<p><strong>ಉಡುಪಿ:</strong> ‘ಕಾರ್ಕಳದ ಪ್ರಸಿದ್ಧಿಗೆ ಕಲಶಪ್ರಾಯವಾಗಬೇಕಿದ್ದ ಪರಶುರಾಮ ಥೀಮ್ ಪಾರ್ಕ್ ಶಾಸಕ ಸುನಿಲ್ ಕುಮಾರ್ ಅವರ ರಾಜಕೀಯ ಹಿತಾಸಕ್ತಿಗೆ ಬಲಿಯಾಗಿದೆ. ಬೈಲೂರಿನಲ್ಲಿ ಅಸಲಿ ಕಂಚಿನ ಮೂರ್ತಿ ನಿರ್ಮಾಣವಾಗಬೇಕು’ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಆಗ್ರಹಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಜನರ ನಂಬಿಕೆ ಉಳಿಯಬೇಕಾದರೆ ಅಲ್ಲಿ ಮತ್ತೆ ಪರಶುರಾಮ ಮೂರ್ತಿ ನಿರ್ಮಾಣವಾಗುವುದು ಅನಿವಾರ್ಯವಾಗಿದೆ. ಈ ಕಾರಣಕ್ಕೆ ಮೂರ್ತಿ ಪುನರ್ ನಿರ್ಮಾಣ ಕೋರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದೇನೆ’ ಎಂದರು.</p>.<p>‘ನಾನು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದರಿಂದ ಶಾಸಕರು ಆತಂಕಕ್ಕೆ ಒಳಗಾಗಿದ್ದಾರೆ. ಅದಕ್ಕಾಗಿ ಅರ್ಜಿಗೆ ವಿನಾಕಾರಣ ವಿರೋಧ ವ್ಯಕ್ತಪಡಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಚುನಾವಣೆಯಲ್ಲಿ ಗೆಲ್ಲಬೇಕು ಎನ್ನುವ ದುರಾಲೋಚನೆಯಿಂದ ಶಾಸಕರು ಪರಶುರಾಮ ಮೂರ್ತಿ ನಿರ್ಮಾಣ ಮಾಡಿ ಕಾರ್ಕಳದ ಜನತೆಗೆ ಮತ್ತು ಸರ್ಕಾರಕ್ಕೆ ಮೋಸ ಮಾಡಿದ್ದಾರೆ’ ಎಂದರು.</p>.<p>‘ಕಂಚಿನ ಮೂರ್ತಿ ನಿರ್ಮಾಣ ಮಾಡುತ್ತೇನೆಂದು ಜನತೆಗೆ ಮಾತು ನೀಡಿದ್ದ ಶಾಸಕರು, ಕಂಚಿನಿಂದ ಮೂರ್ತಿ ನಿರ್ಮಿಸದೆ ಫೈಬರ್ ಮತ್ತಿತರ ವಸ್ತುಗಳಿಂದ ನಿರ್ಮಾಣ ಮಾಡಿರುವುದು ಜನರಿಗೆ ಎಸಗಿದ ದ್ರೋಹ’ ಎಂದಿದ್ದಾರೆ.</p>.<p>‘ಕಂಚಿನಿಂದಲೇ ಪ್ರತಿಮೆ ನಿರ್ಮಾಣ ಮಾಡಲಾಗಿದೆ ಎಂದು ಶಾಸಕರು ಸಮರ್ಥನೆ ಮಾಡುತ್ತಾ ಬಂದಿದ್ದಾರೆ. ಆದರೆ ಪೊಲೀಸರು ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಮೂರ್ತಿ ಕಂಚಿನದ್ದಲ್ಲ ಎಂಬ ವಿಚಾರ ಬಹಿರಂಗವಾಗಿದೆ’ ಎಂದು ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಕೃಷ್ಣಮೂರ್ತಿ ಆಚಾರ್ಯ, ಸೂರಜ್ ಶೆಟ್ಟಿ, ಸುಬಿತ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ‘ಕಾರ್ಕಳದ ಪ್ರಸಿದ್ಧಿಗೆ ಕಲಶಪ್ರಾಯವಾಗಬೇಕಿದ್ದ ಪರಶುರಾಮ ಥೀಮ್ ಪಾರ್ಕ್ ಶಾಸಕ ಸುನಿಲ್ ಕುಮಾರ್ ಅವರ ರಾಜಕೀಯ ಹಿತಾಸಕ್ತಿಗೆ ಬಲಿಯಾಗಿದೆ. ಬೈಲೂರಿನಲ್ಲಿ ಅಸಲಿ ಕಂಚಿನ ಮೂರ್ತಿ ನಿರ್ಮಾಣವಾಗಬೇಕು’ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಆಗ್ರಹಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಜನರ ನಂಬಿಕೆ ಉಳಿಯಬೇಕಾದರೆ ಅಲ್ಲಿ ಮತ್ತೆ ಪರಶುರಾಮ ಮೂರ್ತಿ ನಿರ್ಮಾಣವಾಗುವುದು ಅನಿವಾರ್ಯವಾಗಿದೆ. ಈ ಕಾರಣಕ್ಕೆ ಮೂರ್ತಿ ಪುನರ್ ನಿರ್ಮಾಣ ಕೋರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದೇನೆ’ ಎಂದರು.</p>.<p>‘ನಾನು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದರಿಂದ ಶಾಸಕರು ಆತಂಕಕ್ಕೆ ಒಳಗಾಗಿದ್ದಾರೆ. ಅದಕ್ಕಾಗಿ ಅರ್ಜಿಗೆ ವಿನಾಕಾರಣ ವಿರೋಧ ವ್ಯಕ್ತಪಡಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಚುನಾವಣೆಯಲ್ಲಿ ಗೆಲ್ಲಬೇಕು ಎನ್ನುವ ದುರಾಲೋಚನೆಯಿಂದ ಶಾಸಕರು ಪರಶುರಾಮ ಮೂರ್ತಿ ನಿರ್ಮಾಣ ಮಾಡಿ ಕಾರ್ಕಳದ ಜನತೆಗೆ ಮತ್ತು ಸರ್ಕಾರಕ್ಕೆ ಮೋಸ ಮಾಡಿದ್ದಾರೆ’ ಎಂದರು.</p>.<p>‘ಕಂಚಿನ ಮೂರ್ತಿ ನಿರ್ಮಾಣ ಮಾಡುತ್ತೇನೆಂದು ಜನತೆಗೆ ಮಾತು ನೀಡಿದ್ದ ಶಾಸಕರು, ಕಂಚಿನಿಂದ ಮೂರ್ತಿ ನಿರ್ಮಿಸದೆ ಫೈಬರ್ ಮತ್ತಿತರ ವಸ್ತುಗಳಿಂದ ನಿರ್ಮಾಣ ಮಾಡಿರುವುದು ಜನರಿಗೆ ಎಸಗಿದ ದ್ರೋಹ’ ಎಂದಿದ್ದಾರೆ.</p>.<p>‘ಕಂಚಿನಿಂದಲೇ ಪ್ರತಿಮೆ ನಿರ್ಮಾಣ ಮಾಡಲಾಗಿದೆ ಎಂದು ಶಾಸಕರು ಸಮರ್ಥನೆ ಮಾಡುತ್ತಾ ಬಂದಿದ್ದಾರೆ. ಆದರೆ ಪೊಲೀಸರು ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಮೂರ್ತಿ ಕಂಚಿನದ್ದಲ್ಲ ಎಂಬ ವಿಚಾರ ಬಹಿರಂಗವಾಗಿದೆ’ ಎಂದು ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಕೃಷ್ಣಮೂರ್ತಿ ಆಚಾರ್ಯ, ಸೂರಜ್ ಶೆಟ್ಟಿ, ಸುಬಿತ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>