<p><strong>ಉಡುಪಿ:</strong> ‘ಕಾರ್ಕಳದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ನಿಂದ ತಾಮ್ರದ ಹೊದಿಕೆ ಕಳವಾಗಿರುವ ಪ್ರಕರಣವು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಇದು ಶಾಸಕ ಸುನಿಲ್ ಕುಮಾರ್ ಮಾಡಿದ ಸಂಚಾಗಿರಬಹುದು’ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಆರೋಪಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುವ ಮೊದಲೇ ಸುನಿಲ್ ಕುಮಾರ್ ಅವರು ತಮ್ಮ ಫೇಸ್ಬುಕ್ ಖಾತೆಯ ಮೂಲಕ ಕಳ್ಳತನವಾಗಿರುವ ಕುರಿತು ಮಾಹಿತಿ ಹಂಚಿಕೊಂಡಿದ್ದು ಹೇಗೆ? ಪ್ರಥಮ ಮಾಹಿತಿ ಅವರಿಗೆ ಹೇಗೆ ಸಿಕ್ಕಿತು’ ಎಂದು ಅವರು ಪ್ರಶ್ನಿಸಿದರು.</p>.<p>‘ಮರುದಿನ ಶಾಸಕರು ಮತ್ತು ತಂಡ ಪರಶುರಾಮ ಮೂರ್ತಿ ಇರುವ ಬೆಟ್ಟಕ್ಕೆ ಹೋಗಿ ಮಾಧ್ಯಮದವರ ಜೊತೆ ಮಾತನಾಡಿರುವ ವಿಚಾರಗಳನ್ನು ಗಮನಿಸಿದರೆ ಇದು ಪೂರ್ವಯೋಜಿತ ಕೃತ್ಯ ಎನ್ನುವುದು ದೃಢವಾಗುತ್ತದೆ’ ಎಂದರು.</p>.<p>‘ಬೆಟ್ಟದ ಸಭಾಂಗಣವೊಂದರಲ್ಲಿ ಲಕ್ಷಾಂತರ ಮೌಲ್ಯದ ಸೊತ್ತುಗಳಿದ್ದರೂ ಅದನ್ನು ಬಿಟ್ಟು, ಕಟ್ಟಡದ ಮೇಲ್ಚಾವಣಿಗೆ ಹಾಕಿದ 30 ತಾಮ್ರದ ತಗಡುಗಳನ್ನು ಕಳವು ಮಾಡಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ’ ಎಂದು ಹೇಳಿದ್ದಾರೆ.</p>.<p>‘ಪರಶುರಾಮ ಥೀಮ್ ಪಾರ್ಕ್ ಪ್ರವಾಸಿ ಕೇಂದ್ರವಾಗಬೇಕು ಎಂಬ ಉದ್ದೇಶದಿಂದ ನಾನು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದೇನೆ. ಮತ್ತು ₹5 ಲಕ್ಷ ಪಾವತಿಸಿದ್ದೇನೆ’ ಎಂದರು.</p>.<p>‘ಥೀಮ್ ಪಾರ್ಕ್ ಯೋಜನೆಯನ್ನು ಆರಂಭಿಸುವಾಗಲೇ ಸುನಿಲ್ ಕುಮಾರ್ ಅವರು ಪ್ರಮಾಣಿಕವಾಗಿ ಪ್ರತಿಮೆ ನಿರ್ಮಿಸಿದ್ದರೆ, ಇಂದು ಇಂತಹ ದುಃಸ್ಥಿತಿ ಬರುತ್ತಿರಲಿಲ್ಲ’ ಎಂದು ತಿಳಿಸಿದರು.</p>.<p>‘ಥೀಮ್ ಪಾರ್ಕ್ನಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಸಬೇಕೆಂದು ಹೋರಾಟಗಾರರು ಜಿಲ್ಲಾಡಳಿತಕ್ಕೆ ಮನವಿ ಮಾಡಿದರೂ, ಅಳವಡಿಸದಿರುವುದು ಜಿಲ್ಲಾಡಳಿತದ ಬೇಜವಾಬ್ದಾರಿಯಾಗಿದೆ’ ಎಂದು ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಶುಭದ್ ರಾವ್, ಗೋಪಿನಾಥ್ ಭಟ್, ಭಾನು ಭಾಸ್ಕರ್ ಪೂಜಾರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ‘ಕಾರ್ಕಳದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ನಿಂದ ತಾಮ್ರದ ಹೊದಿಕೆ ಕಳವಾಗಿರುವ ಪ್ರಕರಣವು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಇದು ಶಾಸಕ ಸುನಿಲ್ ಕುಮಾರ್ ಮಾಡಿದ ಸಂಚಾಗಿರಬಹುದು’ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಆರೋಪಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುವ ಮೊದಲೇ ಸುನಿಲ್ ಕುಮಾರ್ ಅವರು ತಮ್ಮ ಫೇಸ್ಬುಕ್ ಖಾತೆಯ ಮೂಲಕ ಕಳ್ಳತನವಾಗಿರುವ ಕುರಿತು ಮಾಹಿತಿ ಹಂಚಿಕೊಂಡಿದ್ದು ಹೇಗೆ? ಪ್ರಥಮ ಮಾಹಿತಿ ಅವರಿಗೆ ಹೇಗೆ ಸಿಕ್ಕಿತು’ ಎಂದು ಅವರು ಪ್ರಶ್ನಿಸಿದರು.</p>.<p>‘ಮರುದಿನ ಶಾಸಕರು ಮತ್ತು ತಂಡ ಪರಶುರಾಮ ಮೂರ್ತಿ ಇರುವ ಬೆಟ್ಟಕ್ಕೆ ಹೋಗಿ ಮಾಧ್ಯಮದವರ ಜೊತೆ ಮಾತನಾಡಿರುವ ವಿಚಾರಗಳನ್ನು ಗಮನಿಸಿದರೆ ಇದು ಪೂರ್ವಯೋಜಿತ ಕೃತ್ಯ ಎನ್ನುವುದು ದೃಢವಾಗುತ್ತದೆ’ ಎಂದರು.</p>.<p>‘ಬೆಟ್ಟದ ಸಭಾಂಗಣವೊಂದರಲ್ಲಿ ಲಕ್ಷಾಂತರ ಮೌಲ್ಯದ ಸೊತ್ತುಗಳಿದ್ದರೂ ಅದನ್ನು ಬಿಟ್ಟು, ಕಟ್ಟಡದ ಮೇಲ್ಚಾವಣಿಗೆ ಹಾಕಿದ 30 ತಾಮ್ರದ ತಗಡುಗಳನ್ನು ಕಳವು ಮಾಡಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ’ ಎಂದು ಹೇಳಿದ್ದಾರೆ.</p>.<p>‘ಪರಶುರಾಮ ಥೀಮ್ ಪಾರ್ಕ್ ಪ್ರವಾಸಿ ಕೇಂದ್ರವಾಗಬೇಕು ಎಂಬ ಉದ್ದೇಶದಿಂದ ನಾನು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದೇನೆ. ಮತ್ತು ₹5 ಲಕ್ಷ ಪಾವತಿಸಿದ್ದೇನೆ’ ಎಂದರು.</p>.<p>‘ಥೀಮ್ ಪಾರ್ಕ್ ಯೋಜನೆಯನ್ನು ಆರಂಭಿಸುವಾಗಲೇ ಸುನಿಲ್ ಕುಮಾರ್ ಅವರು ಪ್ರಮಾಣಿಕವಾಗಿ ಪ್ರತಿಮೆ ನಿರ್ಮಿಸಿದ್ದರೆ, ಇಂದು ಇಂತಹ ದುಃಸ್ಥಿತಿ ಬರುತ್ತಿರಲಿಲ್ಲ’ ಎಂದು ತಿಳಿಸಿದರು.</p>.<p>‘ಥೀಮ್ ಪಾರ್ಕ್ನಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಸಬೇಕೆಂದು ಹೋರಾಟಗಾರರು ಜಿಲ್ಲಾಡಳಿತಕ್ಕೆ ಮನವಿ ಮಾಡಿದರೂ, ಅಳವಡಿಸದಿರುವುದು ಜಿಲ್ಲಾಡಳಿತದ ಬೇಜವಾಬ್ದಾರಿಯಾಗಿದೆ’ ಎಂದು ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಶುಭದ್ ರಾವ್, ಗೋಪಿನಾಥ್ ಭಟ್, ಭಾನು ಭಾಸ್ಕರ್ ಪೂಜಾರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>