<p><strong>ಉಡುಪಿ: </strong>ಪೇಜಾವರ ಮಠದ ಯತಿಗಳಾಗಿದ್ದ ವಿಶ್ವೇಶತೀರ್ಥ ಶ್ರೀಗಳ ಪ್ರಥಮ ಆರಾಧನೆ ಡಿ.17ರಂದು ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ನಡೆಯಲಿದೆ. ವೃಂದಾವನ ಸನ್ನಿಧಾನದಲ್ಲಿ ಪ್ರತಿಷ್ಠೆ ಹಾಗೂ ಮಹಾ ಸಮಾರಾಧನೆ ನಡೆಯಲಿದೆ.</p>.<p>ವಿಶ್ವೇಶತೀರ್ಥರ ಅಪೇಕ್ಷೆಯಂತೆ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಅಂತ್ಯಸಂಸ್ಕಾರ ನಡೆಸಲಾಗಿತ್ತು. ಭವ್ಯ ಶಿಲಾ ವೃಂದಾವನವನ್ನು ನಿರ್ಮಾಣ ಮಾಡಲಾಗಿತ್ತು. ಶ್ರೀಗಳ ಮೆಚ್ಚಿನ ಸ್ಥಳವಾಗಿದ್ದರಿಂದ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿಯೇ ಅವರ ಪ್ರಥಮ ಆರಾಧನೆ ನಡೆಸಲು ಪೇಜಾವರ ಮಠ ನಿರ್ಧರಿಸಿದೆ.</p>.<p>ಮುಂಜಾನೆ ಪ್ರತಿಷ್ಠಾಕಲಶ ಸ್ಥಾಪನೆ, ಹೋಮ, ಕಲಶಾವಾಸ ಹೋಮ, ಕಲಶಾರಾಧನೆ, ಅಷ್ಟಬಂಧ ಹೋಮ, ವಿಷ್ಣುಗಾಯತ್ರಿ ಹೋಮ, ಪಲಿಮಾರು ಮಠದ ವಿದ್ಯಾಧೀಶ ತೀರ್ಥರು ಹಾಗೂ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರಿಂದ ನಾರಾಯಣ ಪ್ರತಿಷ್ಠೆ ನಡೆಯಲಿದೆ.</p>.<p>ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆನ್ಲೈನ್ ಮೂಲಕ ಪ್ರವಚನ ಹಾಗೂ ವಿಶ್ವೇಶ ತೀರ್ಥರ ಕುರಿತ ‘ಯತಿಕುಲ ಚಕ್ರವರ್ತಿ’ ಸ್ಮರಣ ಸಂಚಿಕೆಯೂ ಬಿಡುಗಡೆಯಾಗಲಿದೆ.<br />ಬುಧವಾರ ಪೂರ್ವಾರಾಧನೆ ಪ್ರಯುಕ್ತ ಮಠದಲ್ಲಿ ವಿವಿಧ ಹೋಮಾದಿಗಳು ನಡೆದವು. ಕಳೆದ ವರ್ಷ ಡಿ.29ರಂದು ಪೇಜಾವರ ಶ್ರೀಗಳು ನಿಧನರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಪೇಜಾವರ ಮಠದ ಯತಿಗಳಾಗಿದ್ದ ವಿಶ್ವೇಶತೀರ್ಥ ಶ್ರೀಗಳ ಪ್ರಥಮ ಆರಾಧನೆ ಡಿ.17ರಂದು ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ನಡೆಯಲಿದೆ. ವೃಂದಾವನ ಸನ್ನಿಧಾನದಲ್ಲಿ ಪ್ರತಿಷ್ಠೆ ಹಾಗೂ ಮಹಾ ಸಮಾರಾಧನೆ ನಡೆಯಲಿದೆ.</p>.<p>ವಿಶ್ವೇಶತೀರ್ಥರ ಅಪೇಕ್ಷೆಯಂತೆ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಅಂತ್ಯಸಂಸ್ಕಾರ ನಡೆಸಲಾಗಿತ್ತು. ಭವ್ಯ ಶಿಲಾ ವೃಂದಾವನವನ್ನು ನಿರ್ಮಾಣ ಮಾಡಲಾಗಿತ್ತು. ಶ್ರೀಗಳ ಮೆಚ್ಚಿನ ಸ್ಥಳವಾಗಿದ್ದರಿಂದ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿಯೇ ಅವರ ಪ್ರಥಮ ಆರಾಧನೆ ನಡೆಸಲು ಪೇಜಾವರ ಮಠ ನಿರ್ಧರಿಸಿದೆ.</p>.<p>ಮುಂಜಾನೆ ಪ್ರತಿಷ್ಠಾಕಲಶ ಸ್ಥಾಪನೆ, ಹೋಮ, ಕಲಶಾವಾಸ ಹೋಮ, ಕಲಶಾರಾಧನೆ, ಅಷ್ಟಬಂಧ ಹೋಮ, ವಿಷ್ಣುಗಾಯತ್ರಿ ಹೋಮ, ಪಲಿಮಾರು ಮಠದ ವಿದ್ಯಾಧೀಶ ತೀರ್ಥರು ಹಾಗೂ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರಿಂದ ನಾರಾಯಣ ಪ್ರತಿಷ್ಠೆ ನಡೆಯಲಿದೆ.</p>.<p>ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆನ್ಲೈನ್ ಮೂಲಕ ಪ್ರವಚನ ಹಾಗೂ ವಿಶ್ವೇಶ ತೀರ್ಥರ ಕುರಿತ ‘ಯತಿಕುಲ ಚಕ್ರವರ್ತಿ’ ಸ್ಮರಣ ಸಂಚಿಕೆಯೂ ಬಿಡುಗಡೆಯಾಗಲಿದೆ.<br />ಬುಧವಾರ ಪೂರ್ವಾರಾಧನೆ ಪ್ರಯುಕ್ತ ಮಠದಲ್ಲಿ ವಿವಿಧ ಹೋಮಾದಿಗಳು ನಡೆದವು. ಕಳೆದ ವರ್ಷ ಡಿ.29ರಂದು ಪೇಜಾವರ ಶ್ರೀಗಳು ನಿಧನರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>