<p><strong>ಉಡುಪಿ</strong>: ಪ್ರಧಾನಮಂತ್ರಿಗಳ ‘ಪರೀಕ್ಷಾ ಪೇ ಚರ್ಚಾ’ ವರ್ಚುವಲ್ ಆವೃತ್ತಿಯ ಸಂವಾದ ಕಾರ್ಯಕ್ರಮ ಏ.7ರಂದು ರಾತ್ರಿ 7ಕ್ಕೆ ಕುಂದಾಪುರ ತಾಲ್ಲೂಕಿನ ಅಲ್ಬಾಡಿ ಆರ್ಡಿಯ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.</p>.<p>ಶಾಲೆಯ ವಿದ್ಯಾರ್ಥಿನಿ ಅನುಷಾ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ. ಕಾರ್ಯಕ್ರಮದ ನೇರ ಪ್ರಸಾರ ಟಿವಿ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರವಾಗಲಿದೆ. http//education.gov.in ವೆಬ್ಸೈಟ್ನಲ್ಲಿಯೂ ವೀಕ್ಷಣೆ ಮಾಡಲು ಅವಕಾಶವಿದ್ದು, ಜಿಲ್ಲೆಯ 6ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳು ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ಪ್ರೋತ್ಸಾಹಿಸುವಂತೆ ಡಿಡಿಪಿಐ ಎನ್.ಎಚ್.ನಾಗೂರ ಎಲ್ಲ ತಾಲ್ಲೂಕುಗಳ ಬಿಇಒಗಳಿಗೆ ಸೂಚನೆ ನೀಡಿದ್ದಾರೆ.</p>.<p>ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ನೀಡುವ ಸಲಹೆ, ಸೂಚನೆ ಹಾಗೂ ಮಾರ್ಗದರ್ಶನವನ್ನು ಶಾಲೆಗಳಲ್ಲಿ ಅನುಷ್ಠಾನಗೊಳಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.</p>.<p>ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ಪೂರ್ವಭಾವಿಯಾಗಿ ಮಂಗಳವಾರ ಅಲ್ಬಾಡಿ ಆರ್ಡಿಯ ಶಾಲೆಗೆ ಭೇಟಿನೀಡಿದ ಡಿಡಿಪಿಐ ನಾಗೂರ, ವಿದ್ಯಾರ್ಥಿನಿ ಅನುಷಾ ಜತೆ ಚರ್ಚಿಸಿದರು. ಇದೇವೇಳೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅಧ್ಯಯನ ಕ್ರಮ ಹಾಗೂ ಶಿಕ್ಷಣದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಸಲಹೆಗಳನ್ನು ನೀಡಿದರು.</p>.<p>ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ 2 ಶಾಲೆಗಳ ವಿದ್ಯಾರ್ಥಿಗಳು ಮಾತ್ರ ಅವಕಾಶ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಪ್ರಧಾನಮಂತ್ರಿಗಳ ‘ಪರೀಕ್ಷಾ ಪೇ ಚರ್ಚಾ’ ವರ್ಚುವಲ್ ಆವೃತ್ತಿಯ ಸಂವಾದ ಕಾರ್ಯಕ್ರಮ ಏ.7ರಂದು ರಾತ್ರಿ 7ಕ್ಕೆ ಕುಂದಾಪುರ ತಾಲ್ಲೂಕಿನ ಅಲ್ಬಾಡಿ ಆರ್ಡಿಯ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.</p>.<p>ಶಾಲೆಯ ವಿದ್ಯಾರ್ಥಿನಿ ಅನುಷಾ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ. ಕಾರ್ಯಕ್ರಮದ ನೇರ ಪ್ರಸಾರ ಟಿವಿ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರವಾಗಲಿದೆ. http//education.gov.in ವೆಬ್ಸೈಟ್ನಲ್ಲಿಯೂ ವೀಕ್ಷಣೆ ಮಾಡಲು ಅವಕಾಶವಿದ್ದು, ಜಿಲ್ಲೆಯ 6ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳು ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ಪ್ರೋತ್ಸಾಹಿಸುವಂತೆ ಡಿಡಿಪಿಐ ಎನ್.ಎಚ್.ನಾಗೂರ ಎಲ್ಲ ತಾಲ್ಲೂಕುಗಳ ಬಿಇಒಗಳಿಗೆ ಸೂಚನೆ ನೀಡಿದ್ದಾರೆ.</p>.<p>ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ನೀಡುವ ಸಲಹೆ, ಸೂಚನೆ ಹಾಗೂ ಮಾರ್ಗದರ್ಶನವನ್ನು ಶಾಲೆಗಳಲ್ಲಿ ಅನುಷ್ಠಾನಗೊಳಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.</p>.<p>ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ಪೂರ್ವಭಾವಿಯಾಗಿ ಮಂಗಳವಾರ ಅಲ್ಬಾಡಿ ಆರ್ಡಿಯ ಶಾಲೆಗೆ ಭೇಟಿನೀಡಿದ ಡಿಡಿಪಿಐ ನಾಗೂರ, ವಿದ್ಯಾರ್ಥಿನಿ ಅನುಷಾ ಜತೆ ಚರ್ಚಿಸಿದರು. ಇದೇವೇಳೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅಧ್ಯಯನ ಕ್ರಮ ಹಾಗೂ ಶಿಕ್ಷಣದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಸಲಹೆಗಳನ್ನು ನೀಡಿದರು.</p>.<p>ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ 2 ಶಾಲೆಗಳ ವಿದ್ಯಾರ್ಥಿಗಳು ಮಾತ್ರ ಅವಕಾಶ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>