ಉಡುಪಿ: ಅಯೋಧ್ಯೆ ಪ್ರವಾಸದಲ್ಲಿರುವ ಪೇಜಾವರ ಮಠದ ಯತಿ ಹಾಗೂ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ವಿಶ್ವಸ್ಥರೂ ಆಗಿರುವ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸೋಮವಾರ ರಾಮಲಲ್ಲಾ ಮೂರ್ತಿಯ ದರ್ಶನ ಪಡೆದು ಚಾಮರಸೇವೆ ಸಲ್ಲಿಸಿದರು.
ದೇವಸ್ಥಾನದ ಪ್ರಧಾನ ಅರ್ಚಕರು ಪೂಜೆ, ಪುನಸ್ಕಾರಗಳ ಬಗ್ಗೆ ಶ್ರೀಗಳಿಗೆ ಮಾಹಿತಿ ನೀಡಿದರು. ಕೆಲಹೊತ್ತು ರಾಮನ ಮುಂದೆ ಪ್ರಾರ್ಥನೆ ಸಲ್ಲಿಸಿದ ಶ್ರೀಗಳು, ಮಂಗಳಾರತಿ ಸ್ವೀಕರಿಸಿದರು. ಬಳಿಕ ಮಂದಿರ ನಿರ್ಮಾಣಕ್ಕಾಗಿ ಸಿದ್ಧಪಡಿಸಿರುವ ಸ್ಥಂಭಗಳನ್ನು ವೀಕ್ಷಿಸಿ, ಟ್ರಸ್ಟ್ ಕಾರ್ಯಾಲಯಕ್ಕೆ ಭೇಟಿ ನೀಡಿದರು.
ಭಾನುವಾರ ಮಂದಿರ ನಿರ್ಮಾಣ ಕಾಮಗಾರಿ ವೀಕ್ಷಿಸಿ, ಸಂಜೆ ನಡೆದ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಸಭೆಯಲ್ಲಿ ಪೇಜಾವರ ಸ್ವಾಮೀಜಿ ಭಾಗವಹಿಸಿದ್ದರು.