೆ ದೇಣಿಗೆ ಕೊಡುವುದಿಲ್ಲ ಎಂದು ಹೇಳಲಿ, ಆದರೆ, ‘ವಿವಾದಿತ’ ರಾಮಮಂದಿರಕ್ಕೆ ದೇಣಿಗೆ ಕೊಡುವುದಿಲ್ಲ ಎಂಬ ಶಬ್ಧವನ್ನು ಬಳಸಬಾರದು ಎಂದು ವಿದ್ಯಾಧೀಶ ಸ್ವಾಮೀಜಿ ಹೇಳಿದರು.