ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವೇಶತೀರ್ಥ ಶ್ರೀಗಳ ವೃಂದಾವನ ಸನ್ನಿಧಿಯಲ್ಲಿ ಸಾಧು ಸಂಗಮ ಜುಲೈ 1

Last Updated 28 ಜೂನ್ 2022, 16:21 IST
ಅಕ್ಷರ ಗಾತ್ರ

ಉಡುಪಿ: ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿರುವ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ವೃಂದಾವನ ಸನ್ನಿಧಿಯಲ್ಲಿ ಜುಲೈ 1ರಂದು ಬೆಳಿಗ್ಗೆ 10.30ಕ್ಕೆ ಸಾಧು ಸಂಗಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕರಾವಳಿ ಭಾಗದ ಬೈಲೂರು ಮಠ ರಾಮಕೃಷ್ಣಾಶ್ರಮದ ಸ್ವಾಮಿ ವಿನಾಯಕಾನಂದಜೀ, ಗುರುದೇವ ದತ್ತ ಸಂಸ್ಥಾನ ಒಡಿಯೂರು ಗುರುದೇವಾನಂದ ಸ್ವಾಮೀಜಿ, ಪಡುಕುತ್ಯಾರು ಆನೆಗುಂದಿ ಸರಸ್ವತಿ ಪೀಠದ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ, ಬೆಂಗಳೂರು ಆರ್ಯ ಈಡಿಗ ಸಂಸ್ಥಾನದ ವಿಖ್ಯಾತಾನಂದ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮದ ಮೋಹನದಾಸ ಸ್ವಾಮೀಜಿ, ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಯೋಗಾನಂದ ಸ್ವಾಮೀಜಿ, ಮೂಡಬಿದಿರೆ ಶ್ರೀಕ್ಷೇತ್ರ ಕರಿಂಜದ ಮುಕ್ತಾನಂದ ಸ್ವಾಮೀಜಿ, ಮಂಗಳೂರು ರಾಮಕೃಷ್ಣಾಶ್ರಮದ ಸ್ವಾಮಿ ರಘುರಾಮಾನಂದಜೀ ಧರ್ಮಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪೇಜಾವರ ಮಠದ ವಿಶ್ವಪಸನ್ನ ತೀರ್ಥ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಪೂರ್ಣಪ್ರಜ್ಞ ವಿದ್ಯಾಪೀಠದ ಸಂಶೋಧನಾ ಕೇಂದ್ರದ ನಿರ್ದೇಶಕ ವಿದ್ವಾನ್ ಆನಂದತೀರ್ಥ ನಾಗಸಂಪಿಗೆ, ಪ್ರಾಚಾರ್ಯ ವಿದ್ವಾನ್ ಸತ್ಯನಾರಾಯಣಾಚಾರ್ಯ ಅಭಿವಂದನಾ ಭಾಷಣ ಮಾಡಲಿದ್ದರೆ ಎಂದು ಪೇಜಾವರ ಮಠ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT