<p><strong>ಹೆಬ್ರಿ: </strong>ಇಲ್ಲಿನ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದಲ್ಲಿ ಪೋಷಕರ ಸಭೆ ಮತ್ತು ಸನ್ಮಾನ ಸಮಾರಂಭ ಸೋಮವಾರ ನಡೆಯಿತು.</p>.<p>‘ಸತತ ಪರಿಶ್ರಮ, ಛಲ ಇದ್ದಲ್ಲಿ ಯಶಸ್ಸು ಸುಲಭವಾಗಿ ಕೈಗೆಟಕುತ್ತದೆ’ ಎಂದು ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ಶಶಿಧರ್ ಹೇಳಿದರು.</p>.<p>2018-19ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಿತ್ಯಶ್ರೀ, ಪವಿತ್ರಾ ಹಾಗೂ ಮಹಿಮಾ ನಾಯಕ್ ಅವರನ್ನು ಸನ್ಮಾನಿಸಲಾಯಿತು. ವಿಷಯವಾರು ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.</p>.<p>ಅಮೃತ ಭಾರತಿ ವಿದ್ಯಾಲಯದ ಅಧ್ಯಕ್ಷ ಶೈಲೇಶ್ ಕಿಣಿ, ಅಮೃತ ಭಾರತಿ ಟ್ರಸ್ಟ್ ಕಾರ್ಯದರ್ಶಿ ಗುರುದಾಸ್ ಶೆಣೈ, ಯೋಗೀಶ್ ಭಟ್, ಮುಖ್ಯಶಿಕ್ಷಕಿ ಅಪರ್ಣಾ ಆಚಾರ್ ಇದ್ದರು. ಮಹೇಶ್ ಹೈಕಾಡಿ ನಿರೂಪಿಸಿದರು. ಶ್ವೇತಾ ನಾಯಕ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಬ್ರಿ: </strong>ಇಲ್ಲಿನ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದಲ್ಲಿ ಪೋಷಕರ ಸಭೆ ಮತ್ತು ಸನ್ಮಾನ ಸಮಾರಂಭ ಸೋಮವಾರ ನಡೆಯಿತು.</p>.<p>‘ಸತತ ಪರಿಶ್ರಮ, ಛಲ ಇದ್ದಲ್ಲಿ ಯಶಸ್ಸು ಸುಲಭವಾಗಿ ಕೈಗೆಟಕುತ್ತದೆ’ ಎಂದು ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ಶಶಿಧರ್ ಹೇಳಿದರು.</p>.<p>2018-19ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಿತ್ಯಶ್ರೀ, ಪವಿತ್ರಾ ಹಾಗೂ ಮಹಿಮಾ ನಾಯಕ್ ಅವರನ್ನು ಸನ್ಮಾನಿಸಲಾಯಿತು. ವಿಷಯವಾರು ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.</p>.<p>ಅಮೃತ ಭಾರತಿ ವಿದ್ಯಾಲಯದ ಅಧ್ಯಕ್ಷ ಶೈಲೇಶ್ ಕಿಣಿ, ಅಮೃತ ಭಾರತಿ ಟ್ರಸ್ಟ್ ಕಾರ್ಯದರ್ಶಿ ಗುರುದಾಸ್ ಶೆಣೈ, ಯೋಗೀಶ್ ಭಟ್, ಮುಖ್ಯಶಿಕ್ಷಕಿ ಅಪರ್ಣಾ ಆಚಾರ್ ಇದ್ದರು. ಮಹೇಶ್ ಹೈಕಾಡಿ ನಿರೂಪಿಸಿದರು. ಶ್ವೇತಾ ನಾಯಕ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>