‘ಬಳಿಕ ರೋಗಿಗೆ ದಿಂಬು, ಬೆಡ್ಶೀಟ್, ಬಿಸಿನೀರು, ತಿಂಡಿ, ಊಟದ ವ್ಯವಸ್ಥೆ ಮಾಡಬೇಕು. ಎಲ್ಲಕಿಂತ ಮುಖ್ಯವಾಗಿ ಅವರ ಮನಸ್ಸಿನಲ್ಲಿ ಕೊರೊನಾ ಬಗ್ಗೆ ತುಂಬಿರುವ ಆತಂಕ ದೂರ ಮಾಡಲು ಯತ್ನಿಸುತ್ತೇನೆ. ಊರು, ವೃತ್ತಿ ಹಾಗೂ ಇತರ ವಿಚಾರಗಳ ಬಗ್ಗೆ ಮಾತನಾಡುತ್ತಲೇ ಅವರ ಅಗತ್ಯತೆಗಳನ್ನು ಅರಿತು, ಪೂರೈಸುವ ಕೆಲಸ ಮಾಡುತ್ತೇನೆ’ ಎಂದರು ಪರಶುರಾಮ್.